<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಯ ಎದುರು ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳ (ಬಿಎಲ್ಒ) ಅಧಿಕಾರ ರಕ್ಷಾ ಸಮಿತಿ ನಡೆಸುತ್ತಿರುವ ಪ್ರತಿಭಟನೆಯು ಸೋಮವಾರ ತೀವ್ರಗೊಂಡಿದೆ. </p>.<p>ಚುನಾವಣಾ ಅಧಿಕಾರಿಗಳ ಜತೆಗೆ ಪೂರ್ವನಿಯೋಜಿತ ಸಭೆಗಾಗಿ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ಹಾಗೂ ಇತರೆ ಶಾಸಕರು ಕಚೇರಿ ಬಳಿ ಆಗಮಿಸುತ್ತಿದ್ದಂತೆಯೇ ಬಿಎಲ್ಒ ಸಮಿತಿ ಸದಸ್ಯರು ಪ್ರತಿಭಟನೆ ತೀವ್ರಗೊಳಿಸಿ, ಬ್ಯಾರಿಕೇಡ್ಗಳನ್ನು ದಾಟಲು ಪ್ರಯತ್ನಿಸಿದ್ದಾರೆ. </p>.<p class="title">ಅಧಿಕಾರಿ ಭೇಟಿಯ ಕಾರಣಕ್ಕೆ ಕಚೇರಿ ಪ್ರದೇಶದಲ್ಲಿ ಪೊಲೀಸರು ಪ್ರವೇಶ ನಿರ್ಬಂಧಿಸಿದ್ದರೂ ಸಮಿತಿಯ ಸದಸ್ಯರು ಬ್ಯಾರಿಕೇಡ್ಗಳನ್ನು ಮುರಿದು, ಬಿಜೆಪಿ ನಿಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.</p>.<p class="title">ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದು, ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ಕೈಮೀರದಂತೆ ಭದ್ರತಾ ಸಿಬ್ಬಂದಿ ಜಾಗ್ರತೆ ವಹಿಸಿದ್ದಾರೆ.</p>.<p class="title">ತೀವ್ರ ಗದ್ದಲದ ನಡುವೆಯೂ ಅಧಿಕಾರಿ ನೇತೃತ್ವದ ಬಿಜೆಪಿ ನಿಯೋಗವು ಸಿಇಒ ಕಚೇರಿ ಪ್ರವೇಶಿಸಿ, ಯಾವುದೇ ಅಡೆತಡೆ ಇಲ್ಲದೆ ಸಭೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಈ ಪ್ರತಿಭಟನೆಯು ರಾಜಕೀಯ ಪ್ರೇರಿತವಾದುದು. ಸಿಇಒ ಕಚೇರಿಗೆ ಬಿಜೆಪಿ ನಿಯೋಗ ಭೇಟಿ ನೀಡುವುದನ್ನು ತಡೆಯಲೆಂದೇ ಈ ಪ್ರತಿಭಟನೆ ತೀವ್ರಗೊಳಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.</p>.<p>ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕೆಲಸಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಮೇಲೆ ಹೆಚ್ಚಿನ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿ ಬಿಎಲ್ಒ ಸಮಿತಿ ಈ ಪ್ರತಿಭಟನೆ ನಡೆಸುತ್ತಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಯ ಎದುರು ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳ (ಬಿಎಲ್ಒ) ಅಧಿಕಾರ ರಕ್ಷಾ ಸಮಿತಿ ನಡೆಸುತ್ತಿರುವ ಪ್ರತಿಭಟನೆಯು ಸೋಮವಾರ ತೀವ್ರಗೊಂಡಿದೆ. </p>.<p>ಚುನಾವಣಾ ಅಧಿಕಾರಿಗಳ ಜತೆಗೆ ಪೂರ್ವನಿಯೋಜಿತ ಸಭೆಗಾಗಿ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ಹಾಗೂ ಇತರೆ ಶಾಸಕರು ಕಚೇರಿ ಬಳಿ ಆಗಮಿಸುತ್ತಿದ್ದಂತೆಯೇ ಬಿಎಲ್ಒ ಸಮಿತಿ ಸದಸ್ಯರು ಪ್ರತಿಭಟನೆ ತೀವ್ರಗೊಳಿಸಿ, ಬ್ಯಾರಿಕೇಡ್ಗಳನ್ನು ದಾಟಲು ಪ್ರಯತ್ನಿಸಿದ್ದಾರೆ. </p>.<p class="title">ಅಧಿಕಾರಿ ಭೇಟಿಯ ಕಾರಣಕ್ಕೆ ಕಚೇರಿ ಪ್ರದೇಶದಲ್ಲಿ ಪೊಲೀಸರು ಪ್ರವೇಶ ನಿರ್ಬಂಧಿಸಿದ್ದರೂ ಸಮಿತಿಯ ಸದಸ್ಯರು ಬ್ಯಾರಿಕೇಡ್ಗಳನ್ನು ಮುರಿದು, ಬಿಜೆಪಿ ನಿಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.</p>.<p class="title">ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದ್ದು, ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಪರಿಸ್ಥಿತಿ ಕೈಮೀರದಂತೆ ಭದ್ರತಾ ಸಿಬ್ಬಂದಿ ಜಾಗ್ರತೆ ವಹಿಸಿದ್ದಾರೆ.</p>.<p class="title">ತೀವ್ರ ಗದ್ದಲದ ನಡುವೆಯೂ ಅಧಿಕಾರಿ ನೇತೃತ್ವದ ಬಿಜೆಪಿ ನಿಯೋಗವು ಸಿಇಒ ಕಚೇರಿ ಪ್ರವೇಶಿಸಿ, ಯಾವುದೇ ಅಡೆತಡೆ ಇಲ್ಲದೆ ಸಭೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p class="title">ಈ ಪ್ರತಿಭಟನೆಯು ರಾಜಕೀಯ ಪ್ರೇರಿತವಾದುದು. ಸಿಇಒ ಕಚೇರಿಗೆ ಬಿಜೆಪಿ ನಿಯೋಗ ಭೇಟಿ ನೀಡುವುದನ್ನು ತಡೆಯಲೆಂದೇ ಈ ಪ್ರತಿಭಟನೆ ತೀವ್ರಗೊಳಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.</p>.<p>ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕೆಲಸಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಮೇಲೆ ಹೆಚ್ಚಿನ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿ ಬಿಎಲ್ಒ ಸಮಿತಿ ಈ ಪ್ರತಿಭಟನೆ ನಡೆಸುತ್ತಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>