<p><strong>ಕೋಲ್ಕತ್ತ:</strong> ಚುನಾವಣೋತ್ತರ ಹಿಂಸಾಚಾರದ ವೇಳೆ ಮನೆ ಬಿಟ್ಟು ಹೋದವರನ್ನು ಅವರವರ ಮನೆಗಳಿಗೆ ವಾಪಸಾಗುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಲ್ಕತ್ತ ಹೈಕೋರ್ಟ್ ಸೂಚಿಸಿದೆ.</p>.<p>ಹಿಂಸಾಚಾರದಿಂದ ಅನೇಕರು ಬಲವಂತವಾಗಿ ಮನೆ ಬಿಟ್ಟು ತೆರಳಬೇಕಾದ ಸಂದರ್ಭ ಬಂದಿತ್ತು ಎಂಬ ದೂರುಗಳ ಬಗ್ಗೆ ಐವರು ನ್ಯಾಯಾಧೀಶರ ಪೀಠ ವಿಚಾರಣೆ ನಡೆಸಿದೆ. ರಾಜ್ಯದ ಹಲವು ಜಿಲ್ಲೆಗಳಿಂದ ದೂರುಗಳು ಬಂದಿವೆ ಎಂದು ಪೀಠ ಹೇಳಿದೆ.</p>.<p>ಹಿಂಸಾಚಾರದಿಂದ ತೊಂದರೆಗೀಡಾದವರು ರಾಜ್ಯ ಗೃಹ ಕಾರ್ಯದರ್ಶಿ ನೀಡಿರುವ ಅಧಿಕೃತ ಇ–ಮೇಲ್ ಐಡಿಗೆ ದೂರು ಸಲ್ಲಿಸಬಹುದು ಎಂದು ನ್ಯಾಯಪೀಠ ಹೇಳಿದೆ.</p>.<p><strong>ಓದಿ:</strong><a href="https://www.prajavani.net/india-news/sc-seeks-centre-wb-replies-on-plea-to-prevent-post-poll-violence-exodus-from-state-833236.html" itemprop="url">ಬಂಗಾಳ ಹಿಂಸಾಚಾರ: ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ</a></p>.<p>ಈ ಕುರಿತು ಜೂನ್ 11ರಂದು ಮತ್ತೆ ವಿಚಾರಣೆ ನಡೆಯಲಿದೆ ಎಂದೂ ಪೀಠ ತಿಳಿಸಿದೆ.</p>.<p>ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾದರೆ ಸಂತ್ರಸ್ತರು ಮನೆಗಳಿಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ಕೋರ್ಟ್ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದೂ ಪೀಠ ಎಚ್ಚರಿಕೆ ನೀಡಿದೆ.</p>.<p>ತೊಂದರೆಗೀಡಾಗಿರುವವರು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಇ–ಮೇಲ್ ಐಡಿಗೂ ದೂರಿನ ಪ್ರತಿಯನ್ನು ಕಳುಹಿಸಬಹುದು ಎಂದು ನ್ಯಾಯಪೀಠ ಹೇಳಿದೆ.</p>.<p>ಕಾನೂನು–ಸುವ್ಯವಸ್ಥೆ ಕಾಪಾಡಿಕೊಳ್ಳುವುದನ್ನು ಖಾತರಿಪಡಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದೂ ಕೋರ್ಟ್ ಹೇಳಿದೆ.</p>.<p><strong>ಓದಿ:</strong><a href="https://www.prajavani.net/india-news/the-union-home-ministry-has-asked-west-bengal-governor-jagdeep-dhankhar-to-give-a-report-on-the-law-828441.html" itemprop="url">ಪಶ್ಚಿಮ ಬಂಗಾಳ: ರಾಜ್ಯಪಾಲರಿಂದ ಪರಿಸ್ಥಿತಿಯ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ</a></p>.<p>ಮೇ 2ರಂದು ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿತ್ತು. ಆ ಬಳಿಕ ರಾಜ್ಯದ ಹಲವೆಡೆ ಹಿಂಸಾಚಾರ ನಡೆದಿತ್ತು. ಹಿಂಸಾಚಾರದಿಂದಾಗಿ ಅನೇಕರು ಮನೆ ಬಿಟ್ಟು ಓಡಿಹೋಗಬೇಕಾದ ಸನ್ನಿವೇಶ ಸೃಷ್ಟಿಯಾಗಿತ್ತು ಎಂದೂ ವರದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಚುನಾವಣೋತ್ತರ ಹಿಂಸಾಚಾರದ ವೇಳೆ ಮನೆ ಬಿಟ್ಟು ಹೋದವರನ್ನು ಅವರವರ ಮನೆಗಳಿಗೆ ವಾಪಸಾಗುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಲ್ಕತ್ತ ಹೈಕೋರ್ಟ್ ಸೂಚಿಸಿದೆ.</p>.<p>ಹಿಂಸಾಚಾರದಿಂದ ಅನೇಕರು ಬಲವಂತವಾಗಿ ಮನೆ ಬಿಟ್ಟು ತೆರಳಬೇಕಾದ ಸಂದರ್ಭ ಬಂದಿತ್ತು ಎಂಬ ದೂರುಗಳ ಬಗ್ಗೆ ಐವರು ನ್ಯಾಯಾಧೀಶರ ಪೀಠ ವಿಚಾರಣೆ ನಡೆಸಿದೆ. ರಾಜ್ಯದ ಹಲವು ಜಿಲ್ಲೆಗಳಿಂದ ದೂರುಗಳು ಬಂದಿವೆ ಎಂದು ಪೀಠ ಹೇಳಿದೆ.</p>.<p>ಹಿಂಸಾಚಾರದಿಂದ ತೊಂದರೆಗೀಡಾದವರು ರಾಜ್ಯ ಗೃಹ ಕಾರ್ಯದರ್ಶಿ ನೀಡಿರುವ ಅಧಿಕೃತ ಇ–ಮೇಲ್ ಐಡಿಗೆ ದೂರು ಸಲ್ಲಿಸಬಹುದು ಎಂದು ನ್ಯಾಯಪೀಠ ಹೇಳಿದೆ.</p>.<p><strong>ಓದಿ:</strong><a href="https://www.prajavani.net/india-news/sc-seeks-centre-wb-replies-on-plea-to-prevent-post-poll-violence-exodus-from-state-833236.html" itemprop="url">ಬಂಗಾಳ ಹಿಂಸಾಚಾರ: ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ</a></p>.<p>ಈ ಕುರಿತು ಜೂನ್ 11ರಂದು ಮತ್ತೆ ವಿಚಾರಣೆ ನಡೆಯಲಿದೆ ಎಂದೂ ಪೀಠ ತಿಳಿಸಿದೆ.</p>.<p>ಅಧಿಕಾರಿಗಳು ಕ್ರಮ ಕೈಗೊಳ್ಳಲು ವಿಫಲರಾದರೆ ಸಂತ್ರಸ್ತರು ಮನೆಗಳಿಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ಕೋರ್ಟ್ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದೂ ಪೀಠ ಎಚ್ಚರಿಕೆ ನೀಡಿದೆ.</p>.<p>ತೊಂದರೆಗೀಡಾಗಿರುವವರು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಇ–ಮೇಲ್ ಐಡಿಗೂ ದೂರಿನ ಪ್ರತಿಯನ್ನು ಕಳುಹಿಸಬಹುದು ಎಂದು ನ್ಯಾಯಪೀಠ ಹೇಳಿದೆ.</p>.<p>ಕಾನೂನು–ಸುವ್ಯವಸ್ಥೆ ಕಾಪಾಡಿಕೊಳ್ಳುವುದನ್ನು ಖಾತರಿಪಡಿಸುವುದು ರಾಜ್ಯ ಸರ್ಕಾರದ ಕರ್ತವ್ಯ ಎಂದೂ ಕೋರ್ಟ್ ಹೇಳಿದೆ.</p>.<p><strong>ಓದಿ:</strong><a href="https://www.prajavani.net/india-news/the-union-home-ministry-has-asked-west-bengal-governor-jagdeep-dhankhar-to-give-a-report-on-the-law-828441.html" itemprop="url">ಪಶ್ಚಿಮ ಬಂಗಾಳ: ರಾಜ್ಯಪಾಲರಿಂದ ಪರಿಸ್ಥಿತಿಯ ವರದಿ ಕೇಳಿದ ಕೇಂದ್ರ ಗೃಹ ಸಚಿವಾಲಯ</a></p>.<p>ಮೇ 2ರಂದು ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿತ್ತು. ಆ ಬಳಿಕ ರಾಜ್ಯದ ಹಲವೆಡೆ ಹಿಂಸಾಚಾರ ನಡೆದಿತ್ತು. ಹಿಂಸಾಚಾರದಿಂದಾಗಿ ಅನೇಕರು ಮನೆ ಬಿಟ್ಟು ಓಡಿಹೋಗಬೇಕಾದ ಸನ್ನಿವೇಶ ಸೃಷ್ಟಿಯಾಗಿತ್ತು ಎಂದೂ ವರದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>