<p>ಕೋಲ್ಕತ್ತ: ಉದ್ರಿಕ್ತರ ಗುಂಪೊಂದು ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಬೋಲಾಪುರದಲ್ಲಿರುವ ವಿಶ್ವ ಭಾರತಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರಗಲಭೆ ನಡೆಸಿದೆ.</p>.<p>‘ವಿಶ್ವವಿದ್ಯಾಲಯದ ಮೈದಾನದಲ್ಲಿಪ್ರತಿ ವರ್ಷವೂ ಚಳಿಗಾಲದ ಅವಧಿಯಲ್ಲಿ ಪೌಶ್ ಮೇಳ ಆಯೋಜಿಸಲಾಗುತ್ತದೆ. ಈ ಬಾರಿ ಮೇಳ ರದ್ದು ಮಾಡುವುದಾಗಿ ತಿಳಿಸಿದ್ದ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ಮೈದಾನದ ಸುತ್ತಲೂ ತಡೆಗೋಡೆ ನಿರ್ಮಿಸಲು ಮುಂದಾಗಿತ್ತು. ಇದರಿಂದ ಕೆರಳಿದ ಸುಮಾರು 4,000 ಮಂದಿಯನ್ನೊಳಗೊಂಡ ಗುಂಪು ಗಲಭೆ ನಡೆಸಿದೆ’ ಎಂದು ವಿಶ್ವವಿದ್ಯಾಲಯದ ಮೂಲಗಳಿಂದ ತಿಳಿದುಬಂದಿದೆ.</p>.<p>ಬೋಲಾಪುರ ನಗರದಲ್ಲಿ ಸೋಮವಾರ ಬೆಳಿಗ್ಗೆ 10ಗಂಟೆಗೆ ಜಮಾವಣೆಗೊಂಡ ಜನರು ಮೈದಾನದಲ್ಲಿ ನಿರ್ಮಿಸಲಾಗುತ್ತಿದ್ದ ತಡೆಗೋಡೆಯನ್ನು ಕೆಡವಿದರು. ಕೆಲ ಉಪಕರಣಗಳನ್ನೂ ಧ್ವಂಸಗೊಳಿಸಿದರು. ಜೊತೆಗೆ ವಿಶ್ವವಿದ್ಯಾಲಯದ ಪ್ರವೇಶ ದ್ವಾರವೊಂದನ್ನುಜೆಸಿಬಿಯಿಂದ ನೆಲಕ್ಕುರುಳಿಸಿದರು ಎಂದು ಹೇಳಲಾಗಿದೆ.</p>.<p>ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಈ ಕುರಿತು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಪರಿಸ್ಥಿತಿ ಶಾಂತವಾಗುವವರೆಗೂ ವಿಶ್ವವಿದ್ಯಾಲಯದಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಿರಲು ತೀರ್ಮಾನಿಸಲಾಗಿದೆ.</p>.<p>ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ‘ಘಟನೆ ಸಂಬಂಧ ಮಾಹಿತಿ ನೀಡುವಂತೆ ರಾಜ್ಯಪಾಲ ಜಗದೀಪ್ ಧನಕರ್ ಕೇಳಿದ್ದರು. ಅದು ಕೇಂದ್ರೀಯ ವಿಶ್ವವಿದ್ಯಾಲಯವಾಗಿರುವುದರಿಂದ ರಾಜ್ಯ ಸರ್ಕಾರವು ಅದರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಆಗುವುದಿಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ’ ಎಂದರು.</p>.<p>‘ಸ್ಥಳೀಯ ಮುಖಂಡರು ಹಾಗೂ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯವರೊಂದಿಗೆ ಸಭೆ ನಡೆಸಿ ರಾಜಿ ಸಂಧಾನ ಮಾಡುವಂತೆಬಿರ್ಭುಮ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದೇನೆ’ ಎಂದೂ ಅವರು ಹೇಳಿದ್ದಾರೆ.</p>.<p>‘ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತನಾಡಿದ್ದೇನೆ. ಘಟನಾ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ’ ಎಂದು ರಾಜ್ಯಪಾಲ ಧನಕರ್ ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲ್ಕತ್ತ: ಉದ್ರಿಕ್ತರ ಗುಂಪೊಂದು ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಬೋಲಾಪುರದಲ್ಲಿರುವ ವಿಶ್ವ ಭಾರತಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೋಮವಾರಗಲಭೆ ನಡೆಸಿದೆ.</p>.<p>‘ವಿಶ್ವವಿದ್ಯಾಲಯದ ಮೈದಾನದಲ್ಲಿಪ್ರತಿ ವರ್ಷವೂ ಚಳಿಗಾಲದ ಅವಧಿಯಲ್ಲಿ ಪೌಶ್ ಮೇಳ ಆಯೋಜಿಸಲಾಗುತ್ತದೆ. ಈ ಬಾರಿ ಮೇಳ ರದ್ದು ಮಾಡುವುದಾಗಿ ತಿಳಿಸಿದ್ದ ವಿಶ್ವವಿದ್ಯಾಲಯದ ಆಡಳಿತ ಮಂಡಳಿ, ಮೈದಾನದ ಸುತ್ತಲೂ ತಡೆಗೋಡೆ ನಿರ್ಮಿಸಲು ಮುಂದಾಗಿತ್ತು. ಇದರಿಂದ ಕೆರಳಿದ ಸುಮಾರು 4,000 ಮಂದಿಯನ್ನೊಳಗೊಂಡ ಗುಂಪು ಗಲಭೆ ನಡೆಸಿದೆ’ ಎಂದು ವಿಶ್ವವಿದ್ಯಾಲಯದ ಮೂಲಗಳಿಂದ ತಿಳಿದುಬಂದಿದೆ.</p>.<p>ಬೋಲಾಪುರ ನಗರದಲ್ಲಿ ಸೋಮವಾರ ಬೆಳಿಗ್ಗೆ 10ಗಂಟೆಗೆ ಜಮಾವಣೆಗೊಂಡ ಜನರು ಮೈದಾನದಲ್ಲಿ ನಿರ್ಮಿಸಲಾಗುತ್ತಿದ್ದ ತಡೆಗೋಡೆಯನ್ನು ಕೆಡವಿದರು. ಕೆಲ ಉಪಕರಣಗಳನ್ನೂ ಧ್ವಂಸಗೊಳಿಸಿದರು. ಜೊತೆಗೆ ವಿಶ್ವವಿದ್ಯಾಲಯದ ಪ್ರವೇಶ ದ್ವಾರವೊಂದನ್ನುಜೆಸಿಬಿಯಿಂದ ನೆಲಕ್ಕುರುಳಿಸಿದರು ಎಂದು ಹೇಳಲಾಗಿದೆ.</p>.<p>ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಈ ಕುರಿತು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಪರಿಸ್ಥಿತಿ ಶಾಂತವಾಗುವವರೆಗೂ ವಿಶ್ವವಿದ್ಯಾಲಯದಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಿರಲು ತೀರ್ಮಾನಿಸಲಾಗಿದೆ.</p>.<p>ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ‘ಘಟನೆ ಸಂಬಂಧ ಮಾಹಿತಿ ನೀಡುವಂತೆ ರಾಜ್ಯಪಾಲ ಜಗದೀಪ್ ಧನಕರ್ ಕೇಳಿದ್ದರು. ಅದು ಕೇಂದ್ರೀಯ ವಿಶ್ವವಿದ್ಯಾಲಯವಾಗಿರುವುದರಿಂದ ರಾಜ್ಯ ಸರ್ಕಾರವು ಅದರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಆಗುವುದಿಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ’ ಎಂದರು.</p>.<p>‘ಸ್ಥಳೀಯ ಮುಖಂಡರು ಹಾಗೂ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯವರೊಂದಿಗೆ ಸಭೆ ನಡೆಸಿ ರಾಜಿ ಸಂಧಾನ ಮಾಡುವಂತೆಬಿರ್ಭುಮ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದೇನೆ’ ಎಂದೂ ಅವರು ಹೇಳಿದ್ದಾರೆ.</p>.<p>‘ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತನಾಡಿದ್ದೇನೆ. ಘಟನಾ ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ’ ಎಂದು ರಾಜ್ಯಪಾಲ ಧನಕರ್ ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>