<p><strong>ರಜೌರಿ/ಜಮ್ಮು</strong>: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರು ಹಾಗೂ ಸರ್ಕಾರಿ ಅಧಿಕಾರಿಗಳ ಯುದ್ಧ ಸ್ಮಾರಕವನ್ನು ಜಮ್ಮು–ಕಾಶ್ಮೀರ ಸರ್ಕಾರವು ಸೇನೆಯ ಸಹಕಾರದೊಂದಿಗೆ ಗಡಿ ಜಿಲ್ಲೆಯಲ್ಲಿ ನಿರ್ಮಿಸಿದೆ.</p>.<p>ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನವು ಗುಜ್ಜರ್ ಮಂಡಿ ಚೌಕ್ ಪ್ರದೇಶದ ಮೇಲೆ ನಡೆಸಿದ ಶೆಲ್ ದಾಳಿಯಿಂದ ಹಾನಿಯಾದ ಪ್ರದೇಶದಲ್ಲೇ ಹುತಾತ್ಮರ ಸ್ಮಾರಕ ನಿರ್ಮಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.</p>.<p>ಪಾಕಿಸ್ತಾನವು ಕಳೆದ ಮೇ 10ರಂದು ನಡೆಸಿದ ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ರಜೌರಿಯ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ (ಎಡಿಡಿಸಿ) ರಾಜ್ಕುಮಾರ್ ಥಾಪಾ ಸಹ ಒಬ್ಬರು.</p>.<p>ಸ್ಮಾರಕದಲ್ಲಿ ಥಾಪಾ ಸೇರಿದಂತೆ ಕೃಷ್ಣ ಘಾಟಿ ಬ್ರಿಗೇಡ್ನ ಸುಬೇದಾರ್ ಮೇಜರ್ ಪವನ್ ಕುಮಾರ್ ಮತ್ತು ಕರ್ತವ್ಯದಲ್ಲಿದ್ದಾಗಲೇ ಜೀವ ಕಳೆದುಕೊಂಡ ಇತರ ಮೂವರು ಸೇನಾ ಸಿಬ್ಬಂದಿಯ ಭಿತ್ತಿಚಿತ್ರಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಜೌರಿ/ಜಮ್ಮು</strong>: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರು ಹಾಗೂ ಸರ್ಕಾರಿ ಅಧಿಕಾರಿಗಳ ಯುದ್ಧ ಸ್ಮಾರಕವನ್ನು ಜಮ್ಮು–ಕಾಶ್ಮೀರ ಸರ್ಕಾರವು ಸೇನೆಯ ಸಹಕಾರದೊಂದಿಗೆ ಗಡಿ ಜಿಲ್ಲೆಯಲ್ಲಿ ನಿರ್ಮಿಸಿದೆ.</p>.<p>ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನವು ಗುಜ್ಜರ್ ಮಂಡಿ ಚೌಕ್ ಪ್ರದೇಶದ ಮೇಲೆ ನಡೆಸಿದ ಶೆಲ್ ದಾಳಿಯಿಂದ ಹಾನಿಯಾದ ಪ್ರದೇಶದಲ್ಲೇ ಹುತಾತ್ಮರ ಸ್ಮಾರಕ ನಿರ್ಮಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.</p>.<p>ಪಾಕಿಸ್ತಾನವು ಕಳೆದ ಮೇ 10ರಂದು ನಡೆಸಿದ ಶೆಲ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ರಜೌರಿಯ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ (ಎಡಿಡಿಸಿ) ರಾಜ್ಕುಮಾರ್ ಥಾಪಾ ಸಹ ಒಬ್ಬರು.</p>.<p>ಸ್ಮಾರಕದಲ್ಲಿ ಥಾಪಾ ಸೇರಿದಂತೆ ಕೃಷ್ಣ ಘಾಟಿ ಬ್ರಿಗೇಡ್ನ ಸುಬೇದಾರ್ ಮೇಜರ್ ಪವನ್ ಕುಮಾರ್ ಮತ್ತು ಕರ್ತವ್ಯದಲ್ಲಿದ್ದಾಗಲೇ ಜೀವ ಕಳೆದುಕೊಂಡ ಇತರ ಮೂವರು ಸೇನಾ ಸಿಬ್ಬಂದಿಯ ಭಿತ್ತಿಚಿತ್ರಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>