<p><strong>ಲಖನೌ:</strong> ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲವು ನಿಯಮಗಳನ್ನು ಪುರನರ್ ಪರಿಶೀಲನೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಕೋರಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಕಾನೂನನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಬೇಕು ಎಂದು ಹೇಳಿದ್ದಾರೆ.</p>.ವಕ್ಫ್ ಕಾಯ್ದೆಯಲ್ಲಿ ಗಂಭೀರ ಕಾರ್ಯವಿಧಾನದ ಲೋಪ: ಸುಪ್ರೀಂ ಕೋರ್ಟ್ಗೆ ಮಹುವಾ ಅರ್ಜಿ.<p>ವಕ್ಫ್ ಬೋರ್ಡ್ನಲ್ಲಿ ಮುಸ್ಲಿಮರಲ್ಲದವರು ಇರುವುದಕ್ಕೆ ಕಾನೂನಿನಲ್ಲಿ ಅವಕಾಶ ನೀಡಿರುವುದು ಮೇಲ್ನೋಟಕ್ಕೆ ಸರಿ ಕಾಣುವುದಿಲ್ಲ ಎಂದು ಅವರು ಹೇಳಿದ್ದಾರೆ.</p><p>‘ರಾಜ್ಯ ವಕ್ಫ್ ಬೋರ್ಡ್ನಲ್ಲಿ ಮುಸ್ಲಿಮರಲ್ಲದವರನ್ನು ಸದಸ್ಯರನ್ನಾಗಿ ಮಾಡುವುದು ತಪ್ಪು. ಮುಸ್ಲಿಂ ಸಮುದಾಯ ಕೂಡ ಇದನ್ನು ವಿರೋಧಿಸಿದೆ. ಹೀಗಾಗಿ ಕಾನೂನನ್ನು ಮರುಪರಿಶೀಲನೆ ನಡೆಸಿ, ಅಮಾನತುಗೊಳಿಸಿ ಇತರ ವಿವಾದಾತ್ಮಕ ನಿಯಮಗಳನ್ನು ಸುಧಾರಿಸುವುದು ಉತ್ತಮ’ ಎಂದು ಮಾಯಾವತಿ ಹೇಳಿದ್ದಾರೆ.</p>.ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ .<p>ಉಭಯ ಮನೆಗಳಲ್ಲಿ ಭಾರಿ ಚರ್ಚೆಯ ಬಳಿಕ ವಿವಾದಾತ್ಮಕ ವಕ್ಫ್ ಮಸೂದೆಗೆ ಒಪ್ಪಿಗೆ ಲಭಿಸಿತ್ತು. ಲೋಕಸಭೆಯಲ್ಲಿ 288 ಸದಸ್ಯರು ವಕ್ಫ್ ಮಸೂದೆ ಬೆಂಬಲಿಸಿದರೆ, 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು.</p><p>ರಾಜ್ಯಸಭೆಯಲ್ಲಿ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಏಪ್ರಿಲ್ 5 ರಂದು ಮಸೂದೆಗೆ ಒಪ್ಪಿಗೆ ನೀಡಿದರು.</p> .ವಕ್ಫ್ ಮಸೂದೆ | ಸುಪ್ರೀಂ ಕೋರ್ಟ್ಗೆ ಹೋದರೂ ಪ್ರಯೋಜನವಾಗದು: ಕೇಂದ್ರ ಸಚಿವ ವರ್ಮಾ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲವು ನಿಯಮಗಳನ್ನು ಪುರನರ್ ಪರಿಶೀಲನೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಕೋರಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಕಾನೂನನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಬೇಕು ಎಂದು ಹೇಳಿದ್ದಾರೆ.</p>.ವಕ್ಫ್ ಕಾಯ್ದೆಯಲ್ಲಿ ಗಂಭೀರ ಕಾರ್ಯವಿಧಾನದ ಲೋಪ: ಸುಪ್ರೀಂ ಕೋರ್ಟ್ಗೆ ಮಹುವಾ ಅರ್ಜಿ.<p>ವಕ್ಫ್ ಬೋರ್ಡ್ನಲ್ಲಿ ಮುಸ್ಲಿಮರಲ್ಲದವರು ಇರುವುದಕ್ಕೆ ಕಾನೂನಿನಲ್ಲಿ ಅವಕಾಶ ನೀಡಿರುವುದು ಮೇಲ್ನೋಟಕ್ಕೆ ಸರಿ ಕಾಣುವುದಿಲ್ಲ ಎಂದು ಅವರು ಹೇಳಿದ್ದಾರೆ.</p><p>‘ರಾಜ್ಯ ವಕ್ಫ್ ಬೋರ್ಡ್ನಲ್ಲಿ ಮುಸ್ಲಿಮರಲ್ಲದವರನ್ನು ಸದಸ್ಯರನ್ನಾಗಿ ಮಾಡುವುದು ತಪ್ಪು. ಮುಸ್ಲಿಂ ಸಮುದಾಯ ಕೂಡ ಇದನ್ನು ವಿರೋಧಿಸಿದೆ. ಹೀಗಾಗಿ ಕಾನೂನನ್ನು ಮರುಪರಿಶೀಲನೆ ನಡೆಸಿ, ಅಮಾನತುಗೊಳಿಸಿ ಇತರ ವಿವಾದಾತ್ಮಕ ನಿಯಮಗಳನ್ನು ಸುಧಾರಿಸುವುದು ಉತ್ತಮ’ ಎಂದು ಮಾಯಾವತಿ ಹೇಳಿದ್ದಾರೆ.</p>.ವಕ್ಫ್ ಕಾಯ್ದೆ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ .<p>ಉಭಯ ಮನೆಗಳಲ್ಲಿ ಭಾರಿ ಚರ್ಚೆಯ ಬಳಿಕ ವಿವಾದಾತ್ಮಕ ವಕ್ಫ್ ಮಸೂದೆಗೆ ಒಪ್ಪಿಗೆ ಲಭಿಸಿತ್ತು. ಲೋಕಸಭೆಯಲ್ಲಿ 288 ಸದಸ್ಯರು ವಕ್ಫ್ ಮಸೂದೆ ಬೆಂಬಲಿಸಿದರೆ, 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು.</p><p>ರಾಜ್ಯಸಭೆಯಲ್ಲಿ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಏಪ್ರಿಲ್ 5 ರಂದು ಮಸೂದೆಗೆ ಒಪ್ಪಿಗೆ ನೀಡಿದರು.</p> .ವಕ್ಫ್ ಮಸೂದೆ | ಸುಪ್ರೀಂ ಕೋರ್ಟ್ಗೆ ಹೋದರೂ ಪ್ರಯೋಜನವಾಗದು: ಕೇಂದ್ರ ಸಚಿವ ವರ್ಮಾ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>