<p><strong>ತಿರುವನಂತಪುರ</strong>: 2024ರ ಭಾರಿ ಭೂಕುಸಿತದಿಂದ ತತ್ತರಿಸಿದ್ದ ವಯನಾಡಿನ ಸಂತ್ರಸ್ತರಿಗೆ ಕೇರಳದ ಎಲ್ಡಿಎಫ್ ಸರ್ಕಾರ ( ಎಡ ಪ್ರಜಾಸತ್ತಾತ್ಮಕ ರಂಗ) ಪುನರ್ವಸತಿ ಭಾಗವಾಗಿ ಕಲ್ಪೆಟ್ಟದಲ್ಲಿ ನಿರ್ಮಿಸಿದ್ದ 178 ಮನೆಗಳನ್ನು ಹಸ್ತಾಂತರ ಮಾಡಿತು.</p>.<p>ಚುನಾವಣೆ ಹೊಸ್ತಿಲಲ್ಲಿರುವ ಕೇರಳದಲ್ಲಿ ಆಡಳಿತಾರೂಢ ಎಲ್ಡಿಎಫ್ ಸರ್ಕಾರ ತನ್ನ ಸಾಧನೆಗಳನ್ನು ಹೇಳಿಕೊಳ್ಳಲು ವಯನಾಡು ಪುನರ್ ವಸತಿ ಯೋಜನೆ ಅವಕಾಶ ನೀಡಿದೆ.</p>.<p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭಾನುವಾರ ಸಂತ್ರಸ್ತರಿಗೆ ಮನೆಗಳ ಕೀಲಿಕೈ ಮತ್ತು ಭೂಮಿಯ ಹಕ್ಕುಪತ್ರವನ್ನು ವಿತರಣೆ ಮಾಡಿದರು.</p>.<p>ಆನಂತರ ಮಾತನಾಡಿದ ಅವರು ‘ಕೇಂದ್ರದ ಬಾಕಿ ಪರಿಹಾರ ನಿರಾಕರಣೆ, ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿ ಕುರಿತ ಅಪಪ್ರಚಾರದ ಮಧ್ಯೆಯೂ ಸರ್ಕಾರ ಪುನರ್ ವಸತಿ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ’ ಎಂದರು.</p>.<p>2024ರಲ್ಲಿ ಮುಂಡಕ್ಕೈ–ಚೂರಲ್ಮಾಲ ನಡುವೆ ಭಾರಿ ಭೂಕುಸಿತ ಉಂಟಾಗಿ 350ಕ್ಕೂ ಹೆಚ್ಚು ಮನೆ ಕೊಚ್ಚಿಹೋಗಿದ್ದವು. ಸರ್ಕಾರ 64 ಎಕರೆ ಪ್ರದೇಶದಲ್ಲಿ ₹ 351 ಕೋಟಿ ವೆಚ್ಚದಲ್ಲಿ 400ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸುತ್ತಿದೆ. ಮುಂದಿನ ಮಳೆಗಾಲದ ವೇಳೆಗೆ ಉಳಿದ ಮನೆ ಸಿದ್ಧವಾಗಲಿವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p>.<p>ಭೂಕುಸಿತ ಪರಿಹಾರಕ್ಕಾಗಿ ಮುಖ್ಯಮಂತ್ರಿ ವಿಕೋಪ ಪರಿಹಾರ ನಿಧಿಗೆ ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕ ಗಾಂಧಿ ಕೊಡುಗೆ ನೀಡಿಲ್ಲ ಎಂದು ಸಿಪಿಎಂ ಇತ್ತೀಚೆಗಷ್ಟೆ ಟೀಕಿಸಿತ್ತು.</p>.<p>ಕಾಂಗ್ರೆಸ್ ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ತಲಾ 100 ಮನೆಗಳನ್ನು ನಿರ್ಮಿಸಿಕೊಡುತ್ತಿವೆ.</p>.<p><strong>ಕಾಂಗ್ರೆಸ್ ಶಾಸಕರ ವಿರುದ್ಧ ಘೋಷಣೆ:</strong></p>.<p>ಭಾನುವಾರ ನಡೆದ ಮೊದಲ ಹಂತದ ಮನೆಗಳ ವಿತರಣೆ ಕಾರ್ಯಕ್ರಮದಲ್ಲಿ ಕಲ್ಪೆಟ್ಟದ ಕಾಂಗ್ರೆಸ್ ಶಾಸಕ ಸಿದ್ದಿಕಿ ಅವರು ಮಾತನಾಡುತ್ತಿದ್ದ ವೇಳೆ ಸಿಪಿಎಂ ಬೆಂಬಲಿಗರು ಎನ್ನಲಾದ ಕೆಲವರು ಅಡ್ಡಿಪಡಿಸಿ, ಘೋಷಣೆಗಳನ್ನು ಕೂಗಿದರು.</p>.<p>ಮನೆಗಳ ನಿರ್ಮಾಣಕ್ಕೆ ನೆರವು ನೀಡಿದ್ದರೂ ಸ್ಥಳೀಯ ಶಾಸಕರಿಗೆ ಸಿಪಿಎಂ ಅಪಮಾನ ಮಾಡಿದೆ. ಮುಖ್ಯಮಂತ್ರಿ ಕೂಡಲೇ ಕ್ಷಮೆ ಕೇಳಬೇಕು ಎಂದು ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ವಿ.ಡಿ.ಸತೀಶನ್ ಆಗ್ರಹಿಸಿದರು.</p>.<div dir="ltr"> <div dir="ltr"> <p class="bodytext" dir="ltr" style="line-height:1.38;margin-top:0pt;margin-bottom:0pt;"> </p> </div> </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: 2024ರ ಭಾರಿ ಭೂಕುಸಿತದಿಂದ ತತ್ತರಿಸಿದ್ದ ವಯನಾಡಿನ ಸಂತ್ರಸ್ತರಿಗೆ ಕೇರಳದ ಎಲ್ಡಿಎಫ್ ಸರ್ಕಾರ ( ಎಡ ಪ್ರಜಾಸತ್ತಾತ್ಮಕ ರಂಗ) ಪುನರ್ವಸತಿ ಭಾಗವಾಗಿ ಕಲ್ಪೆಟ್ಟದಲ್ಲಿ ನಿರ್ಮಿಸಿದ್ದ 178 ಮನೆಗಳನ್ನು ಹಸ್ತಾಂತರ ಮಾಡಿತು.</p>.<p>ಚುನಾವಣೆ ಹೊಸ್ತಿಲಲ್ಲಿರುವ ಕೇರಳದಲ್ಲಿ ಆಡಳಿತಾರೂಢ ಎಲ್ಡಿಎಫ್ ಸರ್ಕಾರ ತನ್ನ ಸಾಧನೆಗಳನ್ನು ಹೇಳಿಕೊಳ್ಳಲು ವಯನಾಡು ಪುನರ್ ವಸತಿ ಯೋಜನೆ ಅವಕಾಶ ನೀಡಿದೆ.</p>.<p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭಾನುವಾರ ಸಂತ್ರಸ್ತರಿಗೆ ಮನೆಗಳ ಕೀಲಿಕೈ ಮತ್ತು ಭೂಮಿಯ ಹಕ್ಕುಪತ್ರವನ್ನು ವಿತರಣೆ ಮಾಡಿದರು.</p>.<p>ಆನಂತರ ಮಾತನಾಡಿದ ಅವರು ‘ಕೇಂದ್ರದ ಬಾಕಿ ಪರಿಹಾರ ನಿರಾಕರಣೆ, ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿ ಕುರಿತ ಅಪಪ್ರಚಾರದ ಮಧ್ಯೆಯೂ ಸರ್ಕಾರ ಪುನರ್ ವಸತಿ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ’ ಎಂದರು.</p>.<p>2024ರಲ್ಲಿ ಮುಂಡಕ್ಕೈ–ಚೂರಲ್ಮಾಲ ನಡುವೆ ಭಾರಿ ಭೂಕುಸಿತ ಉಂಟಾಗಿ 350ಕ್ಕೂ ಹೆಚ್ಚು ಮನೆ ಕೊಚ್ಚಿಹೋಗಿದ್ದವು. ಸರ್ಕಾರ 64 ಎಕರೆ ಪ್ರದೇಶದಲ್ಲಿ ₹ 351 ಕೋಟಿ ವೆಚ್ಚದಲ್ಲಿ 400ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸುತ್ತಿದೆ. ಮುಂದಿನ ಮಳೆಗಾಲದ ವೇಳೆಗೆ ಉಳಿದ ಮನೆ ಸಿದ್ಧವಾಗಲಿವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p>.<p>ಭೂಕುಸಿತ ಪರಿಹಾರಕ್ಕಾಗಿ ಮುಖ್ಯಮಂತ್ರಿ ವಿಕೋಪ ಪರಿಹಾರ ನಿಧಿಗೆ ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕ ಗಾಂಧಿ ಕೊಡುಗೆ ನೀಡಿಲ್ಲ ಎಂದು ಸಿಪಿಎಂ ಇತ್ತೀಚೆಗಷ್ಟೆ ಟೀಕಿಸಿತ್ತು.</p>.<p>ಕಾಂಗ್ರೆಸ್ ಮತ್ತು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ತಲಾ 100 ಮನೆಗಳನ್ನು ನಿರ್ಮಿಸಿಕೊಡುತ್ತಿವೆ.</p>.<p><strong>ಕಾಂಗ್ರೆಸ್ ಶಾಸಕರ ವಿರುದ್ಧ ಘೋಷಣೆ:</strong></p>.<p>ಭಾನುವಾರ ನಡೆದ ಮೊದಲ ಹಂತದ ಮನೆಗಳ ವಿತರಣೆ ಕಾರ್ಯಕ್ರಮದಲ್ಲಿ ಕಲ್ಪೆಟ್ಟದ ಕಾಂಗ್ರೆಸ್ ಶಾಸಕ ಸಿದ್ದಿಕಿ ಅವರು ಮಾತನಾಡುತ್ತಿದ್ದ ವೇಳೆ ಸಿಪಿಎಂ ಬೆಂಬಲಿಗರು ಎನ್ನಲಾದ ಕೆಲವರು ಅಡ್ಡಿಪಡಿಸಿ, ಘೋಷಣೆಗಳನ್ನು ಕೂಗಿದರು.</p>.<p>ಮನೆಗಳ ನಿರ್ಮಾಣಕ್ಕೆ ನೆರವು ನೀಡಿದ್ದರೂ ಸ್ಥಳೀಯ ಶಾಸಕರಿಗೆ ಸಿಪಿಎಂ ಅಪಮಾನ ಮಾಡಿದೆ. ಮುಖ್ಯಮಂತ್ರಿ ಕೂಡಲೇ ಕ್ಷಮೆ ಕೇಳಬೇಕು ಎಂದು ವಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ವಿ.ಡಿ.ಸತೀಶನ್ ಆಗ್ರಹಿಸಿದರು.</p>.<div dir="ltr"> <div dir="ltr"> <p class="bodytext" dir="ltr" style="line-height:1.38;margin-top:0pt;margin-bottom:0pt;"> </p> </div> </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>