<p><strong>ನವದೆಹಲಿ</strong>: ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಬಿಡುಗಡೆ ಮಾಡಿರುವ ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸುವಂತೆ ಒತ್ತಾಯಿಸಿ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚೂರಲ್ಮಲ ಮತ್ತು ಮುಂಡಕ್ಕೈ ಪ್ರದೇಶದಲ್ಲಿ ಕಳೆದ ವರ್ಷ ಜುಲೈನಲ್ಲಿ ಸಂಭವಿಸಿದ್ದ ಭೂಕುಸಿತದ ಸಂತ್ರಸ್ತರು ಎದುರಿಸುತ್ತಿರುವ ಸಂಕಷ್ಟಗಳನ್ನು ಅವರು ಪತ್ರದಲ್ಲಿ ವಿವರಿಸಿ, ಕೇಂದ್ರ ಸರ್ಕಾರ ನೆರವಿನ ಹಸ್ತ ಚಾಚಬೇಕೆಂದು ಕೋರಿದ್ದಾರೆ.</p>.<p>ಕೇರಳದ ಸಂಸದರ ಮನವಿಯಂತೆ ಕೇಂದ್ರ ಸರ್ಕಾರವು ಸಂತ್ರಸ್ತರಿಗೆ ₹529.50 ಕೋಟಿ ಮೊತ್ತದ ಪರಿಹಾರ ಪ್ಯಾಕೇಜ್ ಘೋಷಿಸಿದೆ ಎಂಬುದನ್ನು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಆದರೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡುವಾಗ ಷರತ್ತು ವಿಧಿಸಲಾಗಿದೆ. ಹಣವನ್ನು ಸಾಮಾನ್ಯ ಅನುದಾನದ ರೀತಿಯಲ್ಲಿ ವಿತರಿಸದೆ, ಸಾಲದ ರೂಪದಲ್ಲಿ ವಿತರಿಸಬೇಕು ಎಂದು ಹೇಳಿದೆ. ಮಾತ್ರವಲ್ಲ, ಪರಿಹಾರದ ಮೊತ್ತವನ್ನು 2025ರ ಮಾರ್ಚ್ 31ರ ಒಳಗಾಗಿ ಸಂಪೂರ್ಣ ಖರ್ಚು ಮಾಡುವಂತೆಯೂ ತಿಳಿಸಿದೆ. ಈ ಷರತ್ತುಗಳಿಂದ ಸಂತ್ರಸ್ತರಿಗೆ ಅನ್ಯಾಯವಾಗಿದೆ’ ಎಂದಿದ್ದಾರೆ.</p>.<p>‘ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸಲು ಮತ್ತು ಅದರ ಅನುಷ್ಠಾನಕ್ಕೆ ಕಾಲಾವಧಿಯನ್ನು ವಿಸ್ತರಿಸುವಂತೆ ವಿನಂತಿಸುತ್ತೇನೆ. ಇದು, ಭೂಕುಸಿತದಲ್ಲಿ ಎಲ್ಲವನ್ನೂ ಕಳೆದುಕೊಂಡ ಜನರ ಜೀವನವನ್ನು ಮರುನಿರ್ಮಾಣ ಮಾಡಲು ಸಹಾಯ ಮಾಡುತ್ತದೆ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಯನಾಡ್ ಭೂಕುಸಿತ ಸಂತ್ರಸ್ತರಿಗೆ ಬಿಡುಗಡೆ ಮಾಡಿರುವ ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸುವಂತೆ ಒತ್ತಾಯಿಸಿ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.</p>.<p>ತಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚೂರಲ್ಮಲ ಮತ್ತು ಮುಂಡಕ್ಕೈ ಪ್ರದೇಶದಲ್ಲಿ ಕಳೆದ ವರ್ಷ ಜುಲೈನಲ್ಲಿ ಸಂಭವಿಸಿದ್ದ ಭೂಕುಸಿತದ ಸಂತ್ರಸ್ತರು ಎದುರಿಸುತ್ತಿರುವ ಸಂಕಷ್ಟಗಳನ್ನು ಅವರು ಪತ್ರದಲ್ಲಿ ವಿವರಿಸಿ, ಕೇಂದ್ರ ಸರ್ಕಾರ ನೆರವಿನ ಹಸ್ತ ಚಾಚಬೇಕೆಂದು ಕೋರಿದ್ದಾರೆ.</p>.<p>ಕೇರಳದ ಸಂಸದರ ಮನವಿಯಂತೆ ಕೇಂದ್ರ ಸರ್ಕಾರವು ಸಂತ್ರಸ್ತರಿಗೆ ₹529.50 ಕೋಟಿ ಮೊತ್ತದ ಪರಿಹಾರ ಪ್ಯಾಕೇಜ್ ಘೋಷಿಸಿದೆ ಎಂಬುದನ್ನು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>‘ಆದರೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡುವಾಗ ಷರತ್ತು ವಿಧಿಸಲಾಗಿದೆ. ಹಣವನ್ನು ಸಾಮಾನ್ಯ ಅನುದಾನದ ರೀತಿಯಲ್ಲಿ ವಿತರಿಸದೆ, ಸಾಲದ ರೂಪದಲ್ಲಿ ವಿತರಿಸಬೇಕು ಎಂದು ಹೇಳಿದೆ. ಮಾತ್ರವಲ್ಲ, ಪರಿಹಾರದ ಮೊತ್ತವನ್ನು 2025ರ ಮಾರ್ಚ್ 31ರ ಒಳಗಾಗಿ ಸಂಪೂರ್ಣ ಖರ್ಚು ಮಾಡುವಂತೆಯೂ ತಿಳಿಸಿದೆ. ಈ ಷರತ್ತುಗಳಿಂದ ಸಂತ್ರಸ್ತರಿಗೆ ಅನ್ಯಾಯವಾಗಿದೆ’ ಎಂದಿದ್ದಾರೆ.</p>.<p>‘ಪರಿಹಾರ ಪ್ಯಾಕೇಜ್ ಅನ್ನು ಅನುದಾನವಾಗಿ ಪರಿವರ್ತಿಸಲು ಮತ್ತು ಅದರ ಅನುಷ್ಠಾನಕ್ಕೆ ಕಾಲಾವಧಿಯನ್ನು ವಿಸ್ತರಿಸುವಂತೆ ವಿನಂತಿಸುತ್ತೇನೆ. ಇದು, ಭೂಕುಸಿತದಲ್ಲಿ ಎಲ್ಲವನ್ನೂ ಕಳೆದುಕೊಂಡ ಜನರ ಜೀವನವನ್ನು ಮರುನಿರ್ಮಾಣ ಮಾಡಲು ಸಹಾಯ ಮಾಡುತ್ತದೆ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>