<p><strong>ಕೋಲ್ಕತ್ತ: </strong>ಬಿರ್ಭೂಮ್ನಲ್ಲಿನ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸತ್ಯಶೋಧನಾ ಸಮಿತಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಸಲ್ಲಿಸಿರುವ ವರದಿಯಿಂದ ಸಿಬಿಐ ತನಿಖೆಗೆ ಅಡ್ಡಿಯಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ವರದಿಯಲ್ಲಿ ಬಿರ್ಭೂಮ್ನ ಟಿಎಂಸಿ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಇದು ಬಿಜೆಪಿಯ ಪ್ರತೀಕಾರದ ಮನೋಭಾವವನ್ನು ತೋರಿಸುತ್ತದೆ’ ಎಂದು ಮಮತಾ ವಾಗ್ದಾಳಿ ನಡೆಸಿದ್ದಾರೆ.</p>.<p>ಬಿಜೆಪಿಯವರು ವರದಿಯಲ್ಲಿ ನಮ್ಮ ಪಕ್ಷದ (ಟಿಎಂಸಿ) ಜಿಲ್ಲಾಧ್ಯಕ್ಷರ ಹೆಸರನ್ನು ಉಲ್ಲೇಖಿಸಿದ್ದಾರೆ. ಇದು ಪಕ್ಷಪಾತ ಮತ್ತು ಸೇಡಿನ ವರ್ತನೆಯಾಗಿದೆ. ಅನುಬ್ರತಾ ಮೊಂಡಲ್ ಅವರನ್ನು ಬಂಧಿಸಬೇಕು ಎಂದು ಬಿಜೆಪಿಯವರು ಸಂಚು ರೂಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.</p>.<p>ಓದಿ...<a href="https://www.prajavani.net/india-news/calcutta-high-court-directed-to-cbi-takes-over-probe-into-birbhum-killings-bengal-politics-heat-up-922772.html" target="_blank">ಸಜೀವ ದಹನ ಪ್ರಕರಣದ ತನಿಖೆ ಸಿಬಿಐಗೆ: ಕಲ್ಕತ್ತ ಹೈಕೋರ್ಟ್ ಆದೇಶ</a></p>.<p>ಪ್ರಕರಣ ಕುರಿತು ಬಿಜೆಪಿ ಸಲ್ಲಿಸಿರುವ ವರದಿಯಿಂದಾಗಿ ಸಿಬಿಐ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದಂತೆ ಆಗುತ್ತದೆ. ಬಿಜೆಪಿಯ ಈ ಧೋರಣೆಯನ್ನು ನಾನು ಖಂಡಿಸುತ್ತೇನೆ’ ಎಂದು ಹೇಳಿದ್ದಾರೆ.</p>.<p>ಸಿಬಿಐ ತನಿಖೆಯಲ್ಲಿ ಯಾವುದೇ ರಾಜಕೀಯ ಪಕ್ಷವೂ ಹಸ್ತಕ್ಷೇಪ ಮಾಡಬಾರದು ಎಂದು ಅವರು ತಿಳಿಸಿದ್ದಾರೆ.</p>.<p>ಮಾರ್ಚ್ 22ರಂದು ಬಿರ್ಭೂಮ್ ಜಿಲ್ಲೆಯ ರಾಮ್ಪುರಹಾಟ್ನ ಟಿಎಂಸಿ ಪಂಚಾಯಿತಿ ಸದಸ್ಯನ ಹತ್ಯೆ ನಡೆದಿತ್ತು. ಅದರ ಬೆನ್ನಲ್ಲೇ ಪಕ್ಕದ ಬೋಗ್ತುಇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕೃತ್ಯದಲ್ಲಿ 9 ಜನರು ಜೀವಂತವಾಗಿ ಸುಟ್ಟುಹಾಕಲಾಗಿತ್ತು. ಗಾಯಗೊಂಡಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.</p>.<p>ಕಲ್ಕತ್ತ ಹೈಕೋರ್ಟ್ನ ಆದೇಶದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಎಸ್ಐಟಿ ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿತ್ತು.</p>.<p>ಓದಿ...<a href="https://www.prajavani.net/india-news/birbhum-victims-badly-beaten-up-before-being-burnt-alive-autopsy-report-922254.html" itemprop="url" target="_blank">Birbhum Violence: ಸಜೀವ ದಹನಕ್ಕೂ ಮುನ್ನ ಮಾರಣಾಂತಿಕ ಹಲ್ಲೆ!</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಬಿರ್ಭೂಮ್ನಲ್ಲಿನ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಸತ್ಯಶೋಧನಾ ಸಮಿತಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಸಲ್ಲಿಸಿರುವ ವರದಿಯಿಂದ ಸಿಬಿಐ ತನಿಖೆಗೆ ಅಡ್ಡಿಯಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p>.<p>ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ವರದಿಯಲ್ಲಿ ಬಿರ್ಭೂಮ್ನ ಟಿಎಂಸಿ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರ ಹೆಸರನ್ನು ಉಲ್ಲೇಖಿಸಲಾಗಿದೆ. ಇದು ಬಿಜೆಪಿಯ ಪ್ರತೀಕಾರದ ಮನೋಭಾವವನ್ನು ತೋರಿಸುತ್ತದೆ’ ಎಂದು ಮಮತಾ ವಾಗ್ದಾಳಿ ನಡೆಸಿದ್ದಾರೆ.</p>.<p>ಬಿಜೆಪಿಯವರು ವರದಿಯಲ್ಲಿ ನಮ್ಮ ಪಕ್ಷದ (ಟಿಎಂಸಿ) ಜಿಲ್ಲಾಧ್ಯಕ್ಷರ ಹೆಸರನ್ನು ಉಲ್ಲೇಖಿಸಿದ್ದಾರೆ. ಇದು ಪಕ್ಷಪಾತ ಮತ್ತು ಸೇಡಿನ ವರ್ತನೆಯಾಗಿದೆ. ಅನುಬ್ರತಾ ಮೊಂಡಲ್ ಅವರನ್ನು ಬಂಧಿಸಬೇಕು ಎಂದು ಬಿಜೆಪಿಯವರು ಸಂಚು ರೂಪಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.</p>.<p>ಓದಿ...<a href="https://www.prajavani.net/india-news/calcutta-high-court-directed-to-cbi-takes-over-probe-into-birbhum-killings-bengal-politics-heat-up-922772.html" target="_blank">ಸಜೀವ ದಹನ ಪ್ರಕರಣದ ತನಿಖೆ ಸಿಬಿಐಗೆ: ಕಲ್ಕತ್ತ ಹೈಕೋರ್ಟ್ ಆದೇಶ</a></p>.<p>ಪ್ರಕರಣ ಕುರಿತು ಬಿಜೆಪಿ ಸಲ್ಲಿಸಿರುವ ವರದಿಯಿಂದಾಗಿ ಸಿಬಿಐ ತನಿಖೆಯಲ್ಲಿ ಹಸ್ತಕ್ಷೇಪ ಮಾಡಿದಂತೆ ಆಗುತ್ತದೆ. ಬಿಜೆಪಿಯ ಈ ಧೋರಣೆಯನ್ನು ನಾನು ಖಂಡಿಸುತ್ತೇನೆ’ ಎಂದು ಹೇಳಿದ್ದಾರೆ.</p>.<p>ಸಿಬಿಐ ತನಿಖೆಯಲ್ಲಿ ಯಾವುದೇ ರಾಜಕೀಯ ಪಕ್ಷವೂ ಹಸ್ತಕ್ಷೇಪ ಮಾಡಬಾರದು ಎಂದು ಅವರು ತಿಳಿಸಿದ್ದಾರೆ.</p>.<p>ಮಾರ್ಚ್ 22ರಂದು ಬಿರ್ಭೂಮ್ ಜಿಲ್ಲೆಯ ರಾಮ್ಪುರಹಾಟ್ನ ಟಿಎಂಸಿ ಪಂಚಾಯಿತಿ ಸದಸ್ಯನ ಹತ್ಯೆ ನಡೆದಿತ್ತು. ಅದರ ಬೆನ್ನಲ್ಲೇ ಪಕ್ಕದ ಬೋಗ್ತುಇ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕೃತ್ಯದಲ್ಲಿ 9 ಜನರು ಜೀವಂತವಾಗಿ ಸುಟ್ಟುಹಾಕಲಾಗಿತ್ತು. ಗಾಯಗೊಂಡಿದ್ದ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.</p>.<p>ಕಲ್ಕತ್ತ ಹೈಕೋರ್ಟ್ನ ಆದೇಶದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಕರಣದ ತನಿಖೆ ನಡೆಸುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರ ರಚಿಸಿದ್ದ ಎಸ್ಐಟಿ ಈ ಹಿಂದೆ ಪ್ರಕರಣದ ತನಿಖೆ ನಡೆಸುತ್ತಿತ್ತು.</p>.<p>ಓದಿ...<a href="https://www.prajavani.net/india-news/birbhum-victims-badly-beaten-up-before-being-burnt-alive-autopsy-report-922254.html" itemprop="url" target="_blank">Birbhum Violence: ಸಜೀವ ದಹನಕ್ಕೂ ಮುನ್ನ ಮಾರಣಾಂತಿಕ ಹಲ್ಲೆ!</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>