‘ಸಿಪಿಎಂ ನೇತೃತ್ವದ ಎಡರಂಗವು ಶತಮಾನಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಈ ವಿಚಾರದಲ್ಲಿ ಬಾಯಿ ಮುಚ್ಚಿ ಕುಳಿತಿದೆ. ಸಂಪ್ರದಾಯವನ್ನು ಉಳಿಸಲು ಮುಂದಾದ ಭಕ್ತರ ಮೇಲೆ ಲಾಠಿ ಪ್ರಹಾರ ಮಾಡಲಾಗಿದೆ. ನಂಬಿಕೆ ಮತ್ತು ಸಂಪ್ರದಾಯಗಳನ್ನು ನಾಶಮಾಡುವ ಪ್ರಯತ್ನಗಳನ್ನು ಬಿಜೆಪಿ ವಿಫಲಗೊಳಿಸುವುದು’ ಎಂದು ಮೋದಿ ಹೇಳಿದರು.