<p><strong>ಲಖನೌ</strong>: ‘ನಮ್ಮದನ್ನು ನಾವು ಪಡೆಯಲೇಬೇಕು. ಸತ್ಯ ಎಂಬುದು ಯಾವಾಗಲೂ ಕಹಿಯಾಗಿರುತ್ತದೆ. ಸತ್ಯವನ್ನು ಸ್ವೀಕರಿಸಲು ಧೈರ್ಯ ಇರಬೇಕು’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.</p><p>ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ‘ಸಂಭಲ್ನಲ್ಲಿ 67 ತೀರ್ಥ ಕುಂಡಗಳು, 17 ಬಾವಿಗಳನ್ನು ನಾಶಪಡಿಸಿರುವುದು ಪತ್ತೆಯಾಗಿದೆ. ಇದರಲ್ಲಿ 54 ತೀರ್ಥಕ್ಷೇತ್ರಗಳನ್ನು ಪತ್ತೆಹಚ್ಚಿದ್ದು, ಬಾವಿಗಳನ್ನು ಒತ್ತುವರಿದಾರರಿಂದ ತೆರವುಗೊಳಿಸಲಾಗಿದೆ’ ಎಂದು ತಿಳಿಸಿದರು.</p><p>‘ನಮ್ಮದು ಏನಿದೆಯೋ ಅದು ಮಾತ್ರ ನಮಗೆ ಸೇರಿದ್ದು, ಅದಕ್ಕಿಂತ ಹೆಚ್ಚಿನದು ಏನೂ ಬೇಡ’ ಎಂದರು. </p><p>ಸಂಭಲ್ನ ಜಾಮಿಯಾ ಮಸೀದಿಯ ಮಾಲೀಕತ್ವದ ವಿವಾದ ನ್ಯಾಯಾಲಯದಲ್ಲಿರುವಾಗಲೇ, ಯೋಗಿ ಆದಿತ್ಯನಾಥ ಅವರು ಈ ಹೇಳಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ</strong>: ‘ನಮ್ಮದನ್ನು ನಾವು ಪಡೆಯಲೇಬೇಕು. ಸತ್ಯ ಎಂಬುದು ಯಾವಾಗಲೂ ಕಹಿಯಾಗಿರುತ್ತದೆ. ಸತ್ಯವನ್ನು ಸ್ವೀಕರಿಸಲು ಧೈರ್ಯ ಇರಬೇಕು’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ತಿಳಿಸಿದ್ದಾರೆ.</p><p>ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ‘ಸಂಭಲ್ನಲ್ಲಿ 67 ತೀರ್ಥ ಕುಂಡಗಳು, 17 ಬಾವಿಗಳನ್ನು ನಾಶಪಡಿಸಿರುವುದು ಪತ್ತೆಯಾಗಿದೆ. ಇದರಲ್ಲಿ 54 ತೀರ್ಥಕ್ಷೇತ್ರಗಳನ್ನು ಪತ್ತೆಹಚ್ಚಿದ್ದು, ಬಾವಿಗಳನ್ನು ಒತ್ತುವರಿದಾರರಿಂದ ತೆರವುಗೊಳಿಸಲಾಗಿದೆ’ ಎಂದು ತಿಳಿಸಿದರು.</p><p>‘ನಮ್ಮದು ಏನಿದೆಯೋ ಅದು ಮಾತ್ರ ನಮಗೆ ಸೇರಿದ್ದು, ಅದಕ್ಕಿಂತ ಹೆಚ್ಚಿನದು ಏನೂ ಬೇಡ’ ಎಂದರು. </p><p>ಸಂಭಲ್ನ ಜಾಮಿಯಾ ಮಸೀದಿಯ ಮಾಲೀಕತ್ವದ ವಿವಾದ ನ್ಯಾಯಾಲಯದಲ್ಲಿರುವಾಗಲೇ, ಯೋಗಿ ಆದಿತ್ಯನಾಥ ಅವರು ಈ ಹೇಳಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>