<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು (ಶುಕ್ರವಾರ) ಭೇಟಿ ಮಾಡಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಯನಾಡ್ ಭೂಕುಸಿತದ ಪುನರ್ವಸತಿಗಾಗಿ ₹2,221.03 ಕೋಟಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. </p><p>ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೇಂದ್ರದ ನೆರವಿಗೂ ಮನವಿ ಸಲ್ಲಿಸಿದ್ದಾರೆ. </p><p>ರಾಷ್ಟ್ರ ರಾಜಧಾನಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಿಣರಾಯಿ, ಪ್ರಧಾನಿ ಅವರೊಂದಿಗೆ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ. </p><p>ವಯನಾಡ್ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಕಾರ್ಯ ಜೊತೆಗೆ ರಾಜ್ಯದಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪನೆ ಹಾಗೂ ರಾಜ್ಯದ ಸಾಲ ಮಿತಿ ಹೆಚ್ಚಿಸುವ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ. </p><p>ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ₹2,221.03 ಕೋಟಿ ಬಿಡುಗಡೆಗೆ ಪ್ರಧಾನಿಯನ್ನು ಕೇರಳ ಸಿಎಂ ಕೋರಿದ್ದಾರೆ. </p><p>ವಯನಾಡ್ ಪುನರ್ವಸತಿ ವಿಷಯದಲ್ಲಿ ಕೇರಳದ ಆಡಳಿತ ಎಡರಂಗ ಹಾಗೂ ಬಿಜೆಪಿ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. </p><p>ಕೋಯಿಕ್ಕೋಡ್ನಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡುವಂತೆಯೂ ಪಿಣರಾಯಿ ಮನವಿ ಮಾಡಿದ್ದು, ಇದು ಕೇರಳ ಜನತೆಯ ಬಹುಕಾಲದ ಬೇಡಿಕೆಯಾಗಿದೆ ಎಂದು ತಿಳಿಸಿದ್ದಾರೆ. </p><p>ಈ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೂ ಪಿಣರಾಯಿ ವಿಜಯನ್ ಚರ್ಚಿಸಿದ್ದರು. </p>.ಭಾರತ–ಬ್ರಿಟನ್ ರಕ್ಷಣಾ ಸಂಬಂಧ ಇನ್ನಷ್ಟು ಎತ್ತರಕ್ಕೆ: ಸ್ಟಾರ್ಮರ್–ಮೋದಿ ಮಾತುಕತೆ.ಭಾರತದ ಬೆಳವಣಿಗೆಯಲ್ಲಿ ಭಾಗಿಯಾಗಿ: ಜಾಗತಿಕ ಉದ್ಯಮಗಳಿಗೆ ನರೇಂದ್ರ ಮೋದಿ ಕರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು (ಶುಕ್ರವಾರ) ಭೇಟಿ ಮಾಡಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಯನಾಡ್ ಭೂಕುಸಿತದ ಪುನರ್ವಸತಿಗಾಗಿ ₹2,221.03 ಕೋಟಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. </p><p>ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೇಂದ್ರದ ನೆರವಿಗೂ ಮನವಿ ಸಲ್ಲಿಸಿದ್ದಾರೆ. </p><p>ರಾಷ್ಟ್ರ ರಾಜಧಾನಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಿಣರಾಯಿ, ಪ್ರಧಾನಿ ಅವರೊಂದಿಗೆ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ. </p><p>ವಯನಾಡ್ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಕಾರ್ಯ ಜೊತೆಗೆ ರಾಜ್ಯದಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪನೆ ಹಾಗೂ ರಾಜ್ಯದ ಸಾಲ ಮಿತಿ ಹೆಚ್ಚಿಸುವ ಕುರಿತು ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ. </p><p>ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ₹2,221.03 ಕೋಟಿ ಬಿಡುಗಡೆಗೆ ಪ್ರಧಾನಿಯನ್ನು ಕೇರಳ ಸಿಎಂ ಕೋರಿದ್ದಾರೆ. </p><p>ವಯನಾಡ್ ಪುನರ್ವಸತಿ ವಿಷಯದಲ್ಲಿ ಕೇರಳದ ಆಡಳಿತ ಎಡರಂಗ ಹಾಗೂ ಬಿಜೆಪಿ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. </p><p>ಕೋಯಿಕ್ಕೋಡ್ನಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡುವಂತೆಯೂ ಪಿಣರಾಯಿ ಮನವಿ ಮಾಡಿದ್ದು, ಇದು ಕೇರಳ ಜನತೆಯ ಬಹುಕಾಲದ ಬೇಡಿಕೆಯಾಗಿದೆ ಎಂದು ತಿಳಿಸಿದ್ದಾರೆ. </p><p>ಈ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೂ ಪಿಣರಾಯಿ ವಿಜಯನ್ ಚರ್ಚಿಸಿದ್ದರು. </p>.ಭಾರತ–ಬ್ರಿಟನ್ ರಕ್ಷಣಾ ಸಂಬಂಧ ಇನ್ನಷ್ಟು ಎತ್ತರಕ್ಕೆ: ಸ್ಟಾರ್ಮರ್–ಮೋದಿ ಮಾತುಕತೆ.ಭಾರತದ ಬೆಳವಣಿಗೆಯಲ್ಲಿ ಭಾಗಿಯಾಗಿ: ಜಾಗತಿಕ ಉದ್ಯಮಗಳಿಗೆ ನರೇಂದ್ರ ಮೋದಿ ಕರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>