<p><strong>ಅಹಮದಾಬಾದ್/ಲಖನೌ/ಕೋಲ್ಕತ್ತ:</strong> ವಕ್ಫ್ (ತಿದ್ದುಪಡಿ) ಮಸೂದೆ ವಿರೋಧಿಸಿ ಅಹಮದಾಬಾದ್ ಮತ್ತು ಕೋಲ್ಕತ್ತದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದರು.</p>.<p>ಗುಜರಾತ್ನ ಅಹಮದಾಬಾದ್ನಲ್ಲಿ, ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕರ ನೇತೃತ್ವದಲ್ಲಿ ಸಿದಿ ಸೈಯ್ಯದ್ ಮಸೀದಿಯ ಎದುರು ಪ್ರತಿಭಟನೆ ನಡೆದಿದೆ.</p>.<p>16ನೇ ಶತಮಾನದ ಐತಿಹಾಸಿಕ ಮಸೀದಿಯ ಹೊರಗೆ ಜಮಾಯಿಸಿದ ಪ್ರತಿಭಟನಾಕಾರರು, ವಕ್ಫ್ ಕಾನೂನುಗಳ ತಿದ್ದುಪಡಿ ಹಾಗೂ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನಕ್ಕಾಗಿ ಗುಜರಾತ್ ಸರ್ಕಾರ ನೇಮಿಸಿದ ಸಮಿತಿಯನ್ನು ಟೀಕಿಸುವ ಫಲಕಗಳು ಮತ್ತು ಪೋಸ್ಟರ್ಗಳನ್ನು ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಎರಡು ದಿನಗಳ ಹಿಂದೆಯೇ ಪ್ರತಿಭಟನೆ ನಡೆಸಲು ಯೋಜಿಸಲಾಗಿತ್ತು ಎಂದು ಎಐಎಂಐಎಂ ಸಾಮಾಜಿಕ ಮಾಧ್ಯಮ ಉಸ್ತುವಾರಿ ಶೋಯಾಬ್ ರಿಜ್ವಿ ಹೇಳಿದ್ದಾರೆ. </p>.<p>ಪ್ರತಿಭಟನೆ ನಡೆಸುತ್ತಿದ್ದ ಎಐಎಂಐಎಂನ ಗುಜರಾತ್ ಅಧ್ಯಕ್ಷ ಸಬೀರ್ ಕಬ್ಲಿವಾಲಾ ಸೇರಿದಂತೆ ಸುಮಾರು 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಕೋಲ್ಕತ್ತದಲ್ಲಿಯೂ ಜನ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಮಸೂದೆಯನ್ನು ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.</p>.<p>ಈ ಮಸೂದೆಯು ದೇಶವನ್ನು ವಿಭಜಿಸಲು ಬಿಜೆಪಿ ಮಾಡಿದ ತಂತ್ರವಾಗಿದೆ. ಅವರು ತಮ್ಮ ಬಹುಮತದ ಕಾರಣದಿಂದಾಗಿ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮಸೂದೆಯನ್ನು ಅಂಗೀಕರಿಸಿದ್ದಾರೆ. ನಾವು ಈ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸುತ್ತೇವೆ. ಇದು ಕೇವಲ ಮುಸ್ಲಿಂ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನವಲ್ಲ, ನಮ್ಮ ಮೇಲೆ ಅಪಪ್ರಚಾರ ಮಾಡುವ ಪ್ರಯತ್ನವೂ ಆಗಿದೆ ಎಂದು ಪ್ರತಿಭಟನಾಕಾರರಲ್ಲಿ ಒಬ್ಬರು ಹೇಳಿದ್ದಾರೆ.</p>.ವಕ್ಫ್ ಮಸೂದೆ ವಿರುದ್ಧ ಶೀಘ್ರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ: ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್/ಲಖನೌ/ಕೋಲ್ಕತ್ತ:</strong> ವಕ್ಫ್ (ತಿದ್ದುಪಡಿ) ಮಸೂದೆ ವಿರೋಧಿಸಿ ಅಹಮದಾಬಾದ್ ಮತ್ತು ಕೋಲ್ಕತ್ತದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿದರು.</p>.<p>ಗುಜರಾತ್ನ ಅಹಮದಾಬಾದ್ನಲ್ಲಿ, ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕರ ನೇತೃತ್ವದಲ್ಲಿ ಸಿದಿ ಸೈಯ್ಯದ್ ಮಸೀದಿಯ ಎದುರು ಪ್ರತಿಭಟನೆ ನಡೆದಿದೆ.</p>.<p>16ನೇ ಶತಮಾನದ ಐತಿಹಾಸಿಕ ಮಸೀದಿಯ ಹೊರಗೆ ಜಮಾಯಿಸಿದ ಪ್ರತಿಭಟನಾಕಾರರು, ವಕ್ಫ್ ಕಾನೂನುಗಳ ತಿದ್ದುಪಡಿ ಹಾಗೂ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅನುಷ್ಠಾನಕ್ಕಾಗಿ ಗುಜರಾತ್ ಸರ್ಕಾರ ನೇಮಿಸಿದ ಸಮಿತಿಯನ್ನು ಟೀಕಿಸುವ ಫಲಕಗಳು ಮತ್ತು ಪೋಸ್ಟರ್ಗಳನ್ನು ಹಿಡಿದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಎರಡು ದಿನಗಳ ಹಿಂದೆಯೇ ಪ್ರತಿಭಟನೆ ನಡೆಸಲು ಯೋಜಿಸಲಾಗಿತ್ತು ಎಂದು ಎಐಎಂಐಎಂ ಸಾಮಾಜಿಕ ಮಾಧ್ಯಮ ಉಸ್ತುವಾರಿ ಶೋಯಾಬ್ ರಿಜ್ವಿ ಹೇಳಿದ್ದಾರೆ. </p>.<p>ಪ್ರತಿಭಟನೆ ನಡೆಸುತ್ತಿದ್ದ ಎಐಎಂಐಎಂನ ಗುಜರಾತ್ ಅಧ್ಯಕ್ಷ ಸಬೀರ್ ಕಬ್ಲಿವಾಲಾ ಸೇರಿದಂತೆ ಸುಮಾರು 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಕೋಲ್ಕತ್ತದಲ್ಲಿಯೂ ಜನ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಮಸೂದೆಯನ್ನು ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.</p>.<p>ಈ ಮಸೂದೆಯು ದೇಶವನ್ನು ವಿಭಜಿಸಲು ಬಿಜೆಪಿ ಮಾಡಿದ ತಂತ್ರವಾಗಿದೆ. ಅವರು ತಮ್ಮ ಬಹುಮತದ ಕಾರಣದಿಂದಾಗಿ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮಸೂದೆಯನ್ನು ಅಂಗೀಕರಿಸಿದ್ದಾರೆ. ನಾವು ಈ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸುತ್ತೇವೆ. ಇದು ಕೇವಲ ಮುಸ್ಲಿಂ ಆಸ್ತಿಗಳನ್ನು ವಶಪಡಿಸಿಕೊಳ್ಳುವ ಪ್ರಯತ್ನವಲ್ಲ, ನಮ್ಮ ಮೇಲೆ ಅಪಪ್ರಚಾರ ಮಾಡುವ ಪ್ರಯತ್ನವೂ ಆಗಿದೆ ಎಂದು ಪ್ರತಿಭಟನಾಕಾರರಲ್ಲಿ ಒಬ್ಬರು ಹೇಳಿದ್ದಾರೆ.</p>.ವಕ್ಫ್ ಮಸೂದೆ ವಿರುದ್ಧ ಶೀಘ್ರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ: ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>