‘ಜುಬೈರ್ ತಮ್ಮ ಟ್ವೀಟ್ಗಳ ಮೂಲಕ ಸಮಾಜದಲ್ಲಿ ದ್ವೇಷ ಬಿತ್ತುವ ಹಾಗೂ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿಯೊಂದರ ವರದಿಗಾರ ಆಶಿಶ್ ಕತಿಯಾರ್ ದೂರು ನೀಡಿದ್ದರು. ಅದರ ಆಧಾರದಲ್ಲಿ 2021ರ ನವೆಂಬರ್ 25ರಂದು ಪ್ರಕರಣ ದಾಖಲಿಸಲಾಗಿತ್ತು’ ಎಂದು ಮೊಹಮ್ಮದಿ ಪೊಲೀಸ್ ಠಾಣೆಯ ಅಧಿಕಾರಿ ಅಂಬರ್ ಸಿಂಗ್ ತಿಳಿಸಿದ್ದಾರೆ.