<p><strong>ನವದೆಹಲಿ:</strong> ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಯನ್ನು ನಿಯೋಜಿತ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಹೊಸ ಪೀಠವು ಇದೇ 15ರಂದು ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ. </p>.<p>ಆದಾಗ್ಯೂ, ದೇಶದಲ್ಲಿ 39,21,236 ಎಕರೆ ವಕ್ಫ್ ಭೂಮಿ ಇದೆ ಎಂದು ಕೇಂದ್ರ ಸರ್ಕಾರ ನೀಡಿರುವ ಅಂಕಿ ಅಂಶಗಳನ್ನು ಪರಿಗಣಿಸಲಾಗುವುದು ಎಂದು ಪೀಠವು ತಿಳಿಸಿದೆ. ಈ ಅಂಕಿಅಂಶಕ್ಕೆ ಪ್ರತಿವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. </p>.<p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ಪೀಠವು ಸೋಮವಾರ ಪ್ರಕರಣದ ವಿಚಾರಣೆ ನಡೆಸಬೇಕಿತ್ತು. </p>.<p>ಸಂಜೀವ್ ಖನ್ನಾ ಅವರು ಇದೇ 13ರಂದು ನಿವೃತ್ತರಾಗಲಿದ್ದಾರೆ. ಗವಾಯಿ ಅವರು 14ರಂದು ಅಧಿಕಾರ ಸ್ವೀಕರಿಸಲಿದ್ದಾರೆ. </p>.<p>ವಿಚಾರಣೆ ಆರಂಭವಾದ ಕೂಡಲೇ ಸಿಜೆಐ, ‘ನಾವು ಪ್ರಮಾಣಪತ್ರ ಹಾಗೂ ಪ್ರತಿ ಪ್ರಮಾಣಪತ್ರಗಳನ್ನು ಪರಿಶೀಲಿಸಿದ್ದೇವೆ. ಆದರೆ, ಅವುಗಳಿಗೆ ಸ್ಪಷ್ಟೀಕರಣದ ಅಗತ್ಯ ಇದೆ. ಈ ಮಧ್ಯಂತರ ಹಂತದಲ್ಲಿ ಯಾವುದೇ ತೀರ್ಪು ಅಥವಾ ಆದೇಶ ನೀಡಲು ನಾನು ಬಯಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ನಾವು ಕೇಂದ್ರದ ಪ್ರತಿ ಪ್ರಮಾಣಪತ್ರವನ್ನು ಆಳವಾಗಿ ಪರಿಶೀಲಿಸಿಲ್ಲ. ಹೌದು, ನೀವು (ವಕ್ಫ್ ಆಸ್ತಿಗಳ) ನೋಂದಣಿಗೆ ಸಂಬಂಧಿಸಿದಂತೆ ಕೆಲವೊಂದು ವಿಷಯಗಳನ್ನು ಎತ್ತಿದ್ದೀರಿ ಹಾಗೂ ಕೆಲವು ವಿವಾದಾತ್ಮಕ ಅಂಕಿಅಂಶಗಳನ್ನು ನೀಡಿದ್ದೀರಿ. ಅವುಗಳನ್ನು ಸ್ವಲ್ಪ ಪರಿಗಣಿಸುವ ಅಗತ್ಯ ಇದೆ’ ಎಂದು ಸಿಜೆಐ ಹೇಳಿದರು.</p>.<p>‘ಪ್ರತಿಯೊಂದು ವಾದಕ್ಕೂ ಉತ್ತರವಿರುವುದರಿಂದ ನಾವು ನಿಮ್ಮ ಪೀಠದಲ್ಲೇ (ಸಿಜೆಐ) ಮುಂದುವರಿಸಲು ಇಷ್ಟಪಡುತ್ತಿದ್ದೆವು. ಆದರೆ, ಸಮಯವಿಲ್ಲದ ಕಾರಣ ನಾವು ನಿಮ್ಮನ್ನು ಮುಜುಗರಕ್ಕೀಡು ಮಾಡಲು ಸಾಧ್ಯವಿಲ್ಲ’ ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. </p>.<p>‘ನಿಮ್ಮ ನಿವೃತ್ತಿಯ ಬಗ್ಗೆ ನೆನಪಿಸುವುದು ನೋವಿನ ಸಂಗತಿ’ ಎಂದು ಅವರು ಹೇಳಿದರು. </p>.<p>‘ಇಲ್ಲ ಇಲ್ಲ... ನಾನು ನಿವೃತ್ತಿಯನ್ನು ಎದುರು ನೋಡುತ್ತಿದ್ದೇನೆ’ ಎಂದು ಸಿಜೆಐ ಪ್ರತಿಕ್ರಿಯಿಸಿದರು.</p>.<p>‘ಕೇಂದ್ರದ ಪ್ರಮಾಣಪತ್ರ ಸಮಗ್ರವಾಗಿದೆ ಮತ್ತು ಹಿಂದಿನ ವಿಚಾರಣೆ ಸಂದರ್ಭದಲ್ಲಿ ವ್ಯಕ್ತಪಡಿಸಿದ ಕಳವಳಗಳಿಗೆ ಉತ್ತರ ನೀಡುವ ಪ್ರಯತ್ನ ಆಗಿದೆ’ ಎಂದು ಸಿಜೆಐ ಹೇಳಿದರು.</p>.<p>ಏಪ್ರಿಲ್ 17ರ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು, ‘ಕೇಂದ್ರ ವಕ್ಫ್ ಪರಿಷತ್ತು ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಮುಂದಿನ ವಿಚಾರಣೆಯವರೆಗೆ ಯಾವುದೇ ನೇಮಕಾತಿ ನಡೆಸುವುದಿಲ್ಲ ಮತ್ತು ನ್ಯಾಯಾಲಯಗಳು ವಕ್ಫ್ ಎಂದು ಘೋಷಿಸಿರುವ ಆಸ್ತಿಗಳನ್ನು ಡಿ–ನೋಟಿಫೈ ಮಾಡುವುದಿಲ್ಲ’ ಭರವಸೆ ನೀಡಿತ್ತು. </p>.<p>ಏಪ್ರಿಲ್ 25ರಂದು ಸುಪ್ರೀಂ ಕೋರ್ಟ್ಗೆ 1,332 ಪುಟಗಳ ಪ್ರಾಥಮಿಕ ಪ್ರಮಾಣಪತ್ರ ಸಲ್ಲಿಸಿದ್ದ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ‘ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ವಜಾಗೊಳಿಸಬೇಕು’ ಎಂದು ಕೋರಿತ್ತು. ‘ಕಾಯ್ದೆಯಲ್ಲಿನ ಕೆಲ ಅವಕಾಶಗಳ ಕುರಿತು ದುರುದ್ದೇಶದಿಂದ ಕೂಡಿದ ಸುಳ್ಳು ಸಂಕಥನಗಳನ್ನು ಈ ಮೇಲ್ಮನವಿಗಳು ಒಳಗೊಂಡಿವೆ. ಹೀಗಾಗಿ ಕಾಯ್ದೆಯಲ್ಲಿರುವ ಅವಕಾಶಗಳಿಗೆ ತಡೆ ನೀಡಬಾರದು’ ಎಂದೂ ಕೇಂದ್ರ ಸರ್ಕಾರ ಪ್ರತಿಪಾದಿಸಿತ್ತು.</p>.<p>‘ಕಾಯ್ದೆಗೆ ಸಂಬಂಧಿಸಿ ಸಂಪೂರ್ಣ ಅಥವಾ ಭಾಗಶಃ ತಡೆ ನೀಡುವುದರಿಂದ ಆಗುವ ಪರಿಣಾಮಗಳ ಕುರಿತು ಅರಿವು ಇಲ್ಲದೆಯೇ ಇಂತಹ ಯಾವುದೇ ಆದೇಶ ನೀಡುವುದನ್ನು ಒಪ್ಪತಕ್ಕದ್ದಲ್ಲ. ಇಂತಹ ಆದೇಶವು ಮುಸ್ಲಿಂ ಸಮುದಾಯದ ಸದಸ್ಯರ ಮೇಲೂ ಅಡ್ಡ ಪರಿಣಾಮ ಬೀರುತ್ತದೆ’ ಎಂದು ಅಭಿಪ್ರಾಯಪಟ್ಟಿತ್ತು. </p>.<p>‘ವಕ್ಫ್ ತಿದ್ದುಪಡಿ ಕಾಯ್ದೆಯು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂಬ ವಾದದಲ್ಲಿ ಸತ್ಯಾಂಶ ಇಲ್ಲ. ಕಾಯ್ದೆಯು ಮುಸ್ಲಿಂ ಸಮುದಾಯದ ಮುಖ್ಯ ಧಾರ್ಮಿಕ ಪದ್ಧತಿಗಳನ್ನು ಗೌರವಿಸುತ್ತದೆ. ನಂಬಿಕೆ ಮತ್ತು ಪ್ರಾರ್ಥನೆಯಂತಹ ವಿಚಾರಗಳ ಗೊಡವೆಗೆ ಹೋಗಿಲ್ಲ’ ಎಂದು ಸ್ಪಷ್ಟಪಡಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಕ್ಫ್ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆಯನ್ನು ನಿಯೋಜಿತ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಹೊಸ ಪೀಠವು ಇದೇ 15ರಂದು ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ. </p>.<p>ಆದಾಗ್ಯೂ, ದೇಶದಲ್ಲಿ 39,21,236 ಎಕರೆ ವಕ್ಫ್ ಭೂಮಿ ಇದೆ ಎಂದು ಕೇಂದ್ರ ಸರ್ಕಾರ ನೀಡಿರುವ ಅಂಕಿ ಅಂಶಗಳನ್ನು ಪರಿಗಣಿಸಲಾಗುವುದು ಎಂದು ಪೀಠವು ತಿಳಿಸಿದೆ. ಈ ಅಂಕಿಅಂಶಕ್ಕೆ ಪ್ರತಿವಾದಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. </p>.<p>ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ಪೀಠವು ಸೋಮವಾರ ಪ್ರಕರಣದ ವಿಚಾರಣೆ ನಡೆಸಬೇಕಿತ್ತು. </p>.<p>ಸಂಜೀವ್ ಖನ್ನಾ ಅವರು ಇದೇ 13ರಂದು ನಿವೃತ್ತರಾಗಲಿದ್ದಾರೆ. ಗವಾಯಿ ಅವರು 14ರಂದು ಅಧಿಕಾರ ಸ್ವೀಕರಿಸಲಿದ್ದಾರೆ. </p>.<p>ವಿಚಾರಣೆ ಆರಂಭವಾದ ಕೂಡಲೇ ಸಿಜೆಐ, ‘ನಾವು ಪ್ರಮಾಣಪತ್ರ ಹಾಗೂ ಪ್ರತಿ ಪ್ರಮಾಣಪತ್ರಗಳನ್ನು ಪರಿಶೀಲಿಸಿದ್ದೇವೆ. ಆದರೆ, ಅವುಗಳಿಗೆ ಸ್ಪಷ್ಟೀಕರಣದ ಅಗತ್ಯ ಇದೆ. ಈ ಮಧ್ಯಂತರ ಹಂತದಲ್ಲಿ ಯಾವುದೇ ತೀರ್ಪು ಅಥವಾ ಆದೇಶ ನೀಡಲು ನಾನು ಬಯಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ನಾವು ಕೇಂದ್ರದ ಪ್ರತಿ ಪ್ರಮಾಣಪತ್ರವನ್ನು ಆಳವಾಗಿ ಪರಿಶೀಲಿಸಿಲ್ಲ. ಹೌದು, ನೀವು (ವಕ್ಫ್ ಆಸ್ತಿಗಳ) ನೋಂದಣಿಗೆ ಸಂಬಂಧಿಸಿದಂತೆ ಕೆಲವೊಂದು ವಿಷಯಗಳನ್ನು ಎತ್ತಿದ್ದೀರಿ ಹಾಗೂ ಕೆಲವು ವಿವಾದಾತ್ಮಕ ಅಂಕಿಅಂಶಗಳನ್ನು ನೀಡಿದ್ದೀರಿ. ಅವುಗಳನ್ನು ಸ್ವಲ್ಪ ಪರಿಗಣಿಸುವ ಅಗತ್ಯ ಇದೆ’ ಎಂದು ಸಿಜೆಐ ಹೇಳಿದರು.</p>.<p>‘ಪ್ರತಿಯೊಂದು ವಾದಕ್ಕೂ ಉತ್ತರವಿರುವುದರಿಂದ ನಾವು ನಿಮ್ಮ ಪೀಠದಲ್ಲೇ (ಸಿಜೆಐ) ಮುಂದುವರಿಸಲು ಇಷ್ಟಪಡುತ್ತಿದ್ದೆವು. ಆದರೆ, ಸಮಯವಿಲ್ಲದ ಕಾರಣ ನಾವು ನಿಮ್ಮನ್ನು ಮುಜುಗರಕ್ಕೀಡು ಮಾಡಲು ಸಾಧ್ಯವಿಲ್ಲ’ ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು. </p>.<p>‘ನಿಮ್ಮ ನಿವೃತ್ತಿಯ ಬಗ್ಗೆ ನೆನಪಿಸುವುದು ನೋವಿನ ಸಂಗತಿ’ ಎಂದು ಅವರು ಹೇಳಿದರು. </p>.<p>‘ಇಲ್ಲ ಇಲ್ಲ... ನಾನು ನಿವೃತ್ತಿಯನ್ನು ಎದುರು ನೋಡುತ್ತಿದ್ದೇನೆ’ ಎಂದು ಸಿಜೆಐ ಪ್ರತಿಕ್ರಿಯಿಸಿದರು.</p>.<p>‘ಕೇಂದ್ರದ ಪ್ರಮಾಣಪತ್ರ ಸಮಗ್ರವಾಗಿದೆ ಮತ್ತು ಹಿಂದಿನ ವಿಚಾರಣೆ ಸಂದರ್ಭದಲ್ಲಿ ವ್ಯಕ್ತಪಡಿಸಿದ ಕಳವಳಗಳಿಗೆ ಉತ್ತರ ನೀಡುವ ಪ್ರಯತ್ನ ಆಗಿದೆ’ ಎಂದು ಸಿಜೆಐ ಹೇಳಿದರು.</p>.<p>ಏಪ್ರಿಲ್ 17ರ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು, ‘ಕೇಂದ್ರ ವಕ್ಫ್ ಪರಿಷತ್ತು ಮತ್ತು ರಾಜ್ಯ ವಕ್ಫ್ ಮಂಡಳಿಗಳಿಗೆ ಮುಂದಿನ ವಿಚಾರಣೆಯವರೆಗೆ ಯಾವುದೇ ನೇಮಕಾತಿ ನಡೆಸುವುದಿಲ್ಲ ಮತ್ತು ನ್ಯಾಯಾಲಯಗಳು ವಕ್ಫ್ ಎಂದು ಘೋಷಿಸಿರುವ ಆಸ್ತಿಗಳನ್ನು ಡಿ–ನೋಟಿಫೈ ಮಾಡುವುದಿಲ್ಲ’ ಭರವಸೆ ನೀಡಿತ್ತು. </p>.<p>ಏಪ್ರಿಲ್ 25ರಂದು ಸುಪ್ರೀಂ ಕೋರ್ಟ್ಗೆ 1,332 ಪುಟಗಳ ಪ್ರಾಥಮಿಕ ಪ್ರಮಾಣಪತ್ರ ಸಲ್ಲಿಸಿದ್ದ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ‘ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿಗಳನ್ನು ವಜಾಗೊಳಿಸಬೇಕು’ ಎಂದು ಕೋರಿತ್ತು. ‘ಕಾಯ್ದೆಯಲ್ಲಿನ ಕೆಲ ಅವಕಾಶಗಳ ಕುರಿತು ದುರುದ್ದೇಶದಿಂದ ಕೂಡಿದ ಸುಳ್ಳು ಸಂಕಥನಗಳನ್ನು ಈ ಮೇಲ್ಮನವಿಗಳು ಒಳಗೊಂಡಿವೆ. ಹೀಗಾಗಿ ಕಾಯ್ದೆಯಲ್ಲಿರುವ ಅವಕಾಶಗಳಿಗೆ ತಡೆ ನೀಡಬಾರದು’ ಎಂದೂ ಕೇಂದ್ರ ಸರ್ಕಾರ ಪ್ರತಿಪಾದಿಸಿತ್ತು.</p>.<p>‘ಕಾಯ್ದೆಗೆ ಸಂಬಂಧಿಸಿ ಸಂಪೂರ್ಣ ಅಥವಾ ಭಾಗಶಃ ತಡೆ ನೀಡುವುದರಿಂದ ಆಗುವ ಪರಿಣಾಮಗಳ ಕುರಿತು ಅರಿವು ಇಲ್ಲದೆಯೇ ಇಂತಹ ಯಾವುದೇ ಆದೇಶ ನೀಡುವುದನ್ನು ಒಪ್ಪತಕ್ಕದ್ದಲ್ಲ. ಇಂತಹ ಆದೇಶವು ಮುಸ್ಲಿಂ ಸಮುದಾಯದ ಸದಸ್ಯರ ಮೇಲೂ ಅಡ್ಡ ಪರಿಣಾಮ ಬೀರುತ್ತದೆ’ ಎಂದು ಅಭಿಪ್ರಾಯಪಟ್ಟಿತ್ತು. </p>.<p>‘ವಕ್ಫ್ ತಿದ್ದುಪಡಿ ಕಾಯ್ದೆಯು ಮೂಲಭೂತ ಹಕ್ಕುಗಳ ಉಲ್ಲಂಘನೆ ಎಂಬ ವಾದದಲ್ಲಿ ಸತ್ಯಾಂಶ ಇಲ್ಲ. ಕಾಯ್ದೆಯು ಮುಸ್ಲಿಂ ಸಮುದಾಯದ ಮುಖ್ಯ ಧಾರ್ಮಿಕ ಪದ್ಧತಿಗಳನ್ನು ಗೌರವಿಸುತ್ತದೆ. ನಂಬಿಕೆ ಮತ್ತು ಪ್ರಾರ್ಥನೆಯಂತಹ ವಿಚಾರಗಳ ಗೊಡವೆಗೆ ಹೋಗಿಲ್ಲ’ ಎಂದು ಸ್ಪಷ್ಟಪಡಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>