<p><strong>ನವದೆಹಲಿ</strong>: ‘ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ₹15 ಕೋಟಿ ದೇಣಿಗೆ ನೀಡಲು ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಮುಂದಾಗಿದ್ದಾರೆ.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ಈಗ ನವದೆಹಲಿಯ ಮಂಡೋಲಿ ಜೈಲಿನಲ್ಲಿದ್ದಾರೆ.</p>.<p>ಕೇರಳದಲ್ಲಿ ನಡೆದಿರುವ ಭೂಕುಸಿತದಿಂದ ತೀವ್ರ ದುಃಖಿತನಾಗಿದ್ದು, ಅಗತ್ಯವಿರುವ ಸಮಯಲ್ಲಿ ಸೂಕ್ತ ನೆರವು ನೀಡಲು ಸಿದ್ಧ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. </p>.<p>ಪತ್ರ ಬರೆದಿರುವುದನ್ನು ಅವರ ಪರ ವಕೀಲ ಅನಂತ್ ಮಲಿಕ್ ಕೂಡ ಖಚಿತಪಡಿಸಿದ್ದಾರೆ.</p>.ಮುಲ್ಲಪೆರಿಯಾರ್: ಹೊಸ ಅಣೆಕಟ್ಟೆ ನಿರ್ಮಾಣ ಬೇಡಿಕೆಗೆ ಮರುಜೀವ.<p>‘ನನ್ನ ಫೌಂಡೇಶನ್ನಿಂದ ₹15 ಕೋಟಿ ದೇಣಿಗೆಯನ್ನು ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ ನೀಡುತ್ತಿದ್ದು, ಇದನ್ನು ಸ್ವೀಕರಿಸುವಂತೆ ನಿಮ್ಮಲ್ಲಿ ಮನವಿ ಮಾಡುತ್ತೇನೆ. ನಾನು ನೀಡುತ್ತಿರುವ ನೆರವನ್ನು ಸಂತ್ರಸ್ತರಿಗೆ ತಕ್ಷಣದಲ್ಲಿ 300 ಮನೆ ನಿರ್ಮಿಸಲು ಬೆಂಬಲವಾಗಿ ನೀಡುತ್ತಿದ್ದೇನೆ’ ಎಂದು ಪತ್ರದಲ್ಲಿ ವಿವರಿಸಿದ್ದಾನೆ.</p>.<p>‘ಈ ಮೊತ್ತವನ್ನು ‘ಕಾನೂನುಬದ್ಧವಾದ ವ್ಯವಹಾರ ಖಾತೆ’ಯಿಂದ ನೀಡುವುದಾಗಿ ತಿಳಿಸಿರುವ ಸುಕೇಶ್, ಭೂಕುಸಿತದಿಂದ ಮನೆ ಕಳೆದುಕೊಂಡವರಿಗೆ ಪುನರ್ವಸತಿ, ಕ್ಷೇಮಾಭಿವೃದ್ಧಿಗೆ ಬಳಸಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾನೆ.</p>.<p>ಚಂದ್ರಶೇಖರ್ ಬರೆದ ಪತ್ರಕ್ಕೆ ಕೇರಳ ಸರ್ಕಾರವು ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಮುಖ್ಯಮಂತ್ರಿ ಪರಿಹಾರ ನಿಧಿ’ಗೆ ₹15 ಕೋಟಿ ದೇಣಿಗೆ ನೀಡಲು ವಂಚನೆ ಪ್ರಕರಣದ ಆರೋಪಿ ಸುಕೇಶ್ ಚಂದ್ರಶೇಖರ್ ಮುಂದಾಗಿದ್ದಾರೆ.</p>.<p>ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ಈಗ ನವದೆಹಲಿಯ ಮಂಡೋಲಿ ಜೈಲಿನಲ್ಲಿದ್ದಾರೆ.</p>.<p>ಕೇರಳದಲ್ಲಿ ನಡೆದಿರುವ ಭೂಕುಸಿತದಿಂದ ತೀವ್ರ ದುಃಖಿತನಾಗಿದ್ದು, ಅಗತ್ಯವಿರುವ ಸಮಯಲ್ಲಿ ಸೂಕ್ತ ನೆರವು ನೀಡಲು ಸಿದ್ಧ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. </p>.<p>ಪತ್ರ ಬರೆದಿರುವುದನ್ನು ಅವರ ಪರ ವಕೀಲ ಅನಂತ್ ಮಲಿಕ್ ಕೂಡ ಖಚಿತಪಡಿಸಿದ್ದಾರೆ.</p>.ಮುಲ್ಲಪೆರಿಯಾರ್: ಹೊಸ ಅಣೆಕಟ್ಟೆ ನಿರ್ಮಾಣ ಬೇಡಿಕೆಗೆ ಮರುಜೀವ.<p>‘ನನ್ನ ಫೌಂಡೇಶನ್ನಿಂದ ₹15 ಕೋಟಿ ದೇಣಿಗೆಯನ್ನು ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ ನೀಡುತ್ತಿದ್ದು, ಇದನ್ನು ಸ್ವೀಕರಿಸುವಂತೆ ನಿಮ್ಮಲ್ಲಿ ಮನವಿ ಮಾಡುತ್ತೇನೆ. ನಾನು ನೀಡುತ್ತಿರುವ ನೆರವನ್ನು ಸಂತ್ರಸ್ತರಿಗೆ ತಕ್ಷಣದಲ್ಲಿ 300 ಮನೆ ನಿರ್ಮಿಸಲು ಬೆಂಬಲವಾಗಿ ನೀಡುತ್ತಿದ್ದೇನೆ’ ಎಂದು ಪತ್ರದಲ್ಲಿ ವಿವರಿಸಿದ್ದಾನೆ.</p>.<p>‘ಈ ಮೊತ್ತವನ್ನು ‘ಕಾನೂನುಬದ್ಧವಾದ ವ್ಯವಹಾರ ಖಾತೆ’ಯಿಂದ ನೀಡುವುದಾಗಿ ತಿಳಿಸಿರುವ ಸುಕೇಶ್, ಭೂಕುಸಿತದಿಂದ ಮನೆ ಕಳೆದುಕೊಂಡವರಿಗೆ ಪುನರ್ವಸತಿ, ಕ್ಷೇಮಾಭಿವೃದ್ಧಿಗೆ ಬಳಸಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾನೆ.</p>.<p>ಚಂದ್ರಶೇಖರ್ ಬರೆದ ಪತ್ರಕ್ಕೆ ಕೇರಳ ಸರ್ಕಾರವು ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>