<p><strong>ಕೋಲ್ಕತ್ತ (ಪಿಟಿಐ):</strong> ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು, ಸೋಮವಾರ ನಡೆದ ಮೊದಲ ಸಂಪುಟ ಸಭೆಯಲ್ಲಿ ಇಮಾಮ್ಗಳು ಹಾಗೂ ಅರ್ಚಕರಿಗೆ ನೀಡುತ್ತಿದ್ದ ಗೌರವಧನ ಸ್ಥಗಿತಗೊಳಿಸುವುದೂ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.</p><p>ಧರ್ಮಾಧಾರಿತ ಗುಂಪುಗಳಿಗೆ ನೀಡುತ್ತಿದ್ದ ನೆರವು ಯೋಜನೆಯನ್ನು ಜೂನ್ನಿಂದ ಕೈಬಿಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಇಮಾಮ್ಗಳು ಹಾಗೂ ಅರ್ಚಕರಿಗೆ ಸಿಗುತ್ತಿದ್ದ ಗೌರವಧನ ಸ್ಥಗಿತಗೊಳ್ಳಲಿದೆ.</p><p>ಮಮತಾ ಬ್ಯಾನರ್ಜಿ ನೇತೃತ್ವದ ಈ ಹಿಂದಿನ ಸರ್ಕಾರ, ನೋಂದಾಯಿತ ಮಸೀದಿಗಳ ಇಮಾಮ್ಗಳಿಗೆ ತಿಂಗಳಿಗೆ ₹3,000 ಮತ್ತು ಪುರೋಹಿತರಿಗೆ ತಿಂಗಳಿಗೆ ₹2,000 ಗೌರವಧನ ನೀಡುತ್ತಿತ್ತು.</p><p>ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವೆ ಅಗ್ನಿಮಿತ್ರ ಪೌಲ್ ಅವರು, ಮಹಿಳೆಯರಿಗೆ ಜೂನ್ 1ರಿಂದ ಪ್ರತಿ ತಿಂಗಳು ₹3,000 ನೆರವು ನೀಡುವ ‘ಅನ್ನಪೂರ್ಣ’ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ’ ಎಂದು ತಿಳಿಸಿದರು.</p><p>‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿರುವ ಮತ್ತು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ನ್ಯಾಯಮಂಡಳಿಗೆ ಮನವಿ ಮಾಡಿರುವ ಮಹಿಳೆಯರೂ ‘ಅನ್ನಪೂರ್ಣ’ ಯೋಜನೆಯ ಅನುಕೂಲವನ್ನು ಪಡೆಯಲಿದ್ದಾರೆ’ ಎಂದು ತಿಳಿಸಿದರು.</p><p>ಮಹಿಳೆಯರು ರಾಜ್ಯದ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳಿಗಾಗಿ 7ನೇ ವೇತನ ಆಯೋಗ ರಚನೆ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ ಎಂದರು.</p><p>ಕಲ್ಕತ್ತ ಹೈಕೋರ್ಟ್ ಆದೇಶದ ಅನುಸಾರ ಅಸ್ತಿತ್ವದಲ್ಲಿರುವ ರಾಜ್ಯ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯನ್ನು ರದ್ದು ಮಾಡಲು ಮತ್ತು ಮೀಸಲಾತಿ ಅರ್ಹತೆ ನಿರ್ಧರಿಸುವುದಕ್ಕಾಗಿ ತನಿಖಾ ಸಮಿತಿ ರಚಿಸಲು ಸಂಪುಟ ನಿರ್ಧರಿಸಿದೆ. ಅಸ್ತಿತ್ವದಲ್ಲಿರುವ ಯಾವುದೇ ವಿದ್ಯಾರ್ಥಿ ವೇತನ ಯೋಜನೆಗಳನ್ನು ಕೈಬಿಡುವುದಿಲ್ಲ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ (ಪಿಟಿಐ):</strong> ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು, ಸೋಮವಾರ ನಡೆದ ಮೊದಲ ಸಂಪುಟ ಸಭೆಯಲ್ಲಿ ಇಮಾಮ್ಗಳು ಹಾಗೂ ಅರ್ಚಕರಿಗೆ ನೀಡುತ್ತಿದ್ದ ಗೌರವಧನ ಸ್ಥಗಿತಗೊಳಿಸುವುದೂ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.</p><p>ಧರ್ಮಾಧಾರಿತ ಗುಂಪುಗಳಿಗೆ ನೀಡುತ್ತಿದ್ದ ನೆರವು ಯೋಜನೆಯನ್ನು ಜೂನ್ನಿಂದ ಕೈಬಿಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಇಮಾಮ್ಗಳು ಹಾಗೂ ಅರ್ಚಕರಿಗೆ ಸಿಗುತ್ತಿದ್ದ ಗೌರವಧನ ಸ್ಥಗಿತಗೊಳ್ಳಲಿದೆ.</p><p>ಮಮತಾ ಬ್ಯಾನರ್ಜಿ ನೇತೃತ್ವದ ಈ ಹಿಂದಿನ ಸರ್ಕಾರ, ನೋಂದಾಯಿತ ಮಸೀದಿಗಳ ಇಮಾಮ್ಗಳಿಗೆ ತಿಂಗಳಿಗೆ ₹3,000 ಮತ್ತು ಪುರೋಹಿತರಿಗೆ ತಿಂಗಳಿಗೆ ₹2,000 ಗೌರವಧನ ನೀಡುತ್ತಿತ್ತು.</p><p>ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವೆ ಅಗ್ನಿಮಿತ್ರ ಪೌಲ್ ಅವರು, ಮಹಿಳೆಯರಿಗೆ ಜೂನ್ 1ರಿಂದ ಪ್ರತಿ ತಿಂಗಳು ₹3,000 ನೆರವು ನೀಡುವ ‘ಅನ್ನಪೂರ್ಣ’ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ’ ಎಂದು ತಿಳಿಸಿದರು.</p><p>‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿರುವ ಮತ್ತು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ನ್ಯಾಯಮಂಡಳಿಗೆ ಮನವಿ ಮಾಡಿರುವ ಮಹಿಳೆಯರೂ ‘ಅನ್ನಪೂರ್ಣ’ ಯೋಜನೆಯ ಅನುಕೂಲವನ್ನು ಪಡೆಯಲಿದ್ದಾರೆ’ ಎಂದು ತಿಳಿಸಿದರು.</p><p>ಮಹಿಳೆಯರು ರಾಜ್ಯದ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳಿಗಾಗಿ 7ನೇ ವೇತನ ಆಯೋಗ ರಚನೆ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ ಎಂದರು.</p><p>ಕಲ್ಕತ್ತ ಹೈಕೋರ್ಟ್ ಆದೇಶದ ಅನುಸಾರ ಅಸ್ತಿತ್ವದಲ್ಲಿರುವ ರಾಜ್ಯ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯನ್ನು ರದ್ದು ಮಾಡಲು ಮತ್ತು ಮೀಸಲಾತಿ ಅರ್ಹತೆ ನಿರ್ಧರಿಸುವುದಕ್ಕಾಗಿ ತನಿಖಾ ಸಮಿತಿ ರಚಿಸಲು ಸಂಪುಟ ನಿರ್ಧರಿಸಿದೆ. ಅಸ್ತಿತ್ವದಲ್ಲಿರುವ ಯಾವುದೇ ವಿದ್ಯಾರ್ಥಿ ವೇತನ ಯೋಜನೆಗಳನ್ನು ಕೈಬಿಡುವುದಿಲ್ಲ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>