ಮಾಧ್ಯಮಗೋಷ್ಠಿಯಲ್ಲಿ ಈ ವಿವರಗಳನ್ನು ನೀಡಿದ ಅವರು, ‘ಶುಕ್ರವಾರ ಬಹುತೇಕ ಎಲ್ಲಾ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸಿವೆ. ಕೆಲವು ಕಚೇರಿಗಳಿಗೆ ಸಾಕಷ್ಟು ಜನರು ಭೇಟಿನೀಡಿದ್ದರು. ಆಗಸ್ಟ್ 5ರಿಂದ ರಾಜ್ಯದಲ್ಲಿ ನಿರ್ಬಂಧಗಳನ್ನು ಜಾರಿ ಮಾಡಲಾಗಿದ್ದು, ಆ ದಿನದಿಂದ ಇಲ್ಲಿಯವರೆಗೂ ರಾಜ್ಯದಲ್ಲಿ ಗಲಭೆಯಿಂದಾಗಿ ಯಾವುದೇ ಪ್ರಾಣಹಾನಿಯಾಗಿಲ್ಲ. ಮುಂದಿನ ಕೆಲವೇ ದಿನಗಳಲ್ಲಿ ನಿರ್ಬಂಧಗಳನ್ನು ಸಡಿಲಿಸಲಾಗುವುದು’ ಎಂದು ತಿಳಿಸಿದರು.