<p><strong>ಕೋಲ್ಕತ್ತ:</strong> 'ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ಜಾರಿಯಾಗುವುದಿಲ್ಲ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಶನಿವಾರ) ಹೇಳಿದ್ದಾರೆ. </p><p>ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಮಮತಾ ಈ ಹೇಳಿಕೆ ನೀಡಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮಮತಾ, 'ದಯವಿಟ್ಟು ಎಲ್ಲ ಧರ್ಮದ ಜನರು ಸಂಯಮ ಕಾಪಾಡಿಕೊಳ್ಳಬೇಕು' ಎಂದು ಮನವಿ ಮಾಡಿದ್ದಾರೆ. </p><p>'ಧರ್ಮದ ಹೆಸರಿನಲ್ಲಿ ಯಾವುದೇ ಅಧರ್ಮೀಯ ವರ್ತನೆಯಲ್ಲಿ ತೊಡಗದಿರಿ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದೆ. ರಾಜಕೀಯ ಲಾಭಕ್ಕಾಗಿ ಗಲಭೆಗಳಿಗೆ ಪ್ರಚೋದನೆ ನೀಡದಿರಿ. ಗಲಭೆಗಳನ್ನು ಪ್ರಚೋದಿಸುವವರು ಸಮಾಜಕ್ಕೆ ಕೆಡುಕನ್ನು ಉಂಟುಮಾಡಲಿದ್ದಾರೆ' ಎಂದು ಹೇಳಿದ್ದಾರೆ. </p><p>ಕಾಯ್ದೆಯನ್ನು ವಿರೋಧಿಸಿ ಶುಕ್ರವಾರ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಹಾಗೂ ಹೂಗ್ಲಿ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಪೊಲೀಸ್ ವಾಹನ ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.</p><p>'ನೆನೆಪಿಡಿ, ಕಾನೂನನ್ನು ನಾವು ರಚಿಸಿಲ್ಲ. ಕೇಂದ್ರವು ರಚಿಸಿದೆ. ಆದ್ದರಿಂದ ನಿಮಗೆ ಬೇಕಾದ ಉತ್ತರವನ್ನು ಕೇಂದ್ರದಿಂದ ಪಡೆಯಬೇಕು. ಈ ವಿಷಯದಲ್ಲಿ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾನು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನು ರಾಜ್ಯದಲ್ಲಿ ಅನುಷ್ಠಾನಗೊಳ್ಳುವುದಿಲ್ಲ. ಹಾಗಾಗಿ ಗಲಭೆ ಯಾತಕ್ಕಾಗಿ' ಎಂದು ಅವರು ಹೇಳಿದ್ದಾರೆ. </p><p>'ಗಲಭೆ ಹಾಗೂ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಬ್ಯಾನರ್ಜಿ ಎಚ್ಚರಿಸಿದ್ದಾರೆ. </p><p>'ಹಿಂಸಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೆಲವು ರಾಜಕೀಯ ಪಕ್ಷಗಳು ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿವೆ. ಧರ್ಮ ಎಂದರೆ ಮಾನವೀಯತೆ, ಸದ್ಭಾವನೆ, ನಾಗರಿಕತೆ ಹಾಗೂ ಸಾಮರಸ್ಯ ಆಗಿದೆ. ಎಲ್ಲರೂ ಶಾಂತಿ ಹಾಗೂ ಸಾಮರಸ್ಯವನ್ನು ಕಾಪಾಡಿಕೊಳ್ಳುವಂತೆ ವಿನಂತಿಸುತ್ತೇನೆ' ಎಂದು ಹೇಳಿದ್ದಾರೆ. </p>.ವಕ್ಫ್ ತಿದ್ದುಪಡಿ ಕಾಯ್ದೆ: ಕೇಂದ್ರದಿಂದ ಸುಪ್ರೀಂ ಕೋರ್ಟ್ಗೆ ಕೇವಿಯಟ್.ವಕ್ಫ್ ಕಾಯ್ದೆ: ದೇಶದಾದ್ಯಂತ ಬಿಜೆಪಿ ಜಾಗೃತಿ ಅಭಿಯಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> 'ಪಶ್ಚಿಮ ಬಂಗಾಳದಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆ ಜಾರಿಯಾಗುವುದಿಲ್ಲ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಶನಿವಾರ) ಹೇಳಿದ್ದಾರೆ. </p><p>ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ ಮಮತಾ ಈ ಹೇಳಿಕೆ ನೀಡಿದ್ದಾರೆ. </p><p>ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮಮತಾ, 'ದಯವಿಟ್ಟು ಎಲ್ಲ ಧರ್ಮದ ಜನರು ಸಂಯಮ ಕಾಪಾಡಿಕೊಳ್ಳಬೇಕು' ಎಂದು ಮನವಿ ಮಾಡಿದ್ದಾರೆ. </p><p>'ಧರ್ಮದ ಹೆಸರಿನಲ್ಲಿ ಯಾವುದೇ ಅಧರ್ಮೀಯ ವರ್ತನೆಯಲ್ಲಿ ತೊಡಗದಿರಿ. ಪ್ರತಿಯೊಂದು ಜೀವವೂ ಅಮೂಲ್ಯವಾಗಿದೆ. ರಾಜಕೀಯ ಲಾಭಕ್ಕಾಗಿ ಗಲಭೆಗಳಿಗೆ ಪ್ರಚೋದನೆ ನೀಡದಿರಿ. ಗಲಭೆಗಳನ್ನು ಪ್ರಚೋದಿಸುವವರು ಸಮಾಜಕ್ಕೆ ಕೆಡುಕನ್ನು ಉಂಟುಮಾಡಲಿದ್ದಾರೆ' ಎಂದು ಹೇಳಿದ್ದಾರೆ. </p><p>ಕಾಯ್ದೆಯನ್ನು ವಿರೋಧಿಸಿ ಶುಕ್ರವಾರ ಮಾಲ್ಡಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಹಾಗೂ ಹೂಗ್ಲಿ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನೆ ವಿಕೋಪಕ್ಕೆ ತಿರುಗಿದ್ದು, ಪೊಲೀಸ್ ವಾಹನ ಸೇರಿದಂತೆ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.</p><p>'ನೆನೆಪಿಡಿ, ಕಾನೂನನ್ನು ನಾವು ರಚಿಸಿಲ್ಲ. ಕೇಂದ್ರವು ರಚಿಸಿದೆ. ಆದ್ದರಿಂದ ನಿಮಗೆ ಬೇಕಾದ ಉತ್ತರವನ್ನು ಕೇಂದ್ರದಿಂದ ಪಡೆಯಬೇಕು. ಈ ವಿಷಯದಲ್ಲಿ ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ. ನಾನು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನು ರಾಜ್ಯದಲ್ಲಿ ಅನುಷ್ಠಾನಗೊಳ್ಳುವುದಿಲ್ಲ. ಹಾಗಾಗಿ ಗಲಭೆ ಯಾತಕ್ಕಾಗಿ' ಎಂದು ಅವರು ಹೇಳಿದ್ದಾರೆ. </p><p>'ಗಲಭೆ ಹಾಗೂ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಬ್ಯಾನರ್ಜಿ ಎಚ್ಚರಿಸಿದ್ದಾರೆ. </p><p>'ಹಿಂಸಾಚಾರವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಕೆಲವು ರಾಜಕೀಯ ಪಕ್ಷಗಳು ಧರ್ಮವನ್ನು ದುರುಪಯೋಗಪಡಿಸಿಕೊಳ್ಳಲು ಯತ್ನಿಸುತ್ತಿವೆ. ಧರ್ಮ ಎಂದರೆ ಮಾನವೀಯತೆ, ಸದ್ಭಾವನೆ, ನಾಗರಿಕತೆ ಹಾಗೂ ಸಾಮರಸ್ಯ ಆಗಿದೆ. ಎಲ್ಲರೂ ಶಾಂತಿ ಹಾಗೂ ಸಾಮರಸ್ಯವನ್ನು ಕಾಪಾಡಿಕೊಳ್ಳುವಂತೆ ವಿನಂತಿಸುತ್ತೇನೆ' ಎಂದು ಹೇಳಿದ್ದಾರೆ. </p>.ವಕ್ಫ್ ತಿದ್ದುಪಡಿ ಕಾಯ್ದೆ: ಕೇಂದ್ರದಿಂದ ಸುಪ್ರೀಂ ಕೋರ್ಟ್ಗೆ ಕೇವಿಯಟ್.ವಕ್ಫ್ ಕಾಯ್ದೆ: ದೇಶದಾದ್ಯಂತ ಬಿಜೆಪಿ ಜಾಗೃತಿ ಅಭಿಯಾನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>