<p><strong>ಮುಂಬೈ: </strong>‘ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಎನ್ಐಎ ಬಂಧಿಸಿದ್ದು ಇದು ಮಹಾರಾಷ್ಟ್ರ ಪೊಲೀಸರಿಗೆ ಮಾಡಿದ ಅವಮಾನ. ಸಚಿನ್ ವಾಜೆ ಅವರನ್ನು ಉದ್ದೇಶಪೂರ್ವಕವಾಗಿ ಬಂಧಿಸಲಾಗಿದೆ’ ಎಂದು ಶಿವಸೇನಾ ಆರೋಪಿಸಿದೆ.</p>.<p>ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ, ಸಚಿನ್ ವಾಜೆ ಅವರನ್ನು ಶನಿವಾರ ಬಂಧಿಸಿತ್ತು.</p>.<p>‘ಮುಂಬೈ ಪೊಲೀಸರ ತನಿಖಾ ಸಾಮರ್ಥ್ಯ ಮತ್ತು ಧೈರ್ಯಕ್ಕೆ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಿರುವಾಗ ಈ ಪ್ರಕರಣವನ್ನು ಎನ್ಐಎಗೆ ನೀಡಿರುವುದು ನಿಜಕ್ಕೂ ಆಶ್ಚರ್ಯಕರ’ ಎಂದು ಶಿವಸೇನಾ ಪಕ್ಷದ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<p>‘ಒಂದು ವೇಳೆ ಸಚಿನ್ ವಾಜೆ ತಪ್ಪಿತಸ್ಥರಾಗಿದ್ದಲ್ಲಿ ಮುಂಬೈ ಪೊಲೀಸ್ ಮತ್ತು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳಕ್ಕೆ(ಎಟಿಎಸ್) ಅವರ ವಿರುದ್ಧ ಕ್ರಮಕೈಗೊಳ್ಳುವ ಸಾಮರ್ಥ್ಯವಿದೆ. ಆದರೆ ಕೇಂದ್ರ ತನಿಖಾ ದಳ ಇದನ್ನು ಬಯಸಿರಲಿಲ್ಲ’ ಎಂದು ಸಂಪಾದಕೀಯದಲ್ಲಿ ದೂರಲಾಗಿದೆ.</p>.<p>‘ಅನ್ವಯ್ ನಾಯ್ಕ್ ಆತ್ಮಹತ್ಯೆ ಪ್ರಕರಣದಡಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ಸಚಿನ್ ವಾಜೆ ಬಂಧಿಸಿದ್ದರು. ಅಂದಿನಿಂದ ಬಿಜೆಪಿ ಮತ್ತು ಕೇಂದ್ರ ಸರ್ಕಾರವು ಸಚಿನ್ ವಾಜೆಯನ್ನು ಗುರಿಯಾಗಿಸಿಕೊಂಡಿದೆ’ ಎಂದು ‘ಸಾಮ್ನಾ’ ಪತ್ರಿಕೆಯಲ್ಲಿ ಆರೋಪಿಸಲಾಗಿದೆ.</p>.<p>2018ರ ಒಳಾಂಗಣ ವಿನ್ಯಾಸಕಾರ (ಇಂಟೀರಿಯರ್ ಡಿಸೈನರ್) ಅನ್ವಯ್ ನಾಯ್ಕ್ ಮತ್ತು ಅವರ ತಾಯಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ನವೆಂಬರ್ 4 ರಂದು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಸೇರಿದಂತೆ ಮೂವರನ್ನು ರಾಯಗಡ್ ಪೊಲೀಸರು ಬಂಧಿಸಿದ್ದರು.</p>.<p>ಬಂಧನಕ್ಕೊಳಗಾದ ಕೆಲವೇ ದಿನಗಳಲ್ಲಿ ಸುಪ್ರೀಂಕೋರ್ಟ್ ಅವರಿಗೆ ಜಾಮೀನು ಕೂಡ ಮಂಜೂರು ಮಾಡಿತ್ತು.</p>.<p>ವಾಜೆ ಅವರು ಈವರೆಗೆ ಒಟ್ಟು 63 ಎನ್ಕೌಂಟರ್ಗಳನ್ನು ಮಾಡಿದ್ದಾರೆ. ಅಂಬಾನಿ ಮನೆ ಮುಂದೆ ಪತ್ತೆಯಾದ ಕಾರಿನ ಮಾಲೀಕ ಮುನ್ಸುಖ್ ಹಿರೇನ್ ಹತ್ಯೆಯ ಆರೋಪ ಕೂಡ ಸಚಿನ್ ವಾಜೆ ಮೇಲಿದೆ.</p>.<p>‘ಈ ಪ್ರಕರಣದಲ್ಲಿ ಸತ್ಯ ಬೆಳಕಿಗೆ ಬರುತ್ತದೆ ಎಂಬ ನಿರೀಕ್ಷೆಯಿದೆ’ ಎಂದು ಸಂಪಾದಕೀಯದಲ್ಲಿ ತಿಳಿಸಲಾಗಿದೆ.</p>.<p>‘ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣ ಮತ್ತು ಹಿರೇನ್ ಹತ್ಯೆ ಪ್ರಕರಣವನ್ನು ಎಟಿಎಸ್ಗೆ ನೀಡಲಾಗಿತ್ತು. ಆದರೆ ಕೇಂದ್ರ ಸರ್ಕಾರವು ಈ ಪ್ರಕರಣವನ್ನು ಎನ್ಐಎಗೆ ನೀಡಿತು. ಆದರೆ ಈ ಪ್ರಕರಣಗಳನ್ನು ತರಾತುರಿಯಲ್ಲಿ ಹಸ್ತಾಂತರಿಸುವ ಅಗತ್ಯವಿರಲಿಲ್ಲ’ ಎಂದು ಶಿವಸೇನಾ ಹೇಳಿದೆ.</p>.<p>‘ಪುಲ್ವಾಮ ದಾಳಿಯಲ್ಲಿ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾದರು. ಆದರೆ ಈ ದಾಳಿಗೆ ಬಳಸಲಾದ ಸ್ಫೋಟಕಗಳು ಪುಲ್ವಾಮಗೆ ಹೇಗೆ ತಲುಪಿದೆ ಎಂಬುದು ರಹಸ್ಯವಾಗಿಯೇ ಉಳಿದಿದೆ. ಕಾಶ್ಮೀರದ ಕಣಿವೆಯಲ್ಲಿ ಪ್ರತಿನಿತ್ಯ ಸ್ಫೋಟಕಗಳು ಪತ್ತೆಯಾಗುತ್ತದೆ. ಅವುಗಳ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆಯೇ’ ಎಂದು ಸಂಪಾದಕೀಯದಲ್ಲಿ ಪ್ರಶ್ನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>‘ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಎನ್ಐಎ ಬಂಧಿಸಿದ್ದು ಇದು ಮಹಾರಾಷ್ಟ್ರ ಪೊಲೀಸರಿಗೆ ಮಾಡಿದ ಅವಮಾನ. ಸಚಿನ್ ವಾಜೆ ಅವರನ್ನು ಉದ್ದೇಶಪೂರ್ವಕವಾಗಿ ಬಂಧಿಸಲಾಗಿದೆ’ ಎಂದು ಶಿವಸೇನಾ ಆರೋಪಿಸಿದೆ.</p>.<p>ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ, ಸಚಿನ್ ವಾಜೆ ಅವರನ್ನು ಶನಿವಾರ ಬಂಧಿಸಿತ್ತು.</p>.<p>‘ಮುಂಬೈ ಪೊಲೀಸರ ತನಿಖಾ ಸಾಮರ್ಥ್ಯ ಮತ್ತು ಧೈರ್ಯಕ್ಕೆ ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಹೀಗಿರುವಾಗ ಈ ಪ್ರಕರಣವನ್ನು ಎನ್ಐಎಗೆ ನೀಡಿರುವುದು ನಿಜಕ್ಕೂ ಆಶ್ಚರ್ಯಕರ’ ಎಂದು ಶಿವಸೇನಾ ಪಕ್ಷದ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಲಾಗಿದೆ.</p>.<p>‘ಒಂದು ವೇಳೆ ಸಚಿನ್ ವಾಜೆ ತಪ್ಪಿತಸ್ಥರಾಗಿದ್ದಲ್ಲಿ ಮುಂಬೈ ಪೊಲೀಸ್ ಮತ್ತು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳಕ್ಕೆ(ಎಟಿಎಸ್) ಅವರ ವಿರುದ್ಧ ಕ್ರಮಕೈಗೊಳ್ಳುವ ಸಾಮರ್ಥ್ಯವಿದೆ. ಆದರೆ ಕೇಂದ್ರ ತನಿಖಾ ದಳ ಇದನ್ನು ಬಯಸಿರಲಿಲ್ಲ’ ಎಂದು ಸಂಪಾದಕೀಯದಲ್ಲಿ ದೂರಲಾಗಿದೆ.</p>.<p>‘ಅನ್ವಯ್ ನಾಯ್ಕ್ ಆತ್ಮಹತ್ಯೆ ಪ್ರಕರಣದಡಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ಸಚಿನ್ ವಾಜೆ ಬಂಧಿಸಿದ್ದರು. ಅಂದಿನಿಂದ ಬಿಜೆಪಿ ಮತ್ತು ಕೇಂದ್ರ ಸರ್ಕಾರವು ಸಚಿನ್ ವಾಜೆಯನ್ನು ಗುರಿಯಾಗಿಸಿಕೊಂಡಿದೆ’ ಎಂದು ‘ಸಾಮ್ನಾ’ ಪತ್ರಿಕೆಯಲ್ಲಿ ಆರೋಪಿಸಲಾಗಿದೆ.</p>.<p>2018ರ ಒಳಾಂಗಣ ವಿನ್ಯಾಸಕಾರ (ಇಂಟೀರಿಯರ್ ಡಿಸೈನರ್) ಅನ್ವಯ್ ನಾಯ್ಕ್ ಮತ್ತು ಅವರ ತಾಯಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ನವೆಂಬರ್ 4 ರಂದು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಸೇರಿದಂತೆ ಮೂವರನ್ನು ರಾಯಗಡ್ ಪೊಲೀಸರು ಬಂಧಿಸಿದ್ದರು.</p>.<p>ಬಂಧನಕ್ಕೊಳಗಾದ ಕೆಲವೇ ದಿನಗಳಲ್ಲಿ ಸುಪ್ರೀಂಕೋರ್ಟ್ ಅವರಿಗೆ ಜಾಮೀನು ಕೂಡ ಮಂಜೂರು ಮಾಡಿತ್ತು.</p>.<p>ವಾಜೆ ಅವರು ಈವರೆಗೆ ಒಟ್ಟು 63 ಎನ್ಕೌಂಟರ್ಗಳನ್ನು ಮಾಡಿದ್ದಾರೆ. ಅಂಬಾನಿ ಮನೆ ಮುಂದೆ ಪತ್ತೆಯಾದ ಕಾರಿನ ಮಾಲೀಕ ಮುನ್ಸುಖ್ ಹಿರೇನ್ ಹತ್ಯೆಯ ಆರೋಪ ಕೂಡ ಸಚಿನ್ ವಾಜೆ ಮೇಲಿದೆ.</p>.<p>‘ಈ ಪ್ರಕರಣದಲ್ಲಿ ಸತ್ಯ ಬೆಳಕಿಗೆ ಬರುತ್ತದೆ ಎಂಬ ನಿರೀಕ್ಷೆಯಿದೆ’ ಎಂದು ಸಂಪಾದಕೀಯದಲ್ಲಿ ತಿಳಿಸಲಾಗಿದೆ.</p>.<p>‘ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣ ಮತ್ತು ಹಿರೇನ್ ಹತ್ಯೆ ಪ್ರಕರಣವನ್ನು ಎಟಿಎಸ್ಗೆ ನೀಡಲಾಗಿತ್ತು. ಆದರೆ ಕೇಂದ್ರ ಸರ್ಕಾರವು ಈ ಪ್ರಕರಣವನ್ನು ಎನ್ಐಎಗೆ ನೀಡಿತು. ಆದರೆ ಈ ಪ್ರಕರಣಗಳನ್ನು ತರಾತುರಿಯಲ್ಲಿ ಹಸ್ತಾಂತರಿಸುವ ಅಗತ್ಯವಿರಲಿಲ್ಲ’ ಎಂದು ಶಿವಸೇನಾ ಹೇಳಿದೆ.</p>.<p>‘ಪುಲ್ವಾಮ ದಾಳಿಯಲ್ಲಿ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾದರು. ಆದರೆ ಈ ದಾಳಿಗೆ ಬಳಸಲಾದ ಸ್ಫೋಟಕಗಳು ಪುಲ್ವಾಮಗೆ ಹೇಗೆ ತಲುಪಿದೆ ಎಂಬುದು ರಹಸ್ಯವಾಗಿಯೇ ಉಳಿದಿದೆ. ಕಾಶ್ಮೀರದ ಕಣಿವೆಯಲ್ಲಿ ಪ್ರತಿನಿತ್ಯ ಸ್ಫೋಟಕಗಳು ಪತ್ತೆಯಾಗುತ್ತದೆ. ಅವುಗಳ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆಯೇ’ ಎಂದು ಸಂಪಾದಕೀಯದಲ್ಲಿ ಪ್ರಶ್ನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>