<p><strong>ಕೋಲ್ಕತ:</strong> ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಹಮ್ಮಿಕೊಂಡಿರುವ 'ಅನ್ನಪೂರ್ಣ ಯೋಜನೆ'ಯ ಅರ್ಜಿ ವಿತರಣೆ ನಾಳೆಯಿಂದ (ಬುಧವಾರ) ಆರಂಭವಾಗಲಿದೆ. ಈ ಮೂಲಕ ಮಹಿಳೆಯರ ಖಾತೆಗೆ ಮಾಸಿಕ ₹3000 ಜಮೆಯಾಗಲಿದೆ.</p><p>ನಾದಿಯಾ ಜಿಲ್ಲೆಯ ಕಲ್ಯಾಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಬುಧವಾರದಿಂದಲೇ ಸರ್ಕಾರದಿಂದ ಅನ್ನಪೂರ್ಣ ಯೋಜನೆಗೆ ಸಂಬಂಧಿಸಿದ ಅರ್ಜಿಗಳನ್ನು ವಿತರಿಸಲಾಗುವುದು. ಈ ಯೋಜನೆಯಡಿ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹3,000 ಧನಸಹಾಯ ಸಿಗಲಿದೆ ಎಂದು ಹೇಳಿದ್ದಾರೆ.</p>.ಎಂಜಿನಿಯರ್ ರಶೀದ್ಗೆ ಮಧ್ಯಂತರ ಜಾಮೀನು ನೀಡಿದ ದೆಹಲಿ ಹೈಕೋರ್ಟ್.FIFA ವಿಶ್ವಕಪ್: ಭಾರತದಿಂದ ಆಯ್ಕೆಯಾದ ಮೊದಲ ಪತ್ರಿಕಾ ಛಾಯಾಗ್ರಾಹಕಿ ಇವರೇ... <p><strong>ಶಾಲಾ-ಕಾಲೇಜುಗಳ ಬಳಿ ಮದ್ಯದಂಗಡಿ ನಿಷೇಧ</strong></p><p> ಇನ್ಮುಂದೆ ಶಾಲಾ-ಕಾಲೇಜುಗಳು ಹಾಗೂ ಧಾರ್ಮಿಕ ಕೇಂದ್ರಗಳ ಸುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮದ್ಯದ ಅಂಗಡಿಗಳಿಗೆ ಅನುಮತಿ ನೀಡುವುದಿಲ್ಲ ಎಂದು ಸುವೇಂದು ತಿಳಿಸಿದ್ದಾರೆ</p><h4>ಕೇವಲ ₹5ಗೆ ಮೀನೂಟ!</h4><p>ರಾಜ್ಯ ಸರ್ಕಾರವು ಹೊಸದಾಗಿ ಸುಮಾರು 400 ಪ್ರತ್ಯೇಕ ಕ್ಯಾಂಟೀನ್ಗಳನ್ನು ಆರಂಭಿಸಲಿದೆ. ಈ ಕ್ಯಾಂಟೀನ್ಗಳಲ್ಲಿ ವಾರಕ್ಕೆ ಎರಡು ದಿನ ರಿಯಾಯಿತಿ ದರದಲ್ಲಿ, ಅಂದರೆ ಕೇವಲ ₹5 ರೂಪಾಯಿಗೆ ಮೀನೂಟ ಒದಗಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.</p>.ರಾಜ್ಯದಲ್ಲಿ 7 ದಿನ ಬಿರುಗಾಳಿ ಸಹಿತ ಜೋರು ಮಳೆ ಸಾಧ್ಯತೆ: ಹವಾಮಾನ ಇಲಾಖೆ.ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ.<h4><strong>ಪ್ರತ್ಯೇಕ 'ಆಯುಷ್' ಇಲಾಖೆ ಸ್ಥಾಪನೆ</strong></h4><p>ಆರೋಗ್ಯ ಕ್ಷೇತ್ರದಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ, ಪ್ರಸ್ತುತ ಆರೋಗ್ಯ ಇಲಾಖೆಯ ಭಾಗವಾಗಿರುವ <strong>'</strong>ಆಯುಷ್<strong>' </strong>ವಿಭಾಗವನ್ನು ಬೇರ್ಪಡಿಸಿ, ಅದಕ್ಕಾಗಿಯೇ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ:</strong> ಪಶ್ಚಿಮ ಬಂಗಾಳದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಹಮ್ಮಿಕೊಂಡಿರುವ 'ಅನ್ನಪೂರ್ಣ ಯೋಜನೆ'ಯ ಅರ್ಜಿ ವಿತರಣೆ ನಾಳೆಯಿಂದ (ಬುಧವಾರ) ಆರಂಭವಾಗಲಿದೆ. ಈ ಮೂಲಕ ಮಹಿಳೆಯರ ಖಾತೆಗೆ ಮಾಸಿಕ ₹3000 ಜಮೆಯಾಗಲಿದೆ.</p><p>ನಾದಿಯಾ ಜಿಲ್ಲೆಯ ಕಲ್ಯಾಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಬುಧವಾರದಿಂದಲೇ ಸರ್ಕಾರದಿಂದ ಅನ್ನಪೂರ್ಣ ಯೋಜನೆಗೆ ಸಂಬಂಧಿಸಿದ ಅರ್ಜಿಗಳನ್ನು ವಿತರಿಸಲಾಗುವುದು. ಈ ಯೋಜನೆಯಡಿ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹3,000 ಧನಸಹಾಯ ಸಿಗಲಿದೆ ಎಂದು ಹೇಳಿದ್ದಾರೆ.</p>.ಎಂಜಿನಿಯರ್ ರಶೀದ್ಗೆ ಮಧ್ಯಂತರ ಜಾಮೀನು ನೀಡಿದ ದೆಹಲಿ ಹೈಕೋರ್ಟ್.FIFA ವಿಶ್ವಕಪ್: ಭಾರತದಿಂದ ಆಯ್ಕೆಯಾದ ಮೊದಲ ಪತ್ರಿಕಾ ಛಾಯಾಗ್ರಾಹಕಿ ಇವರೇ... <p><strong>ಶಾಲಾ-ಕಾಲೇಜುಗಳ ಬಳಿ ಮದ್ಯದಂಗಡಿ ನಿಷೇಧ</strong></p><p> ಇನ್ಮುಂದೆ ಶಾಲಾ-ಕಾಲೇಜುಗಳು ಹಾಗೂ ಧಾರ್ಮಿಕ ಕೇಂದ್ರಗಳ ಸುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮದ್ಯದ ಅಂಗಡಿಗಳಿಗೆ ಅನುಮತಿ ನೀಡುವುದಿಲ್ಲ ಎಂದು ಸುವೇಂದು ತಿಳಿಸಿದ್ದಾರೆ</p><h4>ಕೇವಲ ₹5ಗೆ ಮೀನೂಟ!</h4><p>ರಾಜ್ಯ ಸರ್ಕಾರವು ಹೊಸದಾಗಿ ಸುಮಾರು 400 ಪ್ರತ್ಯೇಕ ಕ್ಯಾಂಟೀನ್ಗಳನ್ನು ಆರಂಭಿಸಲಿದೆ. ಈ ಕ್ಯಾಂಟೀನ್ಗಳಲ್ಲಿ ವಾರಕ್ಕೆ ಎರಡು ದಿನ ರಿಯಾಯಿತಿ ದರದಲ್ಲಿ, ಅಂದರೆ ಕೇವಲ ₹5 ರೂಪಾಯಿಗೆ ಮೀನೂಟ ಒದಗಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.</p>.ರಾಜ್ಯದಲ್ಲಿ 7 ದಿನ ಬಿರುಗಾಳಿ ಸಹಿತ ಜೋರು ಮಳೆ ಸಾಧ್ಯತೆ: ಹವಾಮಾನ ಇಲಾಖೆ.ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ.<h4><strong>ಪ್ರತ್ಯೇಕ 'ಆಯುಷ್' ಇಲಾಖೆ ಸ್ಥಾಪನೆ</strong></h4><p>ಆರೋಗ್ಯ ಕ್ಷೇತ್ರದಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ, ಪ್ರಸ್ತುತ ಆರೋಗ್ಯ ಇಲಾಖೆಯ ಭಾಗವಾಗಿರುವ <strong>'</strong>ಆಯುಷ್<strong>' </strong>ವಿಭಾಗವನ್ನು ಬೇರ್ಪಡಿಸಿ, ಅದಕ್ಕಾಗಿಯೇ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>