ರಾಜ್ಯ ಶಿಕ್ಷಣ ಸಚಿವ ಬ್ರತ್ಯಾ ಬಸು ಅವರು, ಪಶ್ಚಿಮ ಬಂಗಾಳ ವಿಶ್ವವಿದ್ಯಾನಿಲಯ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದರು. ‘ಮುಖ್ಯಮಂತ್ರಿ ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಯಾದರೆ ತಪ್ಪೇನು ಇಲ್ಲ . ರಾಜ್ಯಪಾಲರು ಹಾಗೂ ಹಾಲಿ ಕುಲಪತಿ ಸಾಕಷ್ಟು ಬಾರಿ ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ’ ಎಂದು ಹೇಳಿದರು.