<p><strong>ವಯನಾಡ್ (ಕೇರಳ):</strong> ವಯನಾಡ್ನಲ್ಲಿ ಸಂಭವಿಸಿದ್ದ ಭೂಕುಸಿತದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಮಾದರಿ ಟೌನ್ಶಿಪ್ ನಿರ್ಮಾಣಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಇಲ್ಲಿನ ಕಲ್ಪೆಟ್ಟದ ಎಲ್ಸ್ಟೋನ್ ಎಸ್ಟೇಟ್ನಲ್ಲಿ ಸರ್ಕಾರ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಮಾದರಿ ಟೌನ್ಶಿಪ್ ನಿರ್ಮಿಸಲಾಗುತ್ತಿದೆ.</p>.<p>ಕಲ್ಪೆಟ್ಟ ಬೈಪಾಸ್ ಬಳಿ ಸರ್ಕಾರ ಸ್ವಾಧೀನಪಡಿಸಿಕೊಂಡಿರುವ 64 ಹೆಕ್ಟೇರ್ ಪ್ರದೇಶದಲ್ಲಿ ‘ಟೌನ್ಶಿಪ್’ ನಿರ್ಮಾಣವಾಗಲಿದ್ದು, ತಲಾ 7 ಸೆಂಟ್ಸ್ ಜಾಗದಲ್ಲಿ 100 ಚದರ ಅಡಿ ವಿಸ್ತೀರ್ಣದ ಒಂದೇ ಅಂತಸ್ತಿನ ಮನೆಗಳನ್ನು ನಿರ್ಮಿಸಲಾಗುತ್ತದೆ.</p> <p>ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಪಸ್ಥಿತರಿದ್ದರು.</p>.<p>2024ರ ಜುಲೈ 30 ರಂದು ವಯನಾಡ್ನಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದಿಂದ ಮುಂಡಕ್ಕೈ ಮತ್ತು ಚೂರಲ್ಮಲ ಪ್ರದೇಶಗಳು ಸಂಪೂರ್ಣವಾಗಿ ನಾಶವಾಗಿದ್ದವು. ಘಟನೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು.</p> .Wayanad landslide | ಕೇಂದ್ರದಿಂದ ಇನ್ನೂ ನೆರವು ಬಂದಿಲ್ಲ: ಪಿಣರಾಯಿ ವಿಜಯನ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡ್ (ಕೇರಳ):</strong> ವಯನಾಡ್ನಲ್ಲಿ ಸಂಭವಿಸಿದ್ದ ಭೂಕುಸಿತದ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಮಾದರಿ ಟೌನ್ಶಿಪ್ ನಿರ್ಮಾಣಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಇಲ್ಲಿನ ಕಲ್ಪೆಟ್ಟದ ಎಲ್ಸ್ಟೋನ್ ಎಸ್ಟೇಟ್ನಲ್ಲಿ ಸರ್ಕಾರ ಸ್ವಾಧೀನಪಡಿಸಿಕೊಂಡ ಭೂಮಿಯಲ್ಲಿ ಮಾದರಿ ಟೌನ್ಶಿಪ್ ನಿರ್ಮಿಸಲಾಗುತ್ತಿದೆ.</p>.<p>ಕಲ್ಪೆಟ್ಟ ಬೈಪಾಸ್ ಬಳಿ ಸರ್ಕಾರ ಸ್ವಾಧೀನಪಡಿಸಿಕೊಂಡಿರುವ 64 ಹೆಕ್ಟೇರ್ ಪ್ರದೇಶದಲ್ಲಿ ‘ಟೌನ್ಶಿಪ್’ ನಿರ್ಮಾಣವಾಗಲಿದ್ದು, ತಲಾ 7 ಸೆಂಟ್ಸ್ ಜಾಗದಲ್ಲಿ 100 ಚದರ ಅಡಿ ವಿಸ್ತೀರ್ಣದ ಒಂದೇ ಅಂತಸ್ತಿನ ಮನೆಗಳನ್ನು ನಿರ್ಮಿಸಲಾಗುತ್ತದೆ.</p> <p>ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಪಸ್ಥಿತರಿದ್ದರು.</p>.<p>2024ರ ಜುಲೈ 30 ರಂದು ವಯನಾಡ್ನಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದಿಂದ ಮುಂಡಕ್ಕೈ ಮತ್ತು ಚೂರಲ್ಮಲ ಪ್ರದೇಶಗಳು ಸಂಪೂರ್ಣವಾಗಿ ನಾಶವಾಗಿದ್ದವು. ಘಟನೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು.</p> .Wayanad landslide | ಕೇಂದ್ರದಿಂದ ಇನ್ನೂ ನೆರವು ಬಂದಿಲ್ಲ: ಪಿಣರಾಯಿ ವಿಜಯನ್ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>