<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಹೆಚ್ಚುತ್ತಿರುವ ನಡುವೆ ಫೆಬ್ರುವರಿ 28ರಿಂದ ಈವರೆಗೆ ಸುಮಾರು 2.44 ಲಕ್ಷ ಭಾರತೀಯರು ತಾಯ್ನಾಡಿಗೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. </p><p>ಮಧ್ಯಪ್ರಾಚ್ಯ ಸ್ಥಿತಿಗತಿ ಕುರಿತು ಮಾಹಿತಿ ನೀಡಿರುವ ಹೆಚ್ಚುವರಿ ಕಾರ್ಯದರ್ಶಿ (ಗಲ್ಫ್) ಅಸೀಮ್ ಅರ್ ಮಹಾಜನ್, ಸಂಘರ್ಷದಲ್ಲಿ ಈವರೆಗೆ ಐವರು ಭಾರತೀಯ ಪ್ರಜೆಗಳು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. </p><p>ಈ ಹಿಂದೆ ನಡೆದ ಘಟನೆಯಲ್ಲಿ ಒಬ್ಬರು ನಾಪತ್ತೆಯಾಗಿದ್ದಾರೆ. ಒಮಾನ್ನಲ್ಲಿ ಮೃತಪಟ್ಟ ಇಬ್ಬರು ಭಾರತೀಯರ ಪಾರ್ಥಿವ ಶರೀರವನ್ನು ಸ್ವದೇಶಕ್ಕೆ ತರಲಾಗಿದ್ದು, ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದ್ದಾರೆ. </p>.ಪಶ್ಚಿಮ ಏಷ್ಯಾ ಸಂಘರ್ಷ: ಯುಎಇ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ .ನಮಗೆ ಯಾರ ಸಹಾಯವೂ ಬೇಕಿಲ್ಲ; ನ್ಯಾಟೊ ಮಿತ್ರಪಡೆಗಳ ವಿರುದ್ಧ ಟ್ರಂಪ್ ಸಿಡಿಮಿಡಿ. <p>ಇರಾನ್ನಿಂದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 650 ಭಾರತೀಯರು ಅರ್ಮೇನಿಯಾ ಮತ್ತು ಅಜರ್ಬೈಜಾನ್ ದೇಶಗಳ ಗಡಿಯನ್ನು ದಾಟಿ ಸ್ವದೇಶಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. </p><p>ಇರಾನ್ಗೆ ಹೋಗಿದ್ದ 284 ಯಾತ್ರಿಕರು ಅರ್ಮೇನಿಯಾ ದಾಟಿದ್ದು ಸ್ವದೇಶಕ್ಕೆ ಮರಳುತ್ತಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ. </p><p>ಭಾರತೀಯ ಪ್ರಜೆಗಳ ನೆರವಿಗಾಗಿ ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸುತ್ತಿದೆ. ಈಗ ಇಮೇಲ್ ಹಾಗೂ ಕರೆಗಳ ಸಂಖ್ಯೆ ಗಣನೀಯವಾಗಿ ಕುಸಿತವಾಗಿದೆ ಎಂದು ತಿಳಿಸಿದ್ದಾರೆ. </p><p>ಬ್ರಿಕ್ಸ್ ದೇಶಗಳ ನಿಲುವಿನ ಕುರಿತಾಗಿ ಕೇಳಿದಾಗ, ಬ್ರಿಕ್ಸ್ನಲ್ಲಿ ನಾವು ಅಧ್ಯಕ್ಷತೆಯನ್ನು ಹೊಂದಿದ್ದೇವೆ. ಸದಸ್ಯ ದೇಶಗಳೊಂದಿಗೆ ನಾವು ಚರ್ಚೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದಿದ್ದಾರೆ. </p><p>ಇರಾನ್ ಕೂಡಾ ಭಾರತ, ರಷ್ಯಾ, ಬ್ರೆಜಿಲ್ ಹಾಗೂ ಚೀನಾ ಒಳಗೊಂಡಿರುವ ಬ್ರಿಕ್ಸ್ನ ಸದಸ್ಯ ರಾಷ್ಟ್ರವಾಗಿದೆ. </p><p>ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಭಾರತ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಭಾರತೀಯರ ರಕ್ಷಣೆ, ಯೋಗಕ್ಷೇಮಕ್ಕೆ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಹೆಚ್ಚುತ್ತಿರುವ ನಡುವೆ ಫೆಬ್ರುವರಿ 28ರಿಂದ ಈವರೆಗೆ ಸುಮಾರು 2.44 ಲಕ್ಷ ಭಾರತೀಯರು ತಾಯ್ನಾಡಿಗೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. </p><p>ಮಧ್ಯಪ್ರಾಚ್ಯ ಸ್ಥಿತಿಗತಿ ಕುರಿತು ಮಾಹಿತಿ ನೀಡಿರುವ ಹೆಚ್ಚುವರಿ ಕಾರ್ಯದರ್ಶಿ (ಗಲ್ಫ್) ಅಸೀಮ್ ಅರ್ ಮಹಾಜನ್, ಸಂಘರ್ಷದಲ್ಲಿ ಈವರೆಗೆ ಐವರು ಭಾರತೀಯ ಪ್ರಜೆಗಳು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. </p><p>ಈ ಹಿಂದೆ ನಡೆದ ಘಟನೆಯಲ್ಲಿ ಒಬ್ಬರು ನಾಪತ್ತೆಯಾಗಿದ್ದಾರೆ. ಒಮಾನ್ನಲ್ಲಿ ಮೃತಪಟ್ಟ ಇಬ್ಬರು ಭಾರತೀಯರ ಪಾರ್ಥಿವ ಶರೀರವನ್ನು ಸ್ವದೇಶಕ್ಕೆ ತರಲಾಗಿದ್ದು, ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದ್ದಾರೆ. </p>.ಪಶ್ಚಿಮ ಏಷ್ಯಾ ಸಂಘರ್ಷ: ಯುಎಇ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ .ನಮಗೆ ಯಾರ ಸಹಾಯವೂ ಬೇಕಿಲ್ಲ; ನ್ಯಾಟೊ ಮಿತ್ರಪಡೆಗಳ ವಿರುದ್ಧ ಟ್ರಂಪ್ ಸಿಡಿಮಿಡಿ. <p>ಇರಾನ್ನಿಂದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 650 ಭಾರತೀಯರು ಅರ್ಮೇನಿಯಾ ಮತ್ತು ಅಜರ್ಬೈಜಾನ್ ದೇಶಗಳ ಗಡಿಯನ್ನು ದಾಟಿ ಸ್ವದೇಶಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. </p><p>ಇರಾನ್ಗೆ ಹೋಗಿದ್ದ 284 ಯಾತ್ರಿಕರು ಅರ್ಮೇನಿಯಾ ದಾಟಿದ್ದು ಸ್ವದೇಶಕ್ಕೆ ಮರಳುತ್ತಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ. </p><p>ಭಾರತೀಯ ಪ್ರಜೆಗಳ ನೆರವಿಗಾಗಿ ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸುತ್ತಿದೆ. ಈಗ ಇಮೇಲ್ ಹಾಗೂ ಕರೆಗಳ ಸಂಖ್ಯೆ ಗಣನೀಯವಾಗಿ ಕುಸಿತವಾಗಿದೆ ಎಂದು ತಿಳಿಸಿದ್ದಾರೆ. </p><p>ಬ್ರಿಕ್ಸ್ ದೇಶಗಳ ನಿಲುವಿನ ಕುರಿತಾಗಿ ಕೇಳಿದಾಗ, ಬ್ರಿಕ್ಸ್ನಲ್ಲಿ ನಾವು ಅಧ್ಯಕ್ಷತೆಯನ್ನು ಹೊಂದಿದ್ದೇವೆ. ಸದಸ್ಯ ದೇಶಗಳೊಂದಿಗೆ ನಾವು ಚರ್ಚೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದಿದ್ದಾರೆ. </p><p>ಇರಾನ್ ಕೂಡಾ ಭಾರತ, ರಷ್ಯಾ, ಬ್ರೆಜಿಲ್ ಹಾಗೂ ಚೀನಾ ಒಳಗೊಂಡಿರುವ ಬ್ರಿಕ್ಸ್ನ ಸದಸ್ಯ ರಾಷ್ಟ್ರವಾಗಿದೆ. </p><p>ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಭಾರತ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಭಾರತೀಯರ ರಕ್ಷಣೆ, ಯೋಗಕ್ಷೇಮಕ್ಕೆ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>