<p><strong>ಇಂದೋರ್</strong>: ಮಧ್ಯಪ್ರದೇಶದ ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ನೀರುಸೇವನೆ ಶಂಕೆ ಹಿನ್ನೆಲೆಯಲ್ಲಿ ಮೃತಪಟ್ಟ 21 ಮಂದಿಯ ಕುರಿತಾದ ಆಡಿಟ್ ವರದಿಯನ್ನು ಸ್ಥಳೀಯಾಡಳಿತಕ್ಕೆ ಸಲ್ಲಿಸಲಾಗಿದ್ದು, 15 ಮಂದಿ ವಾಂತಿ ಮತ್ತು ಭೇದಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.</p><p>ದೇಶದ ಅತ್ಯಂತ ಸ್ವಚ್ಛ ನಗರವಾದ ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ನೀರು ಕುಡಿದು ಭೇದಿ ಕಾಣಿಸಿಕೊಂಡ ಐದು ಪ್ರಕರಣಗಳು ಮಂಗಳವಾರ ಪತ್ತೆಯಾಗಿವೆ ಎಂದು ಮಧ್ಯಪ್ರದೇಶದ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಭಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ ಭೇದಿಯಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಗಳ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆದಿದ್ಧಾರೆ ಎಂದು ಇಂದೋರ್ನ ಮುಖ್ಯ ಮೆಡಿಕಲ್ ಮತ್ತು ಆರೋಗ್ಯ ಅಧಿಕಾರಿ(ಸಿಎಂಎಚ್ಒ) ಡಾ. ಮಾಧವ್ ಪ್ರಸಾದ್ ಹೇಳಿದ್ದಾರೆ.</p><p>ಈ ವರೆಗೆ ಕಲುಷಿತ ನೀರು ಸೇವಿಸಿ ವಾಂತಿ ಮತ್ತು ಭೇದಿಯಿಂದ 6 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಖಚಿತಪಡಿಸಿತ್ತು.</p><p>ಈ ನಡುವೆ ಸರ್ಕಾರಿ ಸ್ವಾಮ್ಯದ ಮಹಾತ್ಮಗಾಂಧಿ ಮೆಮೋರಿಯಲ್ ಮೆಡಿಕಲ್ ಕಾಲೇಜಿನ ಸಮಿತಿಯೊಂದು ಆಡಿಟ್ ವರದಿಯನ್ನು ಡಿಸಿಗೆ ಸಲ್ಲಿಸಿದೆ. ಈ ವರದಿ ಬಗ್ಗೆ ತಿಳಿದಿರುವ ಮೂಲಗಳ ಪ್ರಕಾರ, ಮೃತ 21 ಮಂದಿ ಪೈಕಿ 15 ಜನರು ವಾಂತಿ, ಭೇದಿಯಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.</p><p>ಭಗೀರಥಪುರದ ಕೆಲ ಸಾವುಗಳು ಕಲುಷಿತ ನೀರು ಸೇವಿಸಿ ವಾಂತಿ ಮತ್ತು ಭೇದಿಯಿಂದ ಸಂಭವಿಸಿರುವ ಸಾಧ್ಯತೆ ಇದ್ದು, ಉಳಿದ ಸಾವುಗಳಿಗೂ ಕಲುಷಿತ ನೀರಿನ ದುರಂತಕ್ಕೂ ಸಂಬಂಧವಿಲ್ಲ ಎಂದು ಡಿಸಿ ಹೇಳಿದ್ದಾರೆ.</p> <p>ಕಲುಷಿತ ನೀರು ಸೇವನೆ ಬಳಿಕ ವಾಂತಿ ಮತ್ತು ಭೇದಿಯಿಂದ 436 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. 403 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 33 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂದೋರ್</strong>: ಮಧ್ಯಪ್ರದೇಶದ ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ನೀರುಸೇವನೆ ಶಂಕೆ ಹಿನ್ನೆಲೆಯಲ್ಲಿ ಮೃತಪಟ್ಟ 21 ಮಂದಿಯ ಕುರಿತಾದ ಆಡಿಟ್ ವರದಿಯನ್ನು ಸ್ಥಳೀಯಾಡಳಿತಕ್ಕೆ ಸಲ್ಲಿಸಲಾಗಿದ್ದು, 15 ಮಂದಿ ವಾಂತಿ ಮತ್ತು ಭೇದಿಯಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.</p><p>ದೇಶದ ಅತ್ಯಂತ ಸ್ವಚ್ಛ ನಗರವಾದ ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ನೀರು ಕುಡಿದು ಭೇದಿ ಕಾಣಿಸಿಕೊಂಡ ಐದು ಪ್ರಕರಣಗಳು ಮಂಗಳವಾರ ಪತ್ತೆಯಾಗಿವೆ ಎಂದು ಮಧ್ಯಪ್ರದೇಶದ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಭಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ ಭೇದಿಯಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಗಳ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆದಿದ್ಧಾರೆ ಎಂದು ಇಂದೋರ್ನ ಮುಖ್ಯ ಮೆಡಿಕಲ್ ಮತ್ತು ಆರೋಗ್ಯ ಅಧಿಕಾರಿ(ಸಿಎಂಎಚ್ಒ) ಡಾ. ಮಾಧವ್ ಪ್ರಸಾದ್ ಹೇಳಿದ್ದಾರೆ.</p><p>ಈ ವರೆಗೆ ಕಲುಷಿತ ನೀರು ಸೇವಿಸಿ ವಾಂತಿ ಮತ್ತು ಭೇದಿಯಿಂದ 6 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಖಚಿತಪಡಿಸಿತ್ತು.</p><p>ಈ ನಡುವೆ ಸರ್ಕಾರಿ ಸ್ವಾಮ್ಯದ ಮಹಾತ್ಮಗಾಂಧಿ ಮೆಮೋರಿಯಲ್ ಮೆಡಿಕಲ್ ಕಾಲೇಜಿನ ಸಮಿತಿಯೊಂದು ಆಡಿಟ್ ವರದಿಯನ್ನು ಡಿಸಿಗೆ ಸಲ್ಲಿಸಿದೆ. ಈ ವರದಿ ಬಗ್ಗೆ ತಿಳಿದಿರುವ ಮೂಲಗಳ ಪ್ರಕಾರ, ಮೃತ 21 ಮಂದಿ ಪೈಕಿ 15 ಜನರು ವಾಂತಿ, ಭೇದಿಯಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.</p><p>ಭಗೀರಥಪುರದ ಕೆಲ ಸಾವುಗಳು ಕಲುಷಿತ ನೀರು ಸೇವಿಸಿ ವಾಂತಿ ಮತ್ತು ಭೇದಿಯಿಂದ ಸಂಭವಿಸಿರುವ ಸಾಧ್ಯತೆ ಇದ್ದು, ಉಳಿದ ಸಾವುಗಳಿಗೂ ಕಲುಷಿತ ನೀರಿನ ದುರಂತಕ್ಕೂ ಸಂಬಂಧವಿಲ್ಲ ಎಂದು ಡಿಸಿ ಹೇಳಿದ್ದಾರೆ.</p> <p>ಕಲುಷಿತ ನೀರು ಸೇವನೆ ಬಳಿಕ ವಾಂತಿ ಮತ್ತು ಭೇದಿಯಿಂದ 436 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. 403 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 33 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>