<p><strong>ಭೋಪಾಲ್</strong>: ‘ನಾನು ಮಧ್ಯ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಲು ಗುಜರಾತ್ನಲ್ಲಿ ಹೋಗಿದ್ದೆ. ಈ ವೇಳೆ ‘ಆರ್ಎಸ್ಎಸ್ ವಿರುದ್ಧ ಮಾತನಾಡಬೇಡಿ. ಯಾಕೆಂದರೆ ಹಿಂದೂಗಳು ಸಿಟ್ಟಾಗುತ್ತಾರೆ’ ಎಂದು ನನಗೆ ಹೇಳಲಾಗಿತ್ತು’ ಎಂದು ಕಾಂಗ್ರೆಸ್ ಸಂಸದ ದಿಗ್ವಿಜಯ ಸಿಂಗ್ ಸೋಮವಾರ ಹೇಳಿದರು.</p>.<p class="bodytext">ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಗುಜರಾತ್ಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ‘ಹೃದಯದಲ್ಲಿ ಕಾಂಗ್ರೆಸ್ ಸಿದ್ಧಾಂತ ಹೊಂದಿರುವವರು ಜನರೊಂದಿಗೆ ನಿಲ್ಲುತ್ತಾರೆ. ಯಾರು ಜನರಿಂದ ದೂರವಿರುತ್ತಾರೊ ಅವರಲ್ಲಿ ಅರ್ಧದಷ್ಟು ಜನರು ಬಿಜೆಪಿಯವರು’ ಎಂದಿದ್ದರು.</p>.<p class="bodytext">ರಾಹುಲ್ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿ ದಿಗ್ವಿಜಯ ಸಿಂಗ್, ‘ಕಾಂಗ್ರೆಸ್ನಲ್ಲಿರುವ ಬಿಜೆಪಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಥವಾ ಅವರನ್ನು ಕಿತ್ತೊಗೆಯಬೇಕು’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್</strong>: ‘ನಾನು ಮಧ್ಯ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪ್ರಚಾರ ನಡೆಸಲು ಗುಜರಾತ್ನಲ್ಲಿ ಹೋಗಿದ್ದೆ. ಈ ವೇಳೆ ‘ಆರ್ಎಸ್ಎಸ್ ವಿರುದ್ಧ ಮಾತನಾಡಬೇಡಿ. ಯಾಕೆಂದರೆ ಹಿಂದೂಗಳು ಸಿಟ್ಟಾಗುತ್ತಾರೆ’ ಎಂದು ನನಗೆ ಹೇಳಲಾಗಿತ್ತು’ ಎಂದು ಕಾಂಗ್ರೆಸ್ ಸಂಸದ ದಿಗ್ವಿಜಯ ಸಿಂಗ್ ಸೋಮವಾರ ಹೇಳಿದರು.</p>.<p class="bodytext">ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಗುಜರಾತ್ಗೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು, ‘ಹೃದಯದಲ್ಲಿ ಕಾಂಗ್ರೆಸ್ ಸಿದ್ಧಾಂತ ಹೊಂದಿರುವವರು ಜನರೊಂದಿಗೆ ನಿಲ್ಲುತ್ತಾರೆ. ಯಾರು ಜನರಿಂದ ದೂರವಿರುತ್ತಾರೊ ಅವರಲ್ಲಿ ಅರ್ಧದಷ್ಟು ಜನರು ಬಿಜೆಪಿಯವರು’ ಎಂದಿದ್ದರು.</p>.<p class="bodytext">ರಾಹುಲ್ ಅವರ ಮಾತಿಗೆ ಸಹಮತ ವ್ಯಕ್ತಪಡಿಸಿ ದಿಗ್ವಿಜಯ ಸಿಂಗ್, ‘ಕಾಂಗ್ರೆಸ್ನಲ್ಲಿರುವ ಬಿಜೆಪಿಗರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಥವಾ ಅವರನ್ನು ಕಿತ್ತೊಗೆಯಬೇಕು’ ಎಂದು ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>