<p><strong>ವಯನಾಡ್ (ಕೇರಳ):</strong> ವಯನಾಡ್ನಲ್ಲಿ ಕಳೆದ ವರ್ಷ ಸಂಭವಿಸಿದ ಭೂಕುಸಿತದಿಂದಾಗಿ ನಿರಾಶ್ರಿತರಾದವರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಯಾವುದೇ ನೆರವು ನೀಡಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಹೇಳಿದ್ದಾರೆ.</p>.<p>ಕೆಂದ್ರ ಸರ್ಕಾರವು ₹529.50 ಕೋಟಿ ಸಾಲ ಮಂಜೂರು ಮಾಡಿರುವುದನ್ನು ಉಲ್ಲೇಖಿಸಿದ ಪಿಣರಾಯಿ, ‘ಸಾಲವಾಗಿ ನೀಡಿರುವ ಹಣವು ಅಗತ್ಯಕ್ಕಿಂತ ಕಡಿಮೆ ಇದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಿರಾಶ್ರಿತರ ಪುನರ್ವಸತಿಗಾಗಿ ಮಾದರಿ ‘ಟೌನ್ಶಿಪ್’ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಕೇಂದ್ರದ ಜೊತೆಗಿನ ಹಿಂದಿನ ಅನುಭವಗಳಿಂದಾಗಿ ಪಾಠ ಕಲಿತಿರುವ ನಾವು ಅವರಿಂದ ಹೆಚ್ಚಿನದನ್ನು ನಿರೀಕ್ಷಿಸುವುದಿಲ್ಲ’ ಎಂದು ಹೇಳಿದ್ದಾರೆ.</p>.<p>ಸರ್ಕಾರವು ಸ್ವಾಧೀನಪಡಿಸಿಕೊಂಡಿರುವ 64 ಹೆಕ್ಟೇರ್ ಪ್ರದೇಶದಲ್ಲಿ ‘ಟೌನ್ಶಿಪ್’ ನಿರ್ಮಾಣವಾಗಲಿದ್ದು, ತಲಾ 7 ಸೆಂಟ್ಸ್ ಜಾಗದಲ್ಲಿ 100 ಚದರ ಅಡಿಯ ಮನೆಯನ್ನು ನಿರ್ಮಿಸಲಾಗುತ್ತದೆ.</p>.<p>ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಪಸ್ಥಿತರಿದ್ದರು.</p>.<div><blockquote>ವಯನಾಡ್ ನಿರಾಶ್ರಿತರ ಪುನರ್ವಸತಿಗಾಗಿ ಕೇಂದ್ರ ಸರ್ಕಾರ ನೀಡಿರುವ ನೆರವು ನಗಣ್ಯ </blockquote><span class="attribution">ಪ್ರಿಯಾಂಕಾ ಗಾಂಧಿ ವಯನಾಡ್ ಸಂಸದೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡ್ (ಕೇರಳ):</strong> ವಯನಾಡ್ನಲ್ಲಿ ಕಳೆದ ವರ್ಷ ಸಂಭವಿಸಿದ ಭೂಕುಸಿತದಿಂದಾಗಿ ನಿರಾಶ್ರಿತರಾದವರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಯಾವುದೇ ನೆರವು ನೀಡಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಗುರುವಾರ ಹೇಳಿದ್ದಾರೆ.</p>.<p>ಕೆಂದ್ರ ಸರ್ಕಾರವು ₹529.50 ಕೋಟಿ ಸಾಲ ಮಂಜೂರು ಮಾಡಿರುವುದನ್ನು ಉಲ್ಲೇಖಿಸಿದ ಪಿಣರಾಯಿ, ‘ಸಾಲವಾಗಿ ನೀಡಿರುವ ಹಣವು ಅಗತ್ಯಕ್ಕಿಂತ ಕಡಿಮೆ ಇದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ನಿರಾಶ್ರಿತರ ಪುನರ್ವಸತಿಗಾಗಿ ಮಾದರಿ ‘ಟೌನ್ಶಿಪ್’ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ‘ಕೇಂದ್ರದ ಜೊತೆಗಿನ ಹಿಂದಿನ ಅನುಭವಗಳಿಂದಾಗಿ ಪಾಠ ಕಲಿತಿರುವ ನಾವು ಅವರಿಂದ ಹೆಚ್ಚಿನದನ್ನು ನಿರೀಕ್ಷಿಸುವುದಿಲ್ಲ’ ಎಂದು ಹೇಳಿದ್ದಾರೆ.</p>.<p>ಸರ್ಕಾರವು ಸ್ವಾಧೀನಪಡಿಸಿಕೊಂಡಿರುವ 64 ಹೆಕ್ಟೇರ್ ಪ್ರದೇಶದಲ್ಲಿ ‘ಟೌನ್ಶಿಪ್’ ನಿರ್ಮಾಣವಾಗಲಿದ್ದು, ತಲಾ 7 ಸೆಂಟ್ಸ್ ಜಾಗದಲ್ಲಿ 100 ಚದರ ಅಡಿಯ ಮನೆಯನ್ನು ನಿರ್ಮಿಸಲಾಗುತ್ತದೆ.</p>.<p>ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಉಪಸ್ಥಿತರಿದ್ದರು.</p>.<div><blockquote>ವಯನಾಡ್ ನಿರಾಶ್ರಿತರ ಪುನರ್ವಸತಿಗಾಗಿ ಕೇಂದ್ರ ಸರ್ಕಾರ ನೀಡಿರುವ ನೆರವು ನಗಣ್ಯ </blockquote><span class="attribution">ಪ್ರಿಯಾಂಕಾ ಗಾಂಧಿ ವಯನಾಡ್ ಸಂಸದೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>