<p><strong>ತಿರುವನಂತಪುರ:</strong> ವಯನಾಡ್ ಭೂಕುಸಿತ ದುರಂತದ ಸಂತ್ರಸ್ತರಿಗೆ ಪುನರ್ವಸತಿ ಯೋಜನೆಯಡಿ ಸುಮಾರು 300 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಫೆಬ್ರುವರಿಯಲ್ಲಿ ಮನೆಗಳನ್ನು ಹಸ್ತಾಂತರಿಸುವ ಗುರಿ ಹೊಂದಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರವಾರ ತಿಳಿಸಿದರು. </p>.<p>ಇಲ್ಲಿನ ಮುಂಡಕ್ಕೈ ಮತ್ತು ಚೂರಲ್ಮಲ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದರಿಂದ ಹಾನಿಗೊಳಗಾದ ಕುಟುಂಬಗಳಿಗೆ ಕಲ್ಪೆಟ್ಟ ಬೈಪಾಸ್ ಬಳಿಯ ಎಲ್ಸ್ಟನ್ ಎಸ್ಟೇಟ್ ಪ್ರದೇಶದಲ್ಲಿ ‘ಟೌನ್ಶಿಪ್’ ನಿರ್ಮಿಸಲಾಗುತ್ತಿದೆ. ಅದರ ಭಾಗವಾಗಿ ಈ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು. </p>.<p>ಈ ಯೋಜನೆಯು ತ್ವರಿತವಾಗಿ ಸಾಗುತ್ತಿದ್ದು, ಸುರಕ್ಷತೆ, ಗುಣಮಟ್ಟ ಮತ್ತು ದೀರ್ಘಕಾಲೀನ ಸುಸ್ಥಿರತೆಗೆ ಒತ್ತು ನೀಡಲಾಗಿದೆ. ಈ ಟೌನ್ಶಿಪ್ನಲ್ಲಿ 410 ಮನೆಗಳು ಬರಲಿದ್ದು, ಗೌರವಯುತ ಜೀವನ ನಡೆಸಲು ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒಳಗೊಂಡಿರುತ್ತವೆ ಎಂದು ಅವರು ಸ್ಪಷ್ಟಪಡಿಸಿದರು. </p>.<p>‘ಇಲ್ಲಿ ನಾವು ಸಂತ್ರಸ್ತರಿಗೆ ಸೂರು ಒದಗಿಸುವುದರ ಜತೆಗೆ, ವಿಪತ್ತಿನಿಂದ ಛಿದ್ರಗೊಂಡವರ ಬದುಕನ್ನು ಪುನರ್ ನಿರ್ಮಿಸುವ ಕಾರ್ಯ ನಡೆಸುತ್ತಿದ್ದೇವೆ’ ಎಂದು ಪಿಣರಾಯಿ ವಿಜಯನ್ ಹೇಳಿದರು. </p>.<p>‘ಲೈಫ್ ಮಿಷನ್’ ಮೂಲಕ ಇಲ್ಲಿಯವರೆಗೆ 4,76,076 ಮನೆಗೆಳನ್ನು ಪೂರ್ಣಗೊಳಿಸಿ ಹಸ್ತಾಂತರಿಸಲಾಗಿದೆ. ಅನೇಕ ಕುಟುಂಬಗಳು ಸುರಕ್ಷಿತ ಮನೆಗಳಿಗೆ ಸ್ಥಳಾಂತರಗೊಂಡಿವೆ. ಫೆಬ್ರುವರಿಯಲ್ಲಿ ಈ ಸಂಖ್ಯೆ ಐದು ಲಕ್ಷ ತಲುಪಲಿದೆ. ಅಲ್ಲದೆ 1,24, 471 ಮನೆಗಳ ನಿರ್ಮಾಣ ಕಾರ್ಯವು ವಿವಿಧ ಹಂತದಲ್ಲಿ ಪ್ರಗತಿಯಲ್ಲಿದೆ ಎಂದು ಅವರು ಅಂಕಿ ಅಂಶ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ವಯನಾಡ್ ಭೂಕುಸಿತ ದುರಂತದ ಸಂತ್ರಸ್ತರಿಗೆ ಪುನರ್ವಸತಿ ಯೋಜನೆಯಡಿ ಸುಮಾರು 300 ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಫೆಬ್ರುವರಿಯಲ್ಲಿ ಮನೆಗಳನ್ನು ಹಸ್ತಾಂತರಿಸುವ ಗುರಿ ಹೊಂದಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗುರವಾರ ತಿಳಿಸಿದರು. </p>.<p>ಇಲ್ಲಿನ ಮುಂಡಕ್ಕೈ ಮತ್ತು ಚೂರಲ್ಮಲ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದರಿಂದ ಹಾನಿಗೊಳಗಾದ ಕುಟುಂಬಗಳಿಗೆ ಕಲ್ಪೆಟ್ಟ ಬೈಪಾಸ್ ಬಳಿಯ ಎಲ್ಸ್ಟನ್ ಎಸ್ಟೇಟ್ ಪ್ರದೇಶದಲ್ಲಿ ‘ಟೌನ್ಶಿಪ್’ ನಿರ್ಮಿಸಲಾಗುತ್ತಿದೆ. ಅದರ ಭಾಗವಾಗಿ ಈ ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು. </p>.<p>ಈ ಯೋಜನೆಯು ತ್ವರಿತವಾಗಿ ಸಾಗುತ್ತಿದ್ದು, ಸುರಕ್ಷತೆ, ಗುಣಮಟ್ಟ ಮತ್ತು ದೀರ್ಘಕಾಲೀನ ಸುಸ್ಥಿರತೆಗೆ ಒತ್ತು ನೀಡಲಾಗಿದೆ. ಈ ಟೌನ್ಶಿಪ್ನಲ್ಲಿ 410 ಮನೆಗಳು ಬರಲಿದ್ದು, ಗೌರವಯುತ ಜೀವನ ನಡೆಸಲು ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒಳಗೊಂಡಿರುತ್ತವೆ ಎಂದು ಅವರು ಸ್ಪಷ್ಟಪಡಿಸಿದರು. </p>.<p>‘ಇಲ್ಲಿ ನಾವು ಸಂತ್ರಸ್ತರಿಗೆ ಸೂರು ಒದಗಿಸುವುದರ ಜತೆಗೆ, ವಿಪತ್ತಿನಿಂದ ಛಿದ್ರಗೊಂಡವರ ಬದುಕನ್ನು ಪುನರ್ ನಿರ್ಮಿಸುವ ಕಾರ್ಯ ನಡೆಸುತ್ತಿದ್ದೇವೆ’ ಎಂದು ಪಿಣರಾಯಿ ವಿಜಯನ್ ಹೇಳಿದರು. </p>.<p>‘ಲೈಫ್ ಮಿಷನ್’ ಮೂಲಕ ಇಲ್ಲಿಯವರೆಗೆ 4,76,076 ಮನೆಗೆಳನ್ನು ಪೂರ್ಣಗೊಳಿಸಿ ಹಸ್ತಾಂತರಿಸಲಾಗಿದೆ. ಅನೇಕ ಕುಟುಂಬಗಳು ಸುರಕ್ಷಿತ ಮನೆಗಳಿಗೆ ಸ್ಥಳಾಂತರಗೊಂಡಿವೆ. ಫೆಬ್ರುವರಿಯಲ್ಲಿ ಈ ಸಂಖ್ಯೆ ಐದು ಲಕ್ಷ ತಲುಪಲಿದೆ. ಅಲ್ಲದೆ 1,24, 471 ಮನೆಗಳ ನಿರ್ಮಾಣ ಕಾರ್ಯವು ವಿವಿಧ ಹಂತದಲ್ಲಿ ಪ್ರಗತಿಯಲ್ಲಿದೆ ಎಂದು ಅವರು ಅಂಕಿ ಅಂಶ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>