<p><strong>ವಯನಾಡ್:</strong> ಕರ್ನಾಟಕದ ದುಬಾರೆ ಆನೆ ಶಿಬಿರದಲ್ಲಿ ನಡೆದ ದುರಂತದ ಘಟನೆಯು ಮರೆಯುವ ಮುನ್ನವೇ ಕೇರಳದ ವಯನಾಡ್ನಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆಕೆಯ ಪತಿಯು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಮೃತರನ್ನು ಪುತುಮಲ ನಿವಾಸಿ ಜೆಸ್ಸಿ ಎಂದು ಗುರುತಿಸಲಾಗಿದೆ. ಮೆಪ್ಪಾಡಿ ಬಳಿಯ ಕಲ್ಲಡಿಯಲ್ಲಿ ತನ್ನ ಪತಿ ಶಾಜಿ ಅವರೊಂದಿಗೆ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದಾಗ ಕಾಡಾನೆಯು ಅವರ ಮೇಲೆ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕೆಯ ಪತಿಗೆ ಗಂಭೀರ ಗಾಯಗಳಾಗಿವೆ. </p><p>ಈ ಪ್ರದೇಶದಲ್ಲಿ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದು, ಕಾಡುಪ್ರಾಣಿಗಳಿಂದ ನಿವಾಸಿಗಳನ್ನು ರಕ್ಷಿಸಲು ಸೂಕ್ತವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. </p><p>ಘಟನೆಯ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. </p><p>ಮಾನವ-ಪ್ರಾಣಿ ಸಂಘರ್ಷವನ್ನು ತಡೆಯುವ ಉದ್ದೇಶದಿಂದ ಕಾಡಾನೆಗಳನ್ನು ನಿಯಂತ್ರಿಸಲು ಬೇಲಿ ಹಾಕುವುದು ಸೇರಿದಂತೆ ಇತರ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ವಯನಾಡ್ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್ಒ) ಆಶಿಕ್ ಅಲಿ ಹೇಳಿದರು.</p><p>ಮೃತರ ಕುಟುಂಬಕ್ಕೆ ₹5 ಲಕ್ಷ ಆರ್ಥಿಕ ಸಹಾಯವನ್ನು ಘೋಷಿಸಿದ್ದು, ಕುಟುಂಬದ ಒಬ್ಬ ಸದಸ್ಯರಿಗೆ ತಾತ್ಕಾಲಿಕ ಸರ್ಕಾರಿ ಉದ್ಯೋಗವನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಯನಾಡ್:</strong> ಕರ್ನಾಟಕದ ದುಬಾರೆ ಆನೆ ಶಿಬಿರದಲ್ಲಿ ನಡೆದ ದುರಂತದ ಘಟನೆಯು ಮರೆಯುವ ಮುನ್ನವೇ ಕೇರಳದ ವಯನಾಡ್ನಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆಕೆಯ ಪತಿಯು ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. </p><p>ಮೃತರನ್ನು ಪುತುಮಲ ನಿವಾಸಿ ಜೆಸ್ಸಿ ಎಂದು ಗುರುತಿಸಲಾಗಿದೆ. ಮೆಪ್ಪಾಡಿ ಬಳಿಯ ಕಲ್ಲಡಿಯಲ್ಲಿ ತನ್ನ ಪತಿ ಶಾಜಿ ಅವರೊಂದಿಗೆ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದಾಗ ಕಾಡಾನೆಯು ಅವರ ಮೇಲೆ ದಾಳಿ ಮಾಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕೆಯ ಪತಿಗೆ ಗಂಭೀರ ಗಾಯಗಳಾಗಿವೆ. </p><p>ಈ ಪ್ರದೇಶದಲ್ಲಿ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದು, ಕಾಡುಪ್ರಾಣಿಗಳಿಂದ ನಿವಾಸಿಗಳನ್ನು ರಕ್ಷಿಸಲು ಸೂಕ್ತವಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. </p><p>ಘಟನೆಯ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. </p><p>ಮಾನವ-ಪ್ರಾಣಿ ಸಂಘರ್ಷವನ್ನು ತಡೆಯುವ ಉದ್ದೇಶದಿಂದ ಕಾಡಾನೆಗಳನ್ನು ನಿಯಂತ್ರಿಸಲು ಬೇಲಿ ಹಾಕುವುದು ಸೇರಿದಂತೆ ಇತರ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ವಯನಾಡ್ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್ಒ) ಆಶಿಕ್ ಅಲಿ ಹೇಳಿದರು.</p><p>ಮೃತರ ಕುಟುಂಬಕ್ಕೆ ₹5 ಲಕ್ಷ ಆರ್ಥಿಕ ಸಹಾಯವನ್ನು ಘೋಷಿಸಿದ್ದು, ಕುಟುಂಬದ ಒಬ್ಬ ಸದಸ್ಯರಿಗೆ ತಾತ್ಕಾಲಿಕ ಸರ್ಕಾರಿ ಉದ್ಯೋಗವನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>