<p class="bodytext"><strong>ಕೋಲ್ಕತ್ತ (ಪಿಟಿಐ):</strong> ಪಶ್ಚಿಮ ಬಂಗಾಳ ವಿಧಾನಸಭೆಗೆ ಆಯ್ಕೆಯಾಗಿದ್ದ ಬಿಜೆಪಿಯ ಲೋಕಸಭೆ ಸದಸ್ಯರಾದ ಜಗನ್ನಾಥ ಸರ್ಕಾರ್ ಮತ್ತು ನಿಶಿತ್ ಪ್ರಮಾಣಿಕ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<p class="bodytext">ಈ ಇಬ್ಬರು ಲೋಕಸಭೆಯಲ್ಲಿ ಕ್ರಮವಾಗಿ ರಣಘಾಟ್ ಮತ್ತು ಕೂಚ್ಬೆಹರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇವರು ಬುಧವಾರ ವಿಧಾನಸಭೆ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.</p>.<p class="bodytext">ಬಿಜೆಪಿ ನಾಯಕತ್ವದ ಸೂಚನೆಯಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ಪ್ರಮಾಣಿಕ್ ತಿಳಿಸಿದರು. ಇವರ ಜೊತೆಗೆ ಬಿಜೆಪಿಯು, ಲೋಕಸಭೆಯ ಇನ್ನಿಬ್ಬರು ಸದಸ್ಯರಾದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಮತ್ತು ಲಾಕೆಟ್ ಚಟರ್ಜಿ, ರಾಜ್ಯಸಭೆ ಸದಸ್ಯ ಸ್ವಪನ್ ದಾಸ್ಗುಪ್ತಾ ಅವರನ್ನೂ ಕಣಕ್ಕಿಳಿಸಿತ್ತು.</p>.<p class="bodytext">ಆದರೆ, ಇವರು ಸೋತಿದ್ದರು. ಈಚೆಗೆ ನಡೆದ, 292 ಸದಸ್ಯ ಬಲದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 77 ಸ್ಥಾನ ಗೆದ್ದಿದ್ದರೆ, ತೃಣಮೂಲ ಕಾಂಗ್ರೆಸ್ ಪಕ್ಷ 213 ಸ್ಥಾನ ಗೆಲ್ಲುವ ಮೂಲಕ ಅಧಿಕಾರ ಉಳಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ಕೋಲ್ಕತ್ತ (ಪಿಟಿಐ):</strong> ಪಶ್ಚಿಮ ಬಂಗಾಳ ವಿಧಾನಸಭೆಗೆ ಆಯ್ಕೆಯಾಗಿದ್ದ ಬಿಜೆಪಿಯ ಲೋಕಸಭೆ ಸದಸ್ಯರಾದ ಜಗನ್ನಾಥ ಸರ್ಕಾರ್ ಮತ್ತು ನಿಶಿತ್ ಪ್ರಮಾಣಿಕ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<p class="bodytext">ಈ ಇಬ್ಬರು ಲೋಕಸಭೆಯಲ್ಲಿ ಕ್ರಮವಾಗಿ ರಣಘಾಟ್ ಮತ್ತು ಕೂಚ್ಬೆಹರ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇವರು ಬುಧವಾರ ವಿಧಾನಸಭೆ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.</p>.<p class="bodytext">ಬಿಜೆಪಿ ನಾಯಕತ್ವದ ಸೂಚನೆಯಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ಪ್ರಮಾಣಿಕ್ ತಿಳಿಸಿದರು. ಇವರ ಜೊತೆಗೆ ಬಿಜೆಪಿಯು, ಲೋಕಸಭೆಯ ಇನ್ನಿಬ್ಬರು ಸದಸ್ಯರಾದ ಕೇಂದ್ರ ಸಚಿವ ಬಾಬುಲ್ ಸುಪ್ರಿಯೊ ಮತ್ತು ಲಾಕೆಟ್ ಚಟರ್ಜಿ, ರಾಜ್ಯಸಭೆ ಸದಸ್ಯ ಸ್ವಪನ್ ದಾಸ್ಗುಪ್ತಾ ಅವರನ್ನೂ ಕಣಕ್ಕಿಳಿಸಿತ್ತು.</p>.<p class="bodytext">ಆದರೆ, ಇವರು ಸೋತಿದ್ದರು. ಈಚೆಗೆ ನಡೆದ, 292 ಸದಸ್ಯ ಬಲದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 77 ಸ್ಥಾನ ಗೆದ್ದಿದ್ದರೆ, ತೃಣಮೂಲ ಕಾಂಗ್ರೆಸ್ ಪಕ್ಷ 213 ಸ್ಥಾನ ಗೆಲ್ಲುವ ಮೂಲಕ ಅಧಿಕಾರ ಉಳಿಸಿಕೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>