ಹಡಗುಗಳು ಮತ್ತು ಅವುಗಳ ಸಿಬ್ಬಂದಿಯ ಸುರಕ್ಷತೆಗಾಗಿ ಕೈಗೊಂಡಿರುವ ‘ಸಂಕಲ್ಪ ಕಾರ್ಯಾಚರಣೆ’ಯ ಭಾಗವಾಗಿ ಭಾರತೀಯ ನೌಕಾಪಡೆಯು ಅರಬ್ಬಿ ಸಮುದ್ರ ಮತ್ತು ಅಡೆನ್ ಖಾರಿಯಲ್ಲಿ ಯುದ್ಧನೌಕೆಗಳನ್ನು ನಿಯೋಜಿಸಿದೆ. ಈ ಕಾರ್ಯಾಚರಣೆ ವೇಳೆ 35 ಕಡಲುಗಳ್ಳರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಭಾರತೀಯ ಕಾನೂನು, ಅದರಲ್ಲೂ ವಿಶೇಷವಾಗಿ ಕಡಲುಗಳ್ಳತನ ಕಾಯ್ದೆ– 2022ರ ಅನ್ವಯ ಅವರ ವಿರುದ್ಧ ಸ್ಥಳೀಯ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ನೌಕಾಪಡೆ ಹೇಳಿದೆ.