<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದ ಸಂಘರ್ಷದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೃಷಿ ವಲಯವನ್ನು ರಕ್ಷಿಸುವ ಸಲುವಾಗಿ ರಸಗೊಬ್ಬರ ಸಬ್ಸಿಡಿಯನ್ನು ಶೇ 11ರಷ್ಟು ಹೆಚ್ಚಿಸಿದೆ.</p><p>ರಸಗೊಬ್ಬರಗಳಿಗೆ ₹41,532 ಕೋಟಿ ಸಬ್ಸಿಡಿ ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಈ ತಿಂಗಳಿನಿಂದ ಪ್ರಾರಂಭವಾಗುವ ಬೇಸಿಗೆ ಬೆಳೆಗಳ (ಮುಂಗಾರು) ಆರು ತಿಂಗಳ ಅವಧಿಗೆ ಇದು ಅನ್ವಯಿಸುತ್ತದೆ. </p><p>ರೈತರಿಗೆ ಬೆಳೆ ಪೋಷಕಾಂಶಗಳನ್ನು ಕೈಗೆಟುಕುವ ದರದಲ್ಲಿ ಒದಗಿಸಲು ಪೋಷಕಾಂಶ ಆಧಾರಿತ ಸಬ್ಸಿಡಿ (ಎನ್ಬಿಎಸ್) ಅಡಿ ಈ ನಿರ್ಧಾರ ಕೈಗೊಂಡಿದೆ.</p><p>ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಶೇಕಡ 45ಕ್ಕೂ ಹೆಚ್ಚು ಜನರು ಜೀವನೋಪಾಯಕ್ಕಾಗಿ ಕೃಷಿ ವಲಯವನ್ನೇ ಅವಲಂಬಿಸಿದ್ದಾರೆ. </p><p>ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ರಸಗೊಬ್ಬರ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ಜಾಗತಿಕ ಆಹಾರ ಭದ್ರತೆಗೆ ಬೆಲೆ ಏರಿಕೆ ಮತ್ತು ಕೊರತೆಯ ರೂಪದಲ್ಲಿ ಎರಡು ಪಟ್ಟು ಅಪಾಯ ತಂದೊಡ್ಡಿದೆ ಎಂದು ವಿಶ್ವ ವ್ಯಾಪಾರ ಸಂಸ್ಥೆ ಈಚೆಗೆ ಹೇಳಿತ್ತು.</p><p>ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದಿಂದಾಗಿ ಹೊರ್ಮುಜ್ ಜಲಸಂಧಿಯ ಮೇಲೆ ಹೇರಲಾದ ನಿರ್ಬಂಧಗಳು ತೈಲ ಮತ್ತು ಅನಿಲದ ಜೊತೆಗೆ ರಸಗೊಬ್ಬರಗಳ ಸಾಗಣೆಗೂ ಅಡ್ಡಿಯುಂಟು ಮಾಡಿತ್ತು. ವಿಶ್ವದ ಒಟ್ಟು ರಸಗೊಬ್ಬರ ಪೂರೈಕೆಯ ಮೂರನೇ ಒಂದು ಭಾಗವು ಈ ಜಲಸಂಧಿಯ ಮೂಲಕವೇ ಸಾಗುತ್ತದೆ. ಹೊರ್ಮುಜ್ ಜಲಸಂಧಿ ಮುಚ್ಚಿರುವುದರಿಂದ ಆಹಾರ ಉತ್ಪಾದನೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದ ಸಂಘರ್ಷದಿಂದಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೃಷಿ ವಲಯವನ್ನು ರಕ್ಷಿಸುವ ಸಲುವಾಗಿ ರಸಗೊಬ್ಬರ ಸಬ್ಸಿಡಿಯನ್ನು ಶೇ 11ರಷ್ಟು ಹೆಚ್ಚಿಸಿದೆ.</p><p>ರಸಗೊಬ್ಬರಗಳಿಗೆ ₹41,532 ಕೋಟಿ ಸಬ್ಸಿಡಿ ನೀಡಲು ಸಂಪುಟ ಒಪ್ಪಿಗೆ ನೀಡಿದೆ. ಈ ತಿಂಗಳಿನಿಂದ ಪ್ರಾರಂಭವಾಗುವ ಬೇಸಿಗೆ ಬೆಳೆಗಳ (ಮುಂಗಾರು) ಆರು ತಿಂಗಳ ಅವಧಿಗೆ ಇದು ಅನ್ವಯಿಸುತ್ತದೆ. </p><p>ರೈತರಿಗೆ ಬೆಳೆ ಪೋಷಕಾಂಶಗಳನ್ನು ಕೈಗೆಟುಕುವ ದರದಲ್ಲಿ ಒದಗಿಸಲು ಪೋಷಕಾಂಶ ಆಧಾರಿತ ಸಬ್ಸಿಡಿ (ಎನ್ಬಿಎಸ್) ಅಡಿ ಈ ನಿರ್ಧಾರ ಕೈಗೊಂಡಿದೆ.</p><p>ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಶೇಕಡ 45ಕ್ಕೂ ಹೆಚ್ಚು ಜನರು ಜೀವನೋಪಾಯಕ್ಕಾಗಿ ಕೃಷಿ ವಲಯವನ್ನೇ ಅವಲಂಬಿಸಿದ್ದಾರೆ. </p><p>ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ರಸಗೊಬ್ಬರ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ಜಾಗತಿಕ ಆಹಾರ ಭದ್ರತೆಗೆ ಬೆಲೆ ಏರಿಕೆ ಮತ್ತು ಕೊರತೆಯ ರೂಪದಲ್ಲಿ ಎರಡು ಪಟ್ಟು ಅಪಾಯ ತಂದೊಡ್ಡಿದೆ ಎಂದು ವಿಶ್ವ ವ್ಯಾಪಾರ ಸಂಸ್ಥೆ ಈಚೆಗೆ ಹೇಳಿತ್ತು.</p><p>ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷದಿಂದಾಗಿ ಹೊರ್ಮುಜ್ ಜಲಸಂಧಿಯ ಮೇಲೆ ಹೇರಲಾದ ನಿರ್ಬಂಧಗಳು ತೈಲ ಮತ್ತು ಅನಿಲದ ಜೊತೆಗೆ ರಸಗೊಬ್ಬರಗಳ ಸಾಗಣೆಗೂ ಅಡ್ಡಿಯುಂಟು ಮಾಡಿತ್ತು. ವಿಶ್ವದ ಒಟ್ಟು ರಸಗೊಬ್ಬರ ಪೂರೈಕೆಯ ಮೂರನೇ ಒಂದು ಭಾಗವು ಈ ಜಲಸಂಧಿಯ ಮೂಲಕವೇ ಸಾಗುತ್ತದೆ. ಹೊರ್ಮುಜ್ ಜಲಸಂಧಿ ಮುಚ್ಚಿರುವುದರಿಂದ ಆಹಾರ ಉತ್ಪಾದನೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>