<p><strong>ತಿರುವನಂತಪುರ</strong>: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಸರಣಿ ಭೂಕುಸಿತದಿಂದಾಗಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬದುಕುಳಿದವರನ್ನು ರಕ್ಷಿಸುವ ಸಲುವಾಗಿ 1300ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಜಪಾನ್ನ ಭತ್ತದ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಯುಎಸ್ ಸೇನಾ ಹೆಲಿಕಾಪ್ಟರ್.ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಶಾಂತಿ ಮಾತುಕತೆ ಬೆನ್ನಲ್ಲೇ ಮನೆಗೆ ಬೆಂಕಿ. <p>ರಕ್ಷಣಾ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ಉಪಕರಣಗಳು, ಭಾರಿ ಗಾತ್ರದ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗಲೆಂದು ಪತ್ತೆ ಹಚ್ಚುವ ಸಾಧನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸ್ವಯಂ ಸೇವಕರು, ಪೊಲೀಸರು ಸೇರಿದಂತೆ ರಕ್ಷಣಾ ಪಡೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಭೂಕುಸಿತ ಸಂಭವಿಸಿದ ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶಗಳಲ್ಲಿ ಬೃಹತ್ ಗಾತ್ರದ ಬಂಡೆಗಳು, ಮರದ ದಿಮ್ಮಿಗಳು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿವೆ. ಮಣ್ಣಿನಡಿ ಹೂತು ಹೋಗಿರುವ ಜನರನ್ನು ಪತ್ತೆ ಹಚ್ಚಲು ರಕ್ಷಣಾ ಸಿಬ್ಬಂದಿಗೆ ಸವಾಲಿನ ಕೆಲಸವಾಗಿದೆ ಎಂದು ತಿಳಿದು ಬಂದಿದೆ.</p>.ಮೈಸೂರಿನಲ್ಲಿ ಶಾಸಕರ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ .ಕೋಲಾರ | ಮರಕ್ಕೆ ಕಾರು ಡಿಕ್ಕಿ; ಒಂದೇ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾವು. <p>ಜುಲೈ 30ರ ಮುಂಜಾನೆ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ, 273 ಜನರು ಗಾಯಗೊಂಡಿದ್ದಾರೆ. ಸುಮಾರು 300ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.</p><p>‘ಭೂಕುಸಿತ ಪೀಡಿತ ಪ್ರದೇಶಗಳನ್ನು ವಲಯಗಳಾಗಿ ವಿಂಗಡಿಸಿದೆ. ರಕ್ಷಣಾ ಕಾರ್ಯ ಮುಂದುವರಿಸಲು ಸಂಭಾವ್ಯ ಸ್ಥಳಗಳನ್ನು ಮ್ಯಾಪ್ ಮಾಡಲಾಗಿದೆ, ವೈಮಾನಿಕ ಛಾಯಾಚಿತ್ರಗಳು ಹಾಗೂ ಸೆಲ್ ಫೋನ್ಗಳ ಸ್ಥಳ ಡೇಟಾವನ್ನು ಸಂಗ್ರಹಿಸಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.9/11 ದಾಳಿಯ ಮಾಸ್ಟರ್ ಮೈಂಡ್ ಜತೆಗಿನ ಒಪ್ಪಂದ ರದ್ದುಪಡಿಸಿದ ಅಮೆರಿಕ.Karnataka Rains | 83 ತಾಲ್ಲೂಕುಗಳಲ್ಲಿ ಮಳೆ ಕೊರತೆ: ಬಿತ್ತನೆಗೆ ಸಮಸ್ಯೆ.<p>ರಕ್ಷಣಾ ಕಾರ್ಯಾಚರಣೆ ವೇಳೆ ಗಾಯಗೊಂಡವರನ್ನು ಹಾಗೂ ಅಸ್ವಸ್ಥರಾದವರನ್ನು ತಕ್ಷಣವೇ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ವೈದ್ಯರು, ಆಂಬ್ಯುಲೆನ್ಸ್ಗಳು, ಸಶಸ್ತ್ರ ಪಡೆಗಳು ಸ್ಥಳದಲ್ಲಿಯೇ ಬೀಡುಬಿಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಸರಣಿ ಭೂಕುಸಿತದಿಂದಾಗಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಬದುಕುಳಿದವರನ್ನು ರಕ್ಷಿಸುವ ಸಲುವಾಗಿ 1300ಕ್ಕೂ ಹೆಚ್ಚು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ಜಪಾನ್ನ ಭತ್ತದ ಗದ್ದೆಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಯುಎಸ್ ಸೇನಾ ಹೆಲಿಕಾಪ್ಟರ್.ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಶಾಂತಿ ಮಾತುಕತೆ ಬೆನ್ನಲ್ಲೇ ಮನೆಗೆ ಬೆಂಕಿ. <p>ರಕ್ಷಣಾ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ಉಪಕರಣಗಳು, ಭಾರಿ ಗಾತ್ರದ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗಲೆಂದು ಪತ್ತೆ ಹಚ್ಚುವ ಸಾಧನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸ್ವಯಂ ಸೇವಕರು, ಪೊಲೀಸರು ಸೇರಿದಂತೆ ರಕ್ಷಣಾ ಪಡೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಭೂಕುಸಿತ ಸಂಭವಿಸಿದ ಮುಂಡಕ್ಕೈ ಮತ್ತು ಚೂರಲ್ಮಲಾ ಪ್ರದೇಶಗಳಲ್ಲಿ ಬೃಹತ್ ಗಾತ್ರದ ಬಂಡೆಗಳು, ಮರದ ದಿಮ್ಮಿಗಳು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿವೆ. ಮಣ್ಣಿನಡಿ ಹೂತು ಹೋಗಿರುವ ಜನರನ್ನು ಪತ್ತೆ ಹಚ್ಚಲು ರಕ್ಷಣಾ ಸಿಬ್ಬಂದಿಗೆ ಸವಾಲಿನ ಕೆಲಸವಾಗಿದೆ ಎಂದು ತಿಳಿದು ಬಂದಿದೆ.</p>.ಮೈಸೂರಿನಲ್ಲಿ ಶಾಸಕರ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ .ಕೋಲಾರ | ಮರಕ್ಕೆ ಕಾರು ಡಿಕ್ಕಿ; ಒಂದೇ ಕಾಲೇಜಿನ ಮೂವರು ವಿದ್ಯಾರ್ಥಿಗಳು ಸಾವು. <p>ಜುಲೈ 30ರ ಮುಂಜಾನೆ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ, 273 ಜನರು ಗಾಯಗೊಂಡಿದ್ದಾರೆ. ಸುಮಾರು 300ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಶಂಕಿಸಲಾಗಿದೆ.</p><p>‘ಭೂಕುಸಿತ ಪೀಡಿತ ಪ್ರದೇಶಗಳನ್ನು ವಲಯಗಳಾಗಿ ವಿಂಗಡಿಸಿದೆ. ರಕ್ಷಣಾ ಕಾರ್ಯ ಮುಂದುವರಿಸಲು ಸಂಭಾವ್ಯ ಸ್ಥಳಗಳನ್ನು ಮ್ಯಾಪ್ ಮಾಡಲಾಗಿದೆ, ವೈಮಾನಿಕ ಛಾಯಾಚಿತ್ರಗಳು ಹಾಗೂ ಸೆಲ್ ಫೋನ್ಗಳ ಸ್ಥಳ ಡೇಟಾವನ್ನು ಸಂಗ್ರಹಿಸಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.9/11 ದಾಳಿಯ ಮಾಸ್ಟರ್ ಮೈಂಡ್ ಜತೆಗಿನ ಒಪ್ಪಂದ ರದ್ದುಪಡಿಸಿದ ಅಮೆರಿಕ.Karnataka Rains | 83 ತಾಲ್ಲೂಕುಗಳಲ್ಲಿ ಮಳೆ ಕೊರತೆ: ಬಿತ್ತನೆಗೆ ಸಮಸ್ಯೆ.<p>ರಕ್ಷಣಾ ಕಾರ್ಯಾಚರಣೆ ವೇಳೆ ಗಾಯಗೊಂಡವರನ್ನು ಹಾಗೂ ಅಸ್ವಸ್ಥರಾದವರನ್ನು ತಕ್ಷಣವೇ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ವೈದ್ಯರು, ಆಂಬ್ಯುಲೆನ್ಸ್ಗಳು, ಸಶಸ್ತ್ರ ಪಡೆಗಳು ಸ್ಥಳದಲ್ಲಿಯೇ ಬೀಡುಬಿಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>