<p><strong>ತಿರುವನಂತಪುರ:</strong> ಕಳೆದ ವರ್ಷ ಕೇರಳದ ವಯನಾಡಿನಲ್ಲಿ ಸಂಭವಿಸಿದ್ದ ಭೂಕುಸಿತದಿಂದ ಸಂತ್ರಸ್ತರಾಗಿರುವ ಜನರ ಸಾಲ ಮನ್ನಾ ಮಾಡದ ಕೇಂದ್ರ ಸರ್ಕಾರವು ದ್ರೋಹ ಬಗೆದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು (ಗುರುವಾರ) ಆರೋಪಿಸಿದ್ದಾರೆ.</p><p>‘ಆರ್ಬಿಐ ಮಾರ್ಗದರ್ಶಿ ಸೂತ್ರಗಳ ಅನುಸಾರ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಸಾಲದ ಅವಧಿಯನ್ನು ಮರುಹೊಂದಾಣಿಕೆ ಮಾಡಬಹುದಷ್ಟೆ’ ಎಂದು ಕೇಂದ್ರ ಸರ್ಕಾರ, ಕೇರಳ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ ಎಂಬುದನ್ನು ಉಲ್ಲೇಖಿಸಿ ಈ ಮಾತು ಹೇಳಿದರು.</p><p>'ವಯನಾಡಿನ ಭೂಕುಸಿತದ ಸಂತ್ರಸ್ತರು ಮನೆಗಳು, ಜಮೀನು ಸೇರಿದಂತೆ ಜೀವನೋಪಾಯದ ಎಲ್ಲವನ್ನು ಕಳೆದುಕೊಂಡಿದ್ದಾರೆ. ಆದರೂ ಕೇಂದ್ರವು ಸಾಲ ಮನ್ನಾ ಮಾಡಲು ನಿರಾಕರಿಸುತ್ತಿದೆ. ಬದಲಾಗಿ ಸಾಲ ಮರು ಹೊಂದಾಣಿಕೆಗೆ ಅವಕಾಶ ನೀಡುತ್ತಿದೆ. ಇದು ಪರಿಹಾರವಲ್ಲ, ದ್ರೋಹ' ಎಂದು ಹೇಳಿದ್ದಾರೆ. </p><p>'ಕೇಂದ್ರದ ಈ ನಿಲುವನ್ನು ಬಲವಾಗಿ ಖಂಡಿಸುತ್ತೇವೆ. ವಯನಾಡಿನ ಸಹೋದರ ಸಹೋದರಿಯರಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ. ಅವರ ನೋವಿಗೆ ದನಿಯಾಗಿ ನ್ಯಾಯ ಸಿಗುವವರೆಗೂ ಪ್ರತಿಯೊಂದು ವೇದಿಕೆಯಲ್ಲೂ ಹೋರಾಟ ನಡೆಸಲಾಗುವುದು' ಎಂದು ಪ್ರಿಯಾಂಕಾ ತಿಳಿಸಿದ್ದಾರೆ. </p><p>ಕಳೆದ ವರ್ಷ ಜುಲೈ 30ರಂದು ವಯನಾಡಿನಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರಲ್ಲದೆ ನೂರೂರು ಮಂದಿ ಗಾಯಗೊಂಡಿದ್ದರು. ಈ ದುರಂತದಲ್ಲಿ 32 ಮಂದಿ ನಾಪತ್ತೆಯಾಗಿದ್ದರು. </p>.ವಯನಾಡ್ ಭೂಕುಸಿತ: ಪುನರ್ವಸತಿ ಕಲ್ಪಿಸುವಲ್ಲಿ ವಿಳಂಬ; ಪ್ರತಿಭಟನೆ.ವಯನಾಡ್ ಪುನರ್ವಸತಿ: ₹ 590 ಕೋಟಿ ಸಾಲ, ಮಾರ್ಚ್ ಒಳಗೆ ಬಳಸಿ; ಕೇಂದ್ರ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕಳೆದ ವರ್ಷ ಕೇರಳದ ವಯನಾಡಿನಲ್ಲಿ ಸಂಭವಿಸಿದ್ದ ಭೂಕುಸಿತದಿಂದ ಸಂತ್ರಸ್ತರಾಗಿರುವ ಜನರ ಸಾಲ ಮನ್ನಾ ಮಾಡದ ಕೇಂದ್ರ ಸರ್ಕಾರವು ದ್ರೋಹ ಬಗೆದಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು (ಗುರುವಾರ) ಆರೋಪಿಸಿದ್ದಾರೆ.</p><p>‘ಆರ್ಬಿಐ ಮಾರ್ಗದರ್ಶಿ ಸೂತ್ರಗಳ ಅನುಸಾರ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಸಾಲದ ಅವಧಿಯನ್ನು ಮರುಹೊಂದಾಣಿಕೆ ಮಾಡಬಹುದಷ್ಟೆ’ ಎಂದು ಕೇಂದ್ರ ಸರ್ಕಾರ, ಕೇರಳ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದೆ ಎಂಬುದನ್ನು ಉಲ್ಲೇಖಿಸಿ ಈ ಮಾತು ಹೇಳಿದರು.</p><p>'ವಯನಾಡಿನ ಭೂಕುಸಿತದ ಸಂತ್ರಸ್ತರು ಮನೆಗಳು, ಜಮೀನು ಸೇರಿದಂತೆ ಜೀವನೋಪಾಯದ ಎಲ್ಲವನ್ನು ಕಳೆದುಕೊಂಡಿದ್ದಾರೆ. ಆದರೂ ಕೇಂದ್ರವು ಸಾಲ ಮನ್ನಾ ಮಾಡಲು ನಿರಾಕರಿಸುತ್ತಿದೆ. ಬದಲಾಗಿ ಸಾಲ ಮರು ಹೊಂದಾಣಿಕೆಗೆ ಅವಕಾಶ ನೀಡುತ್ತಿದೆ. ಇದು ಪರಿಹಾರವಲ್ಲ, ದ್ರೋಹ' ಎಂದು ಹೇಳಿದ್ದಾರೆ. </p><p>'ಕೇಂದ್ರದ ಈ ನಿಲುವನ್ನು ಬಲವಾಗಿ ಖಂಡಿಸುತ್ತೇವೆ. ವಯನಾಡಿನ ಸಹೋದರ ಸಹೋದರಿಯರಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ. ಅವರ ನೋವಿಗೆ ದನಿಯಾಗಿ ನ್ಯಾಯ ಸಿಗುವವರೆಗೂ ಪ್ರತಿಯೊಂದು ವೇದಿಕೆಯಲ್ಲೂ ಹೋರಾಟ ನಡೆಸಲಾಗುವುದು' ಎಂದು ಪ್ರಿಯಾಂಕಾ ತಿಳಿಸಿದ್ದಾರೆ. </p><p>ಕಳೆದ ವರ್ಷ ಜುಲೈ 30ರಂದು ವಯನಾಡಿನಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರಲ್ಲದೆ ನೂರೂರು ಮಂದಿ ಗಾಯಗೊಂಡಿದ್ದರು. ಈ ದುರಂತದಲ್ಲಿ 32 ಮಂದಿ ನಾಪತ್ತೆಯಾಗಿದ್ದರು. </p>.ವಯನಾಡ್ ಭೂಕುಸಿತ: ಪುನರ್ವಸತಿ ಕಲ್ಪಿಸುವಲ್ಲಿ ವಿಳಂಬ; ಪ್ರತಿಭಟನೆ.ವಯನಾಡ್ ಪುನರ್ವಸತಿ: ₹ 590 ಕೋಟಿ ಸಾಲ, ಮಾರ್ಚ್ ಒಳಗೆ ಬಳಸಿ; ಕೇಂದ್ರ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>