<p><strong>ನವದೆಹಲಿ</strong>: ‘ವಿಚಾರಣೆ ನಡೆಯುತ್ತಿರುವ ಪ್ರಕರಣಗಳಿಗೆ ಸಂಬಂಧಿಸಿ, ಅರ್ಧಸತ್ಯ ಹಾಗೂ ತಪ್ಪುಮಾಹಿತಿಯ ನಿರಂತರ ಪ್ರಸಾರವು ಜನರ ಗ್ರಹಿಕೆ ಮೇಲೆ ಪರಿಣಾಮ ಬೀರುತ್ತದೆ’ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.</p>.<p>ಅಲ್ಲದೇ, ‘ಪ್ರಚಾರ ಗಿಟ್ಟಿಸಲು ಮತ್ತು ಸಂಕಥನ ಸೃಷ್ಟಿಸುವ ಉದ್ದೇಶದಿಂದ ಬಾಕಿ ಪ್ರಕರಣಗಳ ಕುರಿತು ವರದಿಗಳನ್ನು ಪ್ರಕಟಿಸಿದರೂ ಅದು ಈ ನ್ಯಾಯಾಲಯದ ಕಾರ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದೂ ಹೇಳಿದೆ.</p>.<p>ಕೆಲವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ವೇಳೆ ಅಗತ್ಯ ಪ್ರಕ್ರಿಯೆಗಳ ಪಾಲನೆ ಮಾಡಲಾಗಿಲ್ಲ ಎಂಬ ಆರೋಪಗಳಿದ್ದು, ಅವರನ್ನು ಮರಳಿ ಕರೆಸಿಕೊಳ್ಳಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಹಾಗೂ ವಿಪುಲ್ ಎಂ.ಪಾಂಚೋಲಿ ಅವರು ಇದ್ದ ನ್ಯಾಯಪೀಠ ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.</p>.<p>ಈ ಪ್ರಕರಣದಲ್ಲಿ ಕಲ್ಕತ್ತ ಹೈಕೋರ್ಟ್ನ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ಕುರಿತ ವಿಚಾರಣೆಯನ್ನು ಜನವರಿ 6ರಂದು ನಡೆಸುವುದಾಗಿ ಪೀಠವು ಹೇಳಿತು.</p>.<p><strong>ಪ್ರಕರಣವೇನು?</strong></p><p>ಅಕ್ರಮ ವಲಸಿಗರು ಎಂಬ ಕಾರಣಕ್ಕಾಗಿ ಗರ್ಭಿಣಿ ಸುನಾಲಿ ಖಾತೂನ್ ಹಾಗೂ ಆಕೆಯ 8 ವರ್ಷದ ಮಗನನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಆಕೆಯ ತಂದೆ, ಕಲ್ಕತ್ತ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸುನಾಲಿ ಕುಟುಂಬ ದೆಹಲಿಯ ರೋಹಿಣಿ ಪ್ರದೇಶದಲ್ಲಿ ವಾಸವಿತ್ತು.</p>.<p>ಮಾನವೀಯ ಆಧಾರದಲ್ಲಿ ಈ ಇಬ್ಬರನ್ನು ಮತ್ತೆ ಭಾರತಕ್ಕೆ ಕರೆತರಲು ಕಲ್ಕತ್ತ ಹೈಕೋರ್ಟ್ ಅದೇಶಿಸಿತ್ತು. ಹೈಕೋರ್ಟ್ನ ಈ ಆದೇಶ ಪ್ರಶ್ನಿಸಿ, ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.</p>.<p>ಸದ್ಯ, ಆಕೆ ಹಾಗೂ ಪುತ್ರ ಪಶ್ಚಿಮ ಬಂಗಾಳದ ಬಿರ್ಭೂಮ್ನಲ್ಲಿರುವ ತಂದೆಯ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಅಲ್ಲಿಯೇ, ಆಕೆಗೆ ವೈದ್ಯಕೀಯ ನೆರವು ನೀಡಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಲಾಯಿತು. </p>.<p>ವಿಚಾರಣೆ ವೇಳೆ, ಈ ಪ್ರಕರಣ ಕುರಿತು ಇಂಗ್ಲಿಷ್ ದೈನಿಕವೊಂದರಲ್ಲಿ ಪ್ರಕಟವಾದ ವರದಿಯನ್ನು ಒಪ್ಪಲಾಗದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನ್ಯಾಯಪೀಠಕ್ಕೆ ತಿಳಿಸಿದರು.</p>.<p>‘ವಿಷಯವನ್ನು ಜನಪ್ರಿಯ ಹಾಗೂ ಸಂವೇದನಾಶೀಲಗೊಳಿಸುವ ಉದ್ದೇಶದಿಂದ ಈ ವರದಿ ಪ್ರಕಟಿಸಲಾಗಿದೆ. ನ್ಯಾಯಾಲಯ ನೀಡುವ ಆದೇಶದ ಮೇಲೆ ಪ್ರಭಾವ ಬೀರುವುದಕ್ಕಾಗಿ ನಿರ್ದಿಷ್ಟ ರೀತಿಯ ಸಂಕಥನ ಸೃಷ್ಟಿಸಲು ಪ್ರಯತ್ನಿಸಲಾಗಿದೆ’ ಎಂದು ಮೆಹ್ತಾ ಹೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಬಾಗ್ಚಿ,‘ಪ್ರಚಾರ ಮತ್ತು ಸುಳ್ಳು ಪ್ರಚಾರಕ್ಕಾಗಿ ನಡೆಸುವ ಕಸರತ್ತುಗಳ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ವ್ಯಕ್ತಿಗಳ ಬದುಕಿನ ಮೇಲೆ ಈ ಸಂಕಥನಗಳು ಸಹ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ಹೇಳಿದರು.</p>.<p>‘ಇಂತಹ ವಿಚಾರಗಳನ್ನು ನಿರ್ಲಕ್ಷಿಸಿ’ ಎಂದು ಮೆಹ್ತಾ ಅವರಿಗೆ ಸಲಹೆ ನೀಡಿದ ಸಿಜೆಐ ಸೂರ್ಯ ಕಾಂತ್, ‘ತಾತ್ವಿಕವಾಗಿ ನೋಡುವುದಾದರೆ, ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಕುರಿತು ತಪ್ಪು ಮಾಹಿತಿ ಬಿತ್ತರಿಸಬಾರದು’ ಎಂದರು.</p>.<p>ಪಶ್ಚಿಮ ಬಂಗಾಳ ಸರ್ಕಾರ ಪರ ಹಿರಿಯ ವಕೀಲ ಕಪಿಲ್ ಸಿಬಲ್, ಅರ್ಜಿದಾರರೊಬ್ಬರ ಪರ ಸಂಜಯ್ ಹೆಗ್ಡೆ ಹಾಜರಿದ್ದರು.</p>.<div><blockquote>ಇಂತಹ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಕೈಗೆತ್ತಿಕೊಳ್ಳಲಿದೆ ಎಂದು ವರದಿ ಮಾಡುವುದು ಸರಿ. ಆದರೆ ಪ್ರಕರಣ ಕುರಿತು ನಿಮ್ಮ ಅಭಿಪ್ರಾಯ ಹೇಳಿದಾಗ ಸಮಸ್ಯೆ ಉದ್ಭವಿಸುತ್ತದೆ. ಇದು ಜನರ ಗ್ರಹಿಕೆ ಮೇಲೆ ಪರಿಣಾಮ ಬೀರುತ್ತದೆ.</blockquote><span class="attribution">– ಸೂರ್ಯ ಕಾಂತ್, ಸಿಜೆಐ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ವಿಚಾರಣೆ ನಡೆಯುತ್ತಿರುವ ಪ್ರಕರಣಗಳಿಗೆ ಸಂಬಂಧಿಸಿ, ಅರ್ಧಸತ್ಯ ಹಾಗೂ ತಪ್ಪುಮಾಹಿತಿಯ ನಿರಂತರ ಪ್ರಸಾರವು ಜನರ ಗ್ರಹಿಕೆ ಮೇಲೆ ಪರಿಣಾಮ ಬೀರುತ್ತದೆ’ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ.</p>.<p>ಅಲ್ಲದೇ, ‘ಪ್ರಚಾರ ಗಿಟ್ಟಿಸಲು ಮತ್ತು ಸಂಕಥನ ಸೃಷ್ಟಿಸುವ ಉದ್ದೇಶದಿಂದ ಬಾಕಿ ಪ್ರಕರಣಗಳ ಕುರಿತು ವರದಿಗಳನ್ನು ಪ್ರಕಟಿಸಿದರೂ ಅದು ಈ ನ್ಯಾಯಾಲಯದ ಕಾರ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದೂ ಹೇಳಿದೆ.</p>.<p>ಕೆಲವರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ವೇಳೆ ಅಗತ್ಯ ಪ್ರಕ್ರಿಯೆಗಳ ಪಾಲನೆ ಮಾಡಲಾಗಿಲ್ಲ ಎಂಬ ಆರೋಪಗಳಿದ್ದು, ಅವರನ್ನು ಮರಳಿ ಕರೆಸಿಕೊಳ್ಳಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದೆ.</p>.<p>ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಹಾಗೂ ವಿಪುಲ್ ಎಂ.ಪಾಂಚೋಲಿ ಅವರು ಇದ್ದ ನ್ಯಾಯಪೀಠ ಈ ಕುರಿತ ಅರ್ಜಿ ವಿಚಾರಣೆ ನಡೆಸಿತು.</p>.<p>ಈ ಪ್ರಕರಣದಲ್ಲಿ ಕಲ್ಕತ್ತ ಹೈಕೋರ್ಟ್ನ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ಕುರಿತ ವಿಚಾರಣೆಯನ್ನು ಜನವರಿ 6ರಂದು ನಡೆಸುವುದಾಗಿ ಪೀಠವು ಹೇಳಿತು.</p>.<p><strong>ಪ್ರಕರಣವೇನು?</strong></p><p>ಅಕ್ರಮ ವಲಸಿಗರು ಎಂಬ ಕಾರಣಕ್ಕಾಗಿ ಗರ್ಭಿಣಿ ಸುನಾಲಿ ಖಾತೂನ್ ಹಾಗೂ ಆಕೆಯ 8 ವರ್ಷದ ಮಗನನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಆಕೆಯ ತಂದೆ, ಕಲ್ಕತ್ತ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಸುನಾಲಿ ಕುಟುಂಬ ದೆಹಲಿಯ ರೋಹಿಣಿ ಪ್ರದೇಶದಲ್ಲಿ ವಾಸವಿತ್ತು.</p>.<p>ಮಾನವೀಯ ಆಧಾರದಲ್ಲಿ ಈ ಇಬ್ಬರನ್ನು ಮತ್ತೆ ಭಾರತಕ್ಕೆ ಕರೆತರಲು ಕಲ್ಕತ್ತ ಹೈಕೋರ್ಟ್ ಅದೇಶಿಸಿತ್ತು. ಹೈಕೋರ್ಟ್ನ ಈ ಆದೇಶ ಪ್ರಶ್ನಿಸಿ, ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದೆ.</p>.<p>ಸದ್ಯ, ಆಕೆ ಹಾಗೂ ಪುತ್ರ ಪಶ್ಚಿಮ ಬಂಗಾಳದ ಬಿರ್ಭೂಮ್ನಲ್ಲಿರುವ ತಂದೆಯ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಅಲ್ಲಿಯೇ, ಆಕೆಗೆ ವೈದ್ಯಕೀಯ ನೆರವು ನೀಡಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಲಾಯಿತು. </p>.<p>ವಿಚಾರಣೆ ವೇಳೆ, ಈ ಪ್ರಕರಣ ಕುರಿತು ಇಂಗ್ಲಿಷ್ ದೈನಿಕವೊಂದರಲ್ಲಿ ಪ್ರಕಟವಾದ ವರದಿಯನ್ನು ಒಪ್ಪಲಾಗದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ನ್ಯಾಯಪೀಠಕ್ಕೆ ತಿಳಿಸಿದರು.</p>.<p>‘ವಿಷಯವನ್ನು ಜನಪ್ರಿಯ ಹಾಗೂ ಸಂವೇದನಾಶೀಲಗೊಳಿಸುವ ಉದ್ದೇಶದಿಂದ ಈ ವರದಿ ಪ್ರಕಟಿಸಲಾಗಿದೆ. ನ್ಯಾಯಾಲಯ ನೀಡುವ ಆದೇಶದ ಮೇಲೆ ಪ್ರಭಾವ ಬೀರುವುದಕ್ಕಾಗಿ ನಿರ್ದಿಷ್ಟ ರೀತಿಯ ಸಂಕಥನ ಸೃಷ್ಟಿಸಲು ಪ್ರಯತ್ನಿಸಲಾಗಿದೆ’ ಎಂದು ಮೆಹ್ತಾ ಹೇಳಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಬಾಗ್ಚಿ,‘ಪ್ರಚಾರ ಮತ್ತು ಸುಳ್ಳು ಪ್ರಚಾರಕ್ಕಾಗಿ ನಡೆಸುವ ಕಸರತ್ತುಗಳ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ವ್ಯಕ್ತಿಗಳ ಬದುಕಿನ ಮೇಲೆ ಈ ಸಂಕಥನಗಳು ಸಹ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ಹೇಳಿದರು.</p>.<p>‘ಇಂತಹ ವಿಚಾರಗಳನ್ನು ನಿರ್ಲಕ್ಷಿಸಿ’ ಎಂದು ಮೆಹ್ತಾ ಅವರಿಗೆ ಸಲಹೆ ನೀಡಿದ ಸಿಜೆಐ ಸೂರ್ಯ ಕಾಂತ್, ‘ತಾತ್ವಿಕವಾಗಿ ನೋಡುವುದಾದರೆ, ವಿಚಾರಣೆ ಹಂತದಲ್ಲಿರುವ ಪ್ರಕರಣಗಳ ಕುರಿತು ತಪ್ಪು ಮಾಹಿತಿ ಬಿತ್ತರಿಸಬಾರದು’ ಎಂದರು.</p>.<p>ಪಶ್ಚಿಮ ಬಂಗಾಳ ಸರ್ಕಾರ ಪರ ಹಿರಿಯ ವಕೀಲ ಕಪಿಲ್ ಸಿಬಲ್, ಅರ್ಜಿದಾರರೊಬ್ಬರ ಪರ ಸಂಜಯ್ ಹೆಗ್ಡೆ ಹಾಜರಿದ್ದರು.</p>.<div><blockquote>ಇಂತಹ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಕೈಗೆತ್ತಿಕೊಳ್ಳಲಿದೆ ಎಂದು ವರದಿ ಮಾಡುವುದು ಸರಿ. ಆದರೆ ಪ್ರಕರಣ ಕುರಿತು ನಿಮ್ಮ ಅಭಿಪ್ರಾಯ ಹೇಳಿದಾಗ ಸಮಸ್ಯೆ ಉದ್ಭವಿಸುತ್ತದೆ. ಇದು ಜನರ ಗ್ರಹಿಕೆ ಮೇಲೆ ಪರಿಣಾಮ ಬೀರುತ್ತದೆ.</blockquote><span class="attribution">– ಸೂರ್ಯ ಕಾಂತ್, ಸಿಜೆಐ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>