<p><strong>ನಂದಿಗ್ರಾಮ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಠಾಕೂರ್ ಚೌಕ್ನಲ್ಲಿ ಸೋಮವಾರ ಪಾದಯಾತ್ರೆ ನಡೆಸಿದ್ದಾರೆ.</p>.<p>ಗಾಲಿ ಕುರ್ಚಿಯಲ್ಲಿ ಕುಳಿತುಕೊಂಡು ಬೆಂಬಲಿಗರ ಜತೆ ಮಮತಾ ಪಾದಯಾತ್ರೆಯಲ್ಲಿ ಭಾಗವಹಿಸಿದ ವಿಡಿಯೊವನ್ನು ‘ಎಎನ್ಐ’ ಟ್ವೀಟ್ ಮಾಡಿದೆ.</p>.<p>ಮಾರ್ಚ್ 10ರಂದು ನಾಮಪತ್ರ ಸಲ್ಲಿಸಿ ಹಿಂತಿರುಗುವ ಸಂದರ್ಭ ಅಪರಿಚಿತರು ತಳ್ಳಿದ್ದರಿಂದ ಮಮತಾ ಕಾಲಿಗೆ ಗಾಯವಾಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಳಿಕ ಬಿಡುಗಡೆಯಾಗಿದ್ದರು.</p>.<p><strong>ಓದಿ:</strong><a href="https://www.prajavani.net/india-news/mamata-banerjee-injured-says-pushed-by-5-men-812200.html" target="_blank">ತಳ್ಳಿದ ಅಪರಿಚಿತರು: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲಗಾಲಿಗೆ ಗಾಯ</a></p>.<p>ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಏಪ್ರಿಲ್ 1ರಂದು ನಡೆಯಲಿದೆ. ಇದರಲ್ಲಿ ನಂದಿಗ್ರಾಮ ಕ್ಷೇತ್ರವೂ ಸೇರಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿ ಆ ಪಕ್ಷದಿಂದ ಕಣಕ್ಕಿಳಿದಿರುವ ಸುವೇಂದು ಅಧಿಕಾರಿ ಅವರು ನಂದಿಗ್ರಾಮದಲ್ಲಿ ಮಮತಾ ಪ್ರತಿಸ್ಪರ್ಧಿಯಾಗಿದ್ದಾರೆ. ಸುವೇಂದು ಅಧಿಕಾರಿ ಅವರ ಹಾಲಿ ಕ್ಷೇತ್ರವೂ ಆಗಿದೆ ನಂದಿಗ್ರಾಮ. ಹೀಗಾಗಿ ಎರಡೂ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂದಿಗ್ರಾಮ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಠಾಕೂರ್ ಚೌಕ್ನಲ್ಲಿ ಸೋಮವಾರ ಪಾದಯಾತ್ರೆ ನಡೆಸಿದ್ದಾರೆ.</p>.<p>ಗಾಲಿ ಕುರ್ಚಿಯಲ್ಲಿ ಕುಳಿತುಕೊಂಡು ಬೆಂಬಲಿಗರ ಜತೆ ಮಮತಾ ಪಾದಯಾತ್ರೆಯಲ್ಲಿ ಭಾಗವಹಿಸಿದ ವಿಡಿಯೊವನ್ನು ‘ಎಎನ್ಐ’ ಟ್ವೀಟ್ ಮಾಡಿದೆ.</p>.<p>ಮಾರ್ಚ್ 10ರಂದು ನಾಮಪತ್ರ ಸಲ್ಲಿಸಿ ಹಿಂತಿರುಗುವ ಸಂದರ್ಭ ಅಪರಿಚಿತರು ತಳ್ಳಿದ್ದರಿಂದ ಮಮತಾ ಕಾಲಿಗೆ ಗಾಯವಾಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಳಿಕ ಬಿಡುಗಡೆಯಾಗಿದ್ದರು.</p>.<p><strong>ಓದಿ:</strong><a href="https://www.prajavani.net/india-news/mamata-banerjee-injured-says-pushed-by-5-men-812200.html" target="_blank">ತಳ್ಳಿದ ಅಪರಿಚಿತರು: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲಗಾಲಿಗೆ ಗಾಯ</a></p>.<p>ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಏಪ್ರಿಲ್ 1ರಂದು ನಡೆಯಲಿದೆ. ಇದರಲ್ಲಿ ನಂದಿಗ್ರಾಮ ಕ್ಷೇತ್ರವೂ ಸೇರಿದೆ. ಟಿಎಂಸಿ ತೊರೆದು ಬಿಜೆಪಿ ಸೇರಿ ಆ ಪಕ್ಷದಿಂದ ಕಣಕ್ಕಿಳಿದಿರುವ ಸುವೇಂದು ಅಧಿಕಾರಿ ಅವರು ನಂದಿಗ್ರಾಮದಲ್ಲಿ ಮಮತಾ ಪ್ರತಿಸ್ಪರ್ಧಿಯಾಗಿದ್ದಾರೆ. ಸುವೇಂದು ಅಧಿಕಾರಿ ಅವರ ಹಾಲಿ ಕ್ಷೇತ್ರವೂ ಆಗಿದೆ ನಂದಿಗ್ರಾಮ. ಹೀಗಾಗಿ ಎರಡೂ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>