<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಯೊಬ್ಬರು (ಬಿಎಲ್ಒ) ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯದ (ಎಸ್ಐಆರ್) ಒತ್ತಡವೇ ಅವರ ಆತ್ಮಹತ್ಯೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.</p>.ಕೇರಳ | ಸಾರ್ವಜನಿಕವಾಗಿ ನಗ್ನತೆ ಪ್ರದರ್ಶನ: SIRನಿಂದ ಬಿಎಲ್ಒ ತೆರವುಗೊಳಿಸಿ ಕ್ರಮ.ಬಿಎಲ್ಒ ಆತ್ಮಹತ್ಯೆ ಬಗ್ಗೆ ಮಮತಾ ಕಳವಳ: ವಿವರವಾಗಿ ಪರಿಶೀಲಿಸಿ; ಬಂಗಾಳ ರಾಜ್ಯಪಾಲ.<p>ಹಮೀಮುಲ್ ಇಸ್ಲಾಂ (47) ಮೃತರು. ಅವರು ಬಾಲಕರ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಇದರ ಜೊತೆಗೆ ಬಿಎಲ್ಒ ಕರ್ತವ್ಯವನ್ನು ನಿಭಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ರಾಣಿತಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶನಿವಾರ ಬೆಳಿಗ್ಗೆ ಶಾಲೆಗೆ ತೆರಳಿದ ಇಸ್ಲಾಂ, ಮಧ್ಯಾಹ್ನ ಮನೆಗೆ ಹಿಂತಿರುಗದ ಕಾರಣ ತೀವ್ರ ಹುಡುಕಾಟ ನಡೆಸಲಾಯಿತು. ಬಳಿಕ ಶಾಲೆಯ ಅವರಣದೊಳಗಿನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಶನಿವಾರ ರಾತ್ರಿ ಪತ್ತೆಯಾಗಿದೆ. </p><p>ಈ ಎರಡೂ ಜವಾಬ್ದಾರಿಗಳಿಂದಾಗಿ ಹಮೀಮುಲ್ ಇಸ್ಲಾಂ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಎಸ್ಐಆರ್ನಿಂದ ಹೆಚ್ಚಿನ ಒತ್ತಡ ಉಂಟಾಗಿತ್ತು ಎಂದು ಸಹೋದರ ಆರೋಪಿಸಿದ್ದಾರೆ. </p><p>ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಯೊಬ್ಬರು (ಬಿಎಲ್ಒ) ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯದ (ಎಸ್ಐಆರ್) ಒತ್ತಡವೇ ಅವರ ಆತ್ಮಹತ್ಯೆಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.</p>.ಕೇರಳ | ಸಾರ್ವಜನಿಕವಾಗಿ ನಗ್ನತೆ ಪ್ರದರ್ಶನ: SIRನಿಂದ ಬಿಎಲ್ಒ ತೆರವುಗೊಳಿಸಿ ಕ್ರಮ.ಬಿಎಲ್ಒ ಆತ್ಮಹತ್ಯೆ ಬಗ್ಗೆ ಮಮತಾ ಕಳವಳ: ವಿವರವಾಗಿ ಪರಿಶೀಲಿಸಿ; ಬಂಗಾಳ ರಾಜ್ಯಪಾಲ.<p>ಹಮೀಮುಲ್ ಇಸ್ಲಾಂ (47) ಮೃತರು. ಅವರು ಬಾಲಕರ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಇದರ ಜೊತೆಗೆ ಬಿಎಲ್ಒ ಕರ್ತವ್ಯವನ್ನು ನಿಭಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>ರಾಣಿತಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶನಿವಾರ ಬೆಳಿಗ್ಗೆ ಶಾಲೆಗೆ ತೆರಳಿದ ಇಸ್ಲಾಂ, ಮಧ್ಯಾಹ್ನ ಮನೆಗೆ ಹಿಂತಿರುಗದ ಕಾರಣ ತೀವ್ರ ಹುಡುಕಾಟ ನಡೆಸಲಾಯಿತು. ಬಳಿಕ ಶಾಲೆಯ ಅವರಣದೊಳಗಿನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಶನಿವಾರ ರಾತ್ರಿ ಪತ್ತೆಯಾಗಿದೆ. </p><p>ಈ ಎರಡೂ ಜವಾಬ್ದಾರಿಗಳಿಂದಾಗಿ ಹಮೀಮುಲ್ ಇಸ್ಲಾಂ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಎಸ್ಐಆರ್ನಿಂದ ಹೆಚ್ಚಿನ ಒತ್ತಡ ಉಂಟಾಗಿತ್ತು ಎಂದು ಸಹೋದರ ಆರೋಪಿಸಿದ್ದಾರೆ. </p><p>ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>