ರಾಮನಗರ್, ಮಧ್ಯಪ್ರದೇಶ: ತಮ್ಮ ಸಹೋದ್ಯೋಗಿಯನ್ನು ಜೈಲಿನಿಂದ ಬಿಡುಗಡೆ ಮಾಡದೇ ಇದ್ದರೆ ರಕ್ತ ಹರಿಸುತ್ತೇವೆ ಎಂದು ಬಿಜೆಪಿ ಶಾಸಕರೊಬ್ಬರು ಹೇಳಿದ್ದಾರೆ.
ಮಧ್ಯಪ್ರದೇಶದ ಅಮರ್ಪಠಾಣ್ ವಿಧಾನಸಭಾ ಕ್ಷೇತ್ರದ ಶಾಸಕ ರಾಮ್ಖೆಲಾವನ್ ಪಟೇಲ್ ಅವರು ರಾಮ್ ಸುಶೀಲ್ ಪಟೇಲ್ ಅವರನ್ನು ಬಂಧಮುಕ್ತಗೊಳಿಸುವಂತೆ ಒತ್ತಾಯಿಸಿದ್ದಾರೆ. ಇಲ್ಲಿನ ಸತ್ನಾ ಜಿಲ್ಲೆಯ ರಾಮನಗರದಲ್ಲಿ ಸಾರ್ವಜನಿಕ ಸಭೆ ನಡೆಯುತ್ತಿದ್ದ ವೇಳೆ ರಾಮ್ ಸುಶೀಲ್ ಪಟೇಲ್ ಅವರು ಚೀಫ್ ಮುನಿಸಿಪಲ್ ಆಫೀಸರ್ ದೇವ್ರತನ್ ಸೋನಿ ಆವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಜೈಲು ಪಾಲಾಗಿದ್ದಾರೆ.