ಈ ಪ್ರಕರಣ ಸಂಬಂಧ ಬಂಧಿತ ಇಬ್ಬರು ಆರೋಪಿಗಳು ವಿಚಾರಣೆಗೆ ಸಹಕಾರಿಸುತ್ತಿಲ್ಲ ಎಂದರು.
ಪಶ್ಚಿಮ ಬಂಗಾಳದ ಭೂಪತಿನಗರದ ಮನೆಯೊಂದರಲ್ಲಿ 2022ರ ಡಿಸೆಂಬರ್ನಲ್ಲಿ ನಡೆದಿದ್ದ ಸ್ಫೋಟ ಪ್ರಕರಣದಲ್ಲಿ ಮೂವರು ಮೃತಪಟ್ಟಿದ್ದರು. ಈ ಪ್ರಕರಣ ಕುರಿತು ದೊರೆತಿದ್ದ ಮಹತ್ವದ ಮಾಹಿತಿ ಮೇರೆಗೆ ಮೇದಿನಿಪುರ ಜಿಲ್ಲೆಗೆ ಎನ್ಐಎ ತಂಡ ತೆರಳಿದ್ದಾಗ, ಅಲ್ಲಿನ ಕೆಲವರ ಗುಂಪು ತೀವ್ರ ವಿರೋಧ ವ್ಯಕ್ತಪಡಿಸಿತು. ಇದರ ನಡುವೆಯೂ ಇಬ್ಬರು ಪ್ರಮುಖ ಸಂಚುಕೋರರನ್ನು ಬಂಧಿಸಲಾಗಿದೆ’ ಎಂದು ಎನ್ಐಎ ವಕ್ತಾರರು ತಿಳಿಸಿದ್ದರು.