<p><strong>ನವದೆಹಲಿ:</strong> ವಕ್ಫ್ ತಿದ್ದುಪಡಿ ಕಾಯ್ದೆ ಪರಿಶೀಲನೆಗೆ ರಚಿಸಲಾಗಿದ್ದ ಜಂಟಿ ಸಂಸದೀಯ ಸಮಿತಿಯು (JPC) ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಸದಸ್ಯರು ಮಂಡಿಸಿದ ಎಲ್ಲಾ ತಿದ್ದುಪಡಿಗಳನ್ನು ಅಂಗೀಕರಿಸಿದೆ. ವಿರೋಧ ಪಕ್ಷಗಳ ಸದಸ್ಯರು ಪ್ರಸ್ತಾಪಿಸಿದ ಎಲ್ಲಾ ತಿದ್ದುಪಡಿಗಳನ್ನು ತಿರಸ್ಕರಿಸಿದೆ.</p><p>ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್, ‘ಸಮಿತಿ ಅಂಗೀಕರಿಸಿದ ಬದಲಾವಣೆಗಳಿಂದಾಗಿ ಕಾನೂನು ಈ ಹಿಂದಿಗಿಂತ ಉತ್ತಮ ಹಾಗೂ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಹೇಳಿದ್ದಾರೆ.</p>.ವಕ್ಫ್ JPC ಸಭೆಯಲ್ಲಿ ಕೋಲಾಹಲ: ವಿರೋಧ ಪಕ್ಷಗಳ 10 ಸಂಸದರ ಅಮಾನತು.<p>ಸಭೆಯ ನಡಾವಳಿಗಳ ಬಗ್ಗೆ ಟೀಕಿಸಿರುವ ವಿರೋಧ ಪಕ್ಷಗಳ ಸದಸ್ಯರು, ಜಗದಂಬಿಕಾ ಪಾಲ್ ಪ್ರಜಾತಾಂತ್ರಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.</p><p>‘ಇದೊಂದು ಹಾಸ್ಯಸ್ಪದ ಪ್ರಕ್ರಿಯೆ. ನಮ್ಮ ಅಭಿಪ್ರಾಯಗಳನ್ನು ಕೇಳಿಲ್ಲ. ಜಗದಂಬಿಕಾ ಪಾಲ್ ಅವರು ಸರ್ವಾಧಿಕಾರಿಯಂತೆ ವರ್ತಿಸಿದ್ದಾರೆ’ ಎಂದು ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದಾರೆ</p>.‘ವಕ್ಫ್ ಆಸ್ತಿ’ ವಿವಾದ: ಶ್ರೀರಂಗಪಟ್ಟಣ ಬಂದ್ಗೆ ಉತ್ತಮ ಪ್ರತಿಕ್ರಿಯೆ.<p>ಬ್ಯಾನರ್ಜಿ ಆರೋಪವನ್ನು ನಿರಾಕರಿಸಿದ ಪಾಲ್, ‘ಇಡೀ ಪ್ರಕ್ರಿಯೆ ಪ್ರಜಾಸತಾತ್ಮಕವಾಗಿತ್ತು. ಬಹುಮತದ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಯಿತು. ಮಸೂದೆಯ 14ನೇ ಪರಿಚ್ಛೇದಲ್ಲಿ ಎನ್ಡಿಎ ಸದಸ್ಯರು ಸೂಚಿಸಿದ ತಿದ್ದುಪಡಿಗಳನ್ನು ಅಂಗೀಕರಿಸಲಾಗಿದೆ’ ಎಂದಿದ್ದಾರೆ.</p><p>ಪರಿಚ್ಛೇದ 44ರಲ್ಲಿ 100ಕ್ಕೂ ಅಧಿಕ ತಿದ್ದುಪಡಿಗಳನ್ನು ವಿರೋಧ ಪಕ್ಷದ ಸದಸ್ಯರು ಮಂಡಿಸಿದರು. ಅವುಗಳನ್ನು ಮತಕ್ಕೆ ಹಾಕುವ ಮೂಲಕ ಸೋಲಿಸಲಾಯಿತು ಎಂದು ಇದೇ ವೇಳೆ ಅವರು ತಿಳಿಸಿದ್ದಾರೆ.</p> .ವಕ್ಫ್ ಭೂಮಿ; ಒಂದು ‘ಇಂಚು’ ಬಿಡಲಾರೆವು: ಯೋಗಿ ಆದಿತ್ಯನಾಥ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ವಕ್ಫ್ ತಿದ್ದುಪಡಿ ಕಾಯ್ದೆ ಪರಿಶೀಲನೆಗೆ ರಚಿಸಲಾಗಿದ್ದ ಜಂಟಿ ಸಂಸದೀಯ ಸಮಿತಿಯು (JPC) ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಸದಸ್ಯರು ಮಂಡಿಸಿದ ಎಲ್ಲಾ ತಿದ್ದುಪಡಿಗಳನ್ನು ಅಂಗೀಕರಿಸಿದೆ. ವಿರೋಧ ಪಕ್ಷಗಳ ಸದಸ್ಯರು ಪ್ರಸ್ತಾಪಿಸಿದ ಎಲ್ಲಾ ತಿದ್ದುಪಡಿಗಳನ್ನು ತಿರಸ್ಕರಿಸಿದೆ.</p><p>ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್, ‘ಸಮಿತಿ ಅಂಗೀಕರಿಸಿದ ಬದಲಾವಣೆಗಳಿಂದಾಗಿ ಕಾನೂನು ಈ ಹಿಂದಿಗಿಂತ ಉತ್ತಮ ಹಾಗೂ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಹೇಳಿದ್ದಾರೆ.</p>.ವಕ್ಫ್ JPC ಸಭೆಯಲ್ಲಿ ಕೋಲಾಹಲ: ವಿರೋಧ ಪಕ್ಷಗಳ 10 ಸಂಸದರ ಅಮಾನತು.<p>ಸಭೆಯ ನಡಾವಳಿಗಳ ಬಗ್ಗೆ ಟೀಕಿಸಿರುವ ವಿರೋಧ ಪಕ್ಷಗಳ ಸದಸ್ಯರು, ಜಗದಂಬಿಕಾ ಪಾಲ್ ಪ್ರಜಾತಾಂತ್ರಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.</p><p>‘ಇದೊಂದು ಹಾಸ್ಯಸ್ಪದ ಪ್ರಕ್ರಿಯೆ. ನಮ್ಮ ಅಭಿಪ್ರಾಯಗಳನ್ನು ಕೇಳಿಲ್ಲ. ಜಗದಂಬಿಕಾ ಪಾಲ್ ಅವರು ಸರ್ವಾಧಿಕಾರಿಯಂತೆ ವರ್ತಿಸಿದ್ದಾರೆ’ ಎಂದು ಟಿಎಂಸಿಯ ಕಲ್ಯಾಣ್ ಬ್ಯಾನರ್ಜಿ ಆರೋಪಿಸಿದ್ದಾರೆ</p>.‘ವಕ್ಫ್ ಆಸ್ತಿ’ ವಿವಾದ: ಶ್ರೀರಂಗಪಟ್ಟಣ ಬಂದ್ಗೆ ಉತ್ತಮ ಪ್ರತಿಕ್ರಿಯೆ.<p>ಬ್ಯಾನರ್ಜಿ ಆರೋಪವನ್ನು ನಿರಾಕರಿಸಿದ ಪಾಲ್, ‘ಇಡೀ ಪ್ರಕ್ರಿಯೆ ಪ್ರಜಾಸತಾತ್ಮಕವಾಗಿತ್ತು. ಬಹುಮತದ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಯಿತು. ಮಸೂದೆಯ 14ನೇ ಪರಿಚ್ಛೇದಲ್ಲಿ ಎನ್ಡಿಎ ಸದಸ್ಯರು ಸೂಚಿಸಿದ ತಿದ್ದುಪಡಿಗಳನ್ನು ಅಂಗೀಕರಿಸಲಾಗಿದೆ’ ಎಂದಿದ್ದಾರೆ.</p><p>ಪರಿಚ್ಛೇದ 44ರಲ್ಲಿ 100ಕ್ಕೂ ಅಧಿಕ ತಿದ್ದುಪಡಿಗಳನ್ನು ವಿರೋಧ ಪಕ್ಷದ ಸದಸ್ಯರು ಮಂಡಿಸಿದರು. ಅವುಗಳನ್ನು ಮತಕ್ಕೆ ಹಾಕುವ ಮೂಲಕ ಸೋಲಿಸಲಾಯಿತು ಎಂದು ಇದೇ ವೇಳೆ ಅವರು ತಿಳಿಸಿದ್ದಾರೆ.</p> .ವಕ್ಫ್ ಭೂಮಿ; ಒಂದು ‘ಇಂಚು’ ಬಿಡಲಾರೆವು: ಯೋಗಿ ಆದಿತ್ಯನಾಥ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>