<p><strong>ನವದೆಹಲಿ:</strong> ‘ಸುಪ್ರೀಂ ಕೋರ್ಟ್ ಇರುವುದು ಜನಸಾಮಾನ್ಯರಿಗಾಗಿ’ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಶನಿವಾರ ಮಹತ್ವದ ಸಂದೇಶ ರವಾನಿಸಿದರು.</p>.<p>‘ಸಾಮಾನ್ಯ ಕಕ್ಷಿದಾರನಿಗೂ ಸುಪ್ರೀಂನಲ್ಲಿ ಸಮಯ ಮತ್ತು ಸ್ಥಳಾವಕಾಶವಿದೆ. ಅದಕ್ಕಾಗಿ ಆದ್ಯತೆಯ ವಿಷಯಗಳನ್ನು ಪಟ್ಟಿ ಮಾಡುತ್ತಿದ್ದೇವೆ. ನಾನೊಬ್ಬನೇ ಇದನ್ನು ಮಾಡಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳೂ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಕುರಿತು ಏಕೀಕೃತ ರಾಷ್ಟ್ರೀಯ ನ್ಯಾಯಾಂಗ ನೀತಿ ಆಧಾರದಲ್ಲಿ ನಿರ್ಧಾರ ಕೈಗೊಳ್ಳುವುದು ಹಾಗೂ ಕಾಲಮಿತಿಯೊಳಗೆ ಇಂತಹ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸುವುದು ನನ್ನ ಆದ್ಯತೆ’ ಎಂದು ಅವರು ಹೇಳಿದರು.</p>.<p>‘ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗ’ದಲ್ಲಿ ಮಾತನಾಡಿದ ಅವರು, ‘ಕಾನೂನು ಹೋರಾಟಕ್ಕೆ ತಗಲುವ ವೆಚ್ಚವನ್ನು ತಗ್ಗಿಸುವುದು ಮತ್ತು ಪ್ರಕರಣಗಳ ವಿಚಾರಣೆಯನ್ನು ನ್ಯಾಯಸಮ್ಮತವಾದ ಕಾಲಮಿತಿಯೊಳಗೆ ಪೂರ್ಣಗೊಳಿಸುವುದನ್ನು ಖಾತರಿಪಡಿಸುವುದು ನನ್ನ ಆದ್ಯತೆ’ ಎಂದು ಒತ್ತಿ ಹೇಳಿದರು.</p>.<p>‘ಎಲ್ಲ ಪ್ರಕರಣಗಳ ಇತ್ಯರ್ಥವಾಗಬೇಕು ಎಂದು ನಾನು ಹೇಳುತ್ತಿಲ್ಲ; ಅದು ಸಾಧ್ಯವೂ ಇಲ್ಲ. ಏಕೆಂದರೆ ನ್ಯಾಯದಾನವು ಸದಾ ಚಾಲ್ತಿಯಲ್ಲಿರುವ ಇರುವ ಪ್ರಕ್ರಿಯೆ. ಜನರಿಗೆ ನ್ಯಾಯ ವ್ಯವಸ್ಥೆಯ ಬಗ್ಗೆ ನಂಬಿಕೆ ಮತ್ತು ವಿಶ್ವಾಸ ಇದೆ’ ಎಂದು ಹೇಳಿದರು.</p>.<p>‘ಹೊಸದಾಗಿ ಅರ್ಜಿಗಳು ಸಲ್ಲಿಕೆಯಾಗುತ್ತಲೇ ಇರುತ್ತವೆ. ಹಳೆಯ ವ್ಯಾಜ್ಯಗಳೂ ಇರುತ್ತವೆ. ಹೀಗಾಗಿ ಅರ್ಜಿಗಳ ವಿಲೇವಾರಿ ಕಷ್ಟ. ಇಂಥ ಸಂದರ್ಭದಲ್ಲಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಸಾಧ್ಯತೆಯ ಬಗ್ಗೆ ಗಮನಹರಿಸುವುದು ಮುಖ್ಯ. ಈ ಪ್ರಕ್ರಿಯೆಯು ನ್ಯಾಯಾಂಗ ವ್ಯವಸ್ಥೆಯ ಪಾಲಿಗೆ ‘ಗೇಮ್ ಚೇಂಜರ್’ ಆಗಬಹುದು’ ಎಂದು ಅವರು ಅಭಿಪ್ರಾಯಪಟ್ಟರು.</p>.<p>‘ಸುಪ್ರೀಂ ಕೋರ್ಟ್ನಲ್ಲಿ ಮುಂಬರುವ ದಿನಗಳಲ್ಲಿ ಆದ್ಯತೆಯ ಮೇರೆಗೆ ಕೆಲವು ಪ್ರಕರಣಗಳನ್ನು ಕೈಗೆತ್ತಿಕೊಳ್ಳುವುದೂ ಸೇರಿದಂತೆ ಹಲವು ಸುಧಾರಣೆಗಳಾಗುವ ಸಾಧ್ಯತೆ ಇದೆ’ ಎಂದು ತಿಳಿಸಿದರು.</p>.<p>ನ್ಯಾಯಾಂಗದ ಸ್ವತಂತ್ರದ ಕುರಿತು ಮಾತನಾಡಿದ ಅವರು ಅಧಿಕಾರ ವಿಭಜನೆಯ ಸಂವಿಧಾನಾತ್ಮಕ ತತ್ವವನ್ನು ಉಲ್ಲೇಖಿಸಿ, ‘ಸಂವಿಧಾನವು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಪಾತ್ರಗಳನ್ನು ಸುಂದರವಾಗಿ ವಿವರಿಸಿದೆ. ಅಲ್ಲಿ ಒಂದರ ಮೇಲೆ ಇನ್ನೊಂದರ ಅತಿಕ್ರಮಣಕ್ಕೆ ಆಸ್ಪದವೇ ಇಲ್ಲ’ ಎಂದು ತಿಳಿಸಿದರು.</p>.<div><blockquote>ಡಿಜಿಟಲ್ ಅರೆಸ್ಟ್ ಮತ್ತು ಸೈಬರ್ ಅಪರಾಧ ಪ್ರಕರಣಗಳಿಂದಾಗಿ ನ್ಯಾಯಾಂಗ ವ್ಯವಸ್ಥೆಯು ಹೊಸ ಸವಾಲು ಎದುರಿಸುತ್ತಿದೆ. ಇದಕ್ಕಾಗಿ ನ್ಯಾಯಾಂಗ ವ್ಯವಸ್ಥೆಯನ್ನು ಉನ್ನತೀಕರಿಸಬೇಕಾದ ಅಗತ್ಯವಿದೆ</blockquote><span class="attribution"> ಸೂರ್ಯ ಕಾಂತ್ ಸಿಜೆಐ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಸುಪ್ರೀಂ ಕೋರ್ಟ್ ಇರುವುದು ಜನಸಾಮಾನ್ಯರಿಗಾಗಿ’ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಶನಿವಾರ ಮಹತ್ವದ ಸಂದೇಶ ರವಾನಿಸಿದರು.</p>.<p>‘ಸಾಮಾನ್ಯ ಕಕ್ಷಿದಾರನಿಗೂ ಸುಪ್ರೀಂನಲ್ಲಿ ಸಮಯ ಮತ್ತು ಸ್ಥಳಾವಕಾಶವಿದೆ. ಅದಕ್ಕಾಗಿ ಆದ್ಯತೆಯ ವಿಷಯಗಳನ್ನು ಪಟ್ಟಿ ಮಾಡುತ್ತಿದ್ದೇವೆ. ನಾನೊಬ್ಬನೇ ಇದನ್ನು ಮಾಡಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳೂ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಕುರಿತು ಏಕೀಕೃತ ರಾಷ್ಟ್ರೀಯ ನ್ಯಾಯಾಂಗ ನೀತಿ ಆಧಾರದಲ್ಲಿ ನಿರ್ಧಾರ ಕೈಗೊಳ್ಳುವುದು ಹಾಗೂ ಕಾಲಮಿತಿಯೊಳಗೆ ಇಂತಹ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸುವುದು ನನ್ನ ಆದ್ಯತೆ’ ಎಂದು ಅವರು ಹೇಳಿದರು.</p>.<p>‘ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗ’ದಲ್ಲಿ ಮಾತನಾಡಿದ ಅವರು, ‘ಕಾನೂನು ಹೋರಾಟಕ್ಕೆ ತಗಲುವ ವೆಚ್ಚವನ್ನು ತಗ್ಗಿಸುವುದು ಮತ್ತು ಪ್ರಕರಣಗಳ ವಿಚಾರಣೆಯನ್ನು ನ್ಯಾಯಸಮ್ಮತವಾದ ಕಾಲಮಿತಿಯೊಳಗೆ ಪೂರ್ಣಗೊಳಿಸುವುದನ್ನು ಖಾತರಿಪಡಿಸುವುದು ನನ್ನ ಆದ್ಯತೆ’ ಎಂದು ಒತ್ತಿ ಹೇಳಿದರು.</p>.<p>‘ಎಲ್ಲ ಪ್ರಕರಣಗಳ ಇತ್ಯರ್ಥವಾಗಬೇಕು ಎಂದು ನಾನು ಹೇಳುತ್ತಿಲ್ಲ; ಅದು ಸಾಧ್ಯವೂ ಇಲ್ಲ. ಏಕೆಂದರೆ ನ್ಯಾಯದಾನವು ಸದಾ ಚಾಲ್ತಿಯಲ್ಲಿರುವ ಇರುವ ಪ್ರಕ್ರಿಯೆ. ಜನರಿಗೆ ನ್ಯಾಯ ವ್ಯವಸ್ಥೆಯ ಬಗ್ಗೆ ನಂಬಿಕೆ ಮತ್ತು ವಿಶ್ವಾಸ ಇದೆ’ ಎಂದು ಹೇಳಿದರು.</p>.<p>‘ಹೊಸದಾಗಿ ಅರ್ಜಿಗಳು ಸಲ್ಲಿಕೆಯಾಗುತ್ತಲೇ ಇರುತ್ತವೆ. ಹಳೆಯ ವ್ಯಾಜ್ಯಗಳೂ ಇರುತ್ತವೆ. ಹೀಗಾಗಿ ಅರ್ಜಿಗಳ ವಿಲೇವಾರಿ ಕಷ್ಟ. ಇಂಥ ಸಂದರ್ಭದಲ್ಲಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಸಾಧ್ಯತೆಯ ಬಗ್ಗೆ ಗಮನಹರಿಸುವುದು ಮುಖ್ಯ. ಈ ಪ್ರಕ್ರಿಯೆಯು ನ್ಯಾಯಾಂಗ ವ್ಯವಸ್ಥೆಯ ಪಾಲಿಗೆ ‘ಗೇಮ್ ಚೇಂಜರ್’ ಆಗಬಹುದು’ ಎಂದು ಅವರು ಅಭಿಪ್ರಾಯಪಟ್ಟರು.</p>.<p>‘ಸುಪ್ರೀಂ ಕೋರ್ಟ್ನಲ್ಲಿ ಮುಂಬರುವ ದಿನಗಳಲ್ಲಿ ಆದ್ಯತೆಯ ಮೇರೆಗೆ ಕೆಲವು ಪ್ರಕರಣಗಳನ್ನು ಕೈಗೆತ್ತಿಕೊಳ್ಳುವುದೂ ಸೇರಿದಂತೆ ಹಲವು ಸುಧಾರಣೆಗಳಾಗುವ ಸಾಧ್ಯತೆ ಇದೆ’ ಎಂದು ತಿಳಿಸಿದರು.</p>.<p>ನ್ಯಾಯಾಂಗದ ಸ್ವತಂತ್ರದ ಕುರಿತು ಮಾತನಾಡಿದ ಅವರು ಅಧಿಕಾರ ವಿಭಜನೆಯ ಸಂವಿಧಾನಾತ್ಮಕ ತತ್ವವನ್ನು ಉಲ್ಲೇಖಿಸಿ, ‘ಸಂವಿಧಾನವು ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಪಾತ್ರಗಳನ್ನು ಸುಂದರವಾಗಿ ವಿವರಿಸಿದೆ. ಅಲ್ಲಿ ಒಂದರ ಮೇಲೆ ಇನ್ನೊಂದರ ಅತಿಕ್ರಮಣಕ್ಕೆ ಆಸ್ಪದವೇ ಇಲ್ಲ’ ಎಂದು ತಿಳಿಸಿದರು.</p>.<div><blockquote>ಡಿಜಿಟಲ್ ಅರೆಸ್ಟ್ ಮತ್ತು ಸೈಬರ್ ಅಪರಾಧ ಪ್ರಕರಣಗಳಿಂದಾಗಿ ನ್ಯಾಯಾಂಗ ವ್ಯವಸ್ಥೆಯು ಹೊಸ ಸವಾಲು ಎದುರಿಸುತ್ತಿದೆ. ಇದಕ್ಕಾಗಿ ನ್ಯಾಯಾಂಗ ವ್ಯವಸ್ಥೆಯನ್ನು ಉನ್ನತೀಕರಿಸಬೇಕಾದ ಅಗತ್ಯವಿದೆ</blockquote><span class="attribution"> ಸೂರ್ಯ ಕಾಂತ್ ಸಿಜೆಐ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>