<p><strong>ಶಿಮ್ಲಾ:</strong>ಪ್ರವಾಸಿಗರು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುವುದನ್ನುರಾಜ್ಯ ಸರ್ಕಾರವುಬಯಸುತ್ತದೆ. ಆದರೆ, ಅವರು ಕೋವಿಡ್-19 ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಹೇಳಿದ್ದಾರೆ.</p>.<p>ʼಪ್ರೇಕ್ಷಣೀಯ ಪ್ರದೇಶಗಳಾದ ಶಿಮ್ಲಾ, ಮನಾಲಿ, ಧರ್ಮಶಾಲಾಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗಿದೆ. ಹೀಗಾಗಿ ನಾವು ಜನದಟ್ಟಣೆ ನಿಯಂತ್ರಣ ಮತ್ತು ನಿರ್ವಹಣೆ ಸಲುವಾಗಿ ಪೊಲೀಸರನ್ನು ನಿಯೋಜಿಸುವಂತೆ ಜಿಲ್ಲಾಡಳಿತಗಳಿಗೆ ಆದೇಶಿಸಿದ್ದೇವೆʼ ಎಂದು ಠಾಕೂರ್ ಹೇಳಿದ್ದಾರೆ.</p>.<p>ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರದೇಶಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗುತ್ತಿದೆ. ಹೋಟೆಲ್ಗಳ ಕಾರ್ಯನಿರ್ವಹಣೆಗೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸಿಜರ್ (ಎಸ್ಒಪಿ)ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ.ಪ್ರವಾಸಿಗರು ರಾಜ್ಯಕ್ಕೆ ಭೇಟಿ ನೀಡುವುದನ್ನು ಬಯಸುತ್ತೇವೆ. ಆದರೆ, ಅವರೆಲ್ಲ ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸಬೇಕುʼ ಎಂದು ಹೇಳಿದ್ದಾರೆ.</p>.<p>ಪ್ರವಾಸಿತಾಣಗಳು ಕೋವಿಡ್ ಪ್ರಕರಣಗಳ ಏರಿಕೆಗೆ ಕಾರಣವಾಗಬಹುದು ಎಂದುಕೇಂದ್ರ ಸರ್ಕಾರವು ಕಳವಳ ವ್ಯಕ್ತಪಡಿಸಿತ್ತು. ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್ ಅವರು, ಜನರು ಮಾರ್ಗಸೂಚಿಯನ್ನು ಪಾಲಿಸದೆ ಪ್ರವಾಸಿ ತಾಣಗಳಲ್ಲಿ ಕಾಣಿಸಿಕೊಳ್ಳುತ್ತಿರುವ ದೃಶ್ಯಗಳು ಕಳವಳಕ್ಕೆ ಕಾರಣವಾಗಿವೆ ಎಂದು ಈ ತಿಂಗಳ ಆರಂಭದಲ್ಲಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong>ಪ್ರವಾಸಿಗರು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡುವುದನ್ನುರಾಜ್ಯ ಸರ್ಕಾರವುಬಯಸುತ್ತದೆ. ಆದರೆ, ಅವರು ಕೋವಿಡ್-19 ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಹೇಳಿದ್ದಾರೆ.</p>.<p>ʼಪ್ರೇಕ್ಷಣೀಯ ಪ್ರದೇಶಗಳಾದ ಶಿಮ್ಲಾ, ಮನಾಲಿ, ಧರ್ಮಶಾಲಾಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗಿದೆ. ಹೀಗಾಗಿ ನಾವು ಜನದಟ್ಟಣೆ ನಿಯಂತ್ರಣ ಮತ್ತು ನಿರ್ವಹಣೆ ಸಲುವಾಗಿ ಪೊಲೀಸರನ್ನು ನಿಯೋಜಿಸುವಂತೆ ಜಿಲ್ಲಾಡಳಿತಗಳಿಗೆ ಆದೇಶಿಸಿದ್ದೇವೆʼ ಎಂದು ಠಾಕೂರ್ ಹೇಳಿದ್ದಾರೆ.</p>.<p>ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಪ್ರದೇಶಗಳಲ್ಲಿ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗುತ್ತಿದೆ. ಹೋಟೆಲ್ಗಳ ಕಾರ್ಯನಿರ್ವಹಣೆಗೆ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸಿಜರ್ (ಎಸ್ಒಪಿ)ಅಳವಡಿಸಿಕೊಳ್ಳುವಂತೆ ಸೂಚಿಸಲಾಗಿದೆ.ಪ್ರವಾಸಿಗರು ರಾಜ್ಯಕ್ಕೆ ಭೇಟಿ ನೀಡುವುದನ್ನು ಬಯಸುತ್ತೇವೆ. ಆದರೆ, ಅವರೆಲ್ಲ ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸಬೇಕುʼ ಎಂದು ಹೇಳಿದ್ದಾರೆ.</p>.<p>ಪ್ರವಾಸಿತಾಣಗಳು ಕೋವಿಡ್ ಪ್ರಕರಣಗಳ ಏರಿಕೆಗೆ ಕಾರಣವಾಗಬಹುದು ಎಂದುಕೇಂದ್ರ ಸರ್ಕಾರವು ಕಳವಳ ವ್ಯಕ್ತಪಡಿಸಿತ್ತು. ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್ ಅವರು, ಜನರು ಮಾರ್ಗಸೂಚಿಯನ್ನು ಪಾಲಿಸದೆ ಪ್ರವಾಸಿ ತಾಣಗಳಲ್ಲಿ ಕಾಣಿಸಿಕೊಳ್ಳುತ್ತಿರುವ ದೃಶ್ಯಗಳು ಕಳವಳಕ್ಕೆ ಕಾರಣವಾಗಿವೆ ಎಂದು ಈ ತಿಂಗಳ ಆರಂಭದಲ್ಲಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>