<p><strong>ನವದೆಹಲಿ:</strong> ನಾವು ಅಕ್ಟೋಬರ್ ವರೆಗೆ ಸಮಯ ನೀಡಿದ್ದು, ನಮ್ಮ ಮಾತನ್ನು ಆಲಿಸದಿದ್ದರೆ ದೇಶವ್ಯಾಪಿ 40 ಲಕ್ಷ ಟ್ರ್ಯಾಕ್ಟರ್ಗಳ ರ್ಯಾಲಿ ನಡೆಸಲಿದ್ದೇವೆ ಎಂದು ಕೇಂದ್ರ ಸರ್ಕಾರಕ್ಕೆ ರೈತ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ರವಾನಿಸಿದ್ದಾರೆ.</p>.<p>ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನವೆಂಬರ್ 26ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದುವರೆಗೆ ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಯಾವುದೇ ಪ್ರಯೋಜನವುಂಟಾಗಲಿಲ್ಲ.</p>.<p>ಇದನ್ನೂ ಓದಿ:<a href="https://www.prajavani.net/india-news/there-is-no-talk-without-repression-801944.html" itemprop="url">ದಬ್ಬಾಳಿಕೆ ನಿಲ್ಲದೆ ಮಾತುಕತೆ ಇಲ್ಲ: ಕಿಸಾನ್ ಸಂಯುಕ್ತ ಮೋರ್ಚಾ </a></p>.<p>ಈ ನಡುವೆ ಜನವರಿ 26 ಗಣರಾಜ್ಯೋತ್ಸವ ದಿನದಂದು ನಡೆದ ಟ್ರ್ಯಾಕ್ಟರ್ ಪೆರೇಡ್ನಲ್ಲಿ ಭಾರಿ ಹಿಂಸಾಚಾರ ನಡೆದಿತ್ತು. ಇದರಿಂದಾಗಿ ದೆಹಲಿ ಪ್ರತಿಭಟನಾ ಸ್ಥಳಗಳಲ್ಲಿ ಬಿಗು ಪೊಲೀಸ್ಬಂದೋಬಸ್ತ್ಏರ್ಪಡಿಸಿರುವ ಸರ್ಕಾರವು, ಅಂತರ್ಜಾಲ ಸೇವೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಡಿತಗೊಳಿಸಿತ್ತು.</p>.<p>ಈ ಎಲ್ಲ ಸವಾಲುಗಳನ್ನು ನೆಟ್ಟಿ ನಿಂತು ಪ್ರತಿಭಟನೆಯನ್ನು ಮುಂದುವರಿಸಿರುವ ರೈತರು ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂಜರಿಯುವುದಿಲ್ಲ ಎಂಬ ಅಚಲ ನಿರ್ಧಾರವನ್ನು ಕೈಗೊಂಡಿತ್ತು. ಅಲ್ಲದೆ ಸರ್ಕಾರದ ಜೊತೆಗೆ ಮಾತುಕತೆ ಮುಂದುವರಿಸಲು ಸಿದ್ಧ ಎಂದು ಹೇಳಿಕೊಂಡಿತ್ತು.</p>.<p>ಏತನ್ಮಧ್ಯೆ ಸರ್ಕಾರಕ್ಕೆ ಅಕ್ಟೋಬರ್ ವರೆಗೆ ಸಮಯ ನೀಡಿದ್ದೇವೆ ಎಂದು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಮುಖಂಡ ಹಾಗೂ ವಕ್ತಾರ ರಾಕೇಶ್ ಟಿಕಾಯತ್ ಹೇಳಿಕೆ ನೀಡಿದ್ದಾರೆ.</p>.<p>ಹಾಗೊಂದು ವೇಳೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ದೇಶವ್ಯಾಪ್ತಿ 40 ಲಕ್ಷ ಟ್ರ್ಯಾಕ್ಟರ್ಗಳ ರ್ಯಾಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.<br /><br />ಕಾನೂನು ಹಿಂತೆಗೆದುಕೊಳ್ಳದಿದ್ದರೆ ಮನೆಗೆ ಹಿಂತಿರುಗುವುದಿಲ್ಲ ಎಂಬುದು ನಮ್ಮ ಘೋಷಣೆಯಾಗಿದೆ. ಈ ಆಂದೋಲನವು ಅಕ್ಟೋಬರ್ನೊಳಗೆ ಮುಗಿಯುವುದಿಲ್ಲ. ಶೀಘ್ರದಲ್ಲೇ ಕೊನೆಗೊಳ್ಳುವುದಿಲ್ಲ ಎಂದವರು ಹೇಳಿದರು.</p>.<p>ಈ ಕುರಿತು ಸ್ಪಷ್ಟನೆ ಹಾಗೂ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನಾವು ಅಕ್ಟೋಬರ್ ವರೆಗೆ ಸಮಯ ನೀಡಿದ್ದು, ನಮ್ಮ ಮಾತನ್ನು ಆಲಿಸದಿದ್ದರೆ ದೇಶವ್ಯಾಪಿ 40 ಲಕ್ಷ ಟ್ರ್ಯಾಕ್ಟರ್ಗಳ ರ್ಯಾಲಿ ನಡೆಸಲಿದ್ದೇವೆ ಎಂದು ಕೇಂದ್ರ ಸರ್ಕಾರಕ್ಕೆ ರೈತ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ರವಾನಿಸಿದ್ದಾರೆ.</p>.<p>ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನವೆಂಬರ್ 26ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಇದುವರೆಗೆ ಕೇಂದ್ರ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಯಾವುದೇ ಪ್ರಯೋಜನವುಂಟಾಗಲಿಲ್ಲ.</p>.<p>ಇದನ್ನೂ ಓದಿ:<a href="https://www.prajavani.net/india-news/there-is-no-talk-without-repression-801944.html" itemprop="url">ದಬ್ಬಾಳಿಕೆ ನಿಲ್ಲದೆ ಮಾತುಕತೆ ಇಲ್ಲ: ಕಿಸಾನ್ ಸಂಯುಕ್ತ ಮೋರ್ಚಾ </a></p>.<p>ಈ ನಡುವೆ ಜನವರಿ 26 ಗಣರಾಜ್ಯೋತ್ಸವ ದಿನದಂದು ನಡೆದ ಟ್ರ್ಯಾಕ್ಟರ್ ಪೆರೇಡ್ನಲ್ಲಿ ಭಾರಿ ಹಿಂಸಾಚಾರ ನಡೆದಿತ್ತು. ಇದರಿಂದಾಗಿ ದೆಹಲಿ ಪ್ರತಿಭಟನಾ ಸ್ಥಳಗಳಲ್ಲಿ ಬಿಗು ಪೊಲೀಸ್ಬಂದೋಬಸ್ತ್ಏರ್ಪಡಿಸಿರುವ ಸರ್ಕಾರವು, ಅಂತರ್ಜಾಲ ಸೇವೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಡಿತಗೊಳಿಸಿತ್ತು.</p>.<p>ಈ ಎಲ್ಲ ಸವಾಲುಗಳನ್ನು ನೆಟ್ಟಿ ನಿಂತು ಪ್ರತಿಭಟನೆಯನ್ನು ಮುಂದುವರಿಸಿರುವ ರೈತರು ಯಾವುದೇ ಕಾರಣಕ್ಕೂ ಪ್ರತಿಭಟನೆಯಿಂದ ಹಿಂಜರಿಯುವುದಿಲ್ಲ ಎಂಬ ಅಚಲ ನಿರ್ಧಾರವನ್ನು ಕೈಗೊಂಡಿತ್ತು. ಅಲ್ಲದೆ ಸರ್ಕಾರದ ಜೊತೆಗೆ ಮಾತುಕತೆ ಮುಂದುವರಿಸಲು ಸಿದ್ಧ ಎಂದು ಹೇಳಿಕೊಂಡಿತ್ತು.</p>.<p>ಏತನ್ಮಧ್ಯೆ ಸರ್ಕಾರಕ್ಕೆ ಅಕ್ಟೋಬರ್ ವರೆಗೆ ಸಮಯ ನೀಡಿದ್ದೇವೆ ಎಂದು ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಮುಖಂಡ ಹಾಗೂ ವಕ್ತಾರ ರಾಕೇಶ್ ಟಿಕಾಯತ್ ಹೇಳಿಕೆ ನೀಡಿದ್ದಾರೆ.</p>.<p>ಹಾಗೊಂದು ವೇಳೆ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ದೇಶವ್ಯಾಪ್ತಿ 40 ಲಕ್ಷ ಟ್ರ್ಯಾಕ್ಟರ್ಗಳ ರ್ಯಾಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.<br /><br />ಕಾನೂನು ಹಿಂತೆಗೆದುಕೊಳ್ಳದಿದ್ದರೆ ಮನೆಗೆ ಹಿಂತಿರುಗುವುದಿಲ್ಲ ಎಂಬುದು ನಮ್ಮ ಘೋಷಣೆಯಾಗಿದೆ. ಈ ಆಂದೋಲನವು ಅಕ್ಟೋಬರ್ನೊಳಗೆ ಮುಗಿಯುವುದಿಲ್ಲ. ಶೀಘ್ರದಲ್ಲೇ ಕೊನೆಗೊಳ್ಳುವುದಿಲ್ಲ ಎಂದವರು ಹೇಳಿದರು.</p>.<p>ಈ ಕುರಿತು ಸ್ಪಷ್ಟನೆ ಹಾಗೂ ಸಂಪೂರ್ಣ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>