<p>ಚುಣಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಕಾಂಗ್ರೆಸ್ ಘಟಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.</p>.ಮತಗಳ್ಳತನವನ್ನು ಮುಚ್ಚಿ ಹಾಕಲು ಎಸ್ಐಆರ್: ರಾಹುಲ್ ಗಾಂಧಿ ಆರೋಪ.<p>ಬಿಹಾರ ಎಸ್ಐಆರ್ ಬಗ್ಗೆ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪೀಠದ ಮುಂದೆ ಈ ಅರ್ಜಿಯೂ ಬರಲಿದೆ.</p><p>ಬಿಹಾರ ಎಸ್ಐಆರ್ನ ವಿಚಾರಣೆ ಮಂಗಳವಾರ ಮುಂದುವರಿಯಲಿದ್ದು, ಅದರೊಂದಿಗೆ ಈ ಅರ್ಜಿಯನ್ನೂ ವಿಚಾರಣೆ ನಡೆಸಬೇಕು ಎಂದು ಕಾಂಗ್ರೆಸ್ ಪರ ವಕೀಲ ವಿನಂತಿಸಿದ್ದಾರೆ. ಎಸ್ಐಆರ್ ಪ್ರಕ್ರಿಯೆಯಲ್ಲಿ ಲೋಪ ಇದ್ದಿದ್ದರಿಂದ ಕೋರ್ಟ್ ಅನ್ನು ಸಮೀಪಿಸಬೇಕಾಯಿತು ಎಂದು ಅವರು ತಿಳಿಸಿದ್ದಾರೆ.</p><p>‘ನಮ್ಮ ಪೀಠದಲ್ಲಿಯೇ ವಿಚಾರಣೆ ನಡೆಯಲಿದೆಯೇ ಎನ್ನುವುದನ್ನು ತೀರ್ಮಾನ ಮಾಡುವುದು ಸಿಜೆಐಗೆ ಬಿಟ್ಟಿದ್ದು’ ಎಂದು ಪೀಠ ಹೇಳಿತು. ಬಿಹಾರ ಎಸ್ಐಆರ್ನೊಂದಿಗೆ ಅದೇ ರೀತಿಯ ಹಲವು ಅರ್ಜಿಗಳು ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬರಲಿದೆ ಎಂದು ಕಾಂಗ್ರೆಸ್ ಪರ ವಕೀಲರು ಈ ವೇಳೆ ಕೋರ್ಟ್ನ ಗಮನಕ್ಕೆ ತಂದರು.</p>.ಎಸ್ಐಆರ್ ನಿಯಮ ಉಲ್ಲಂಘನೆ: ಪಶ್ಚಿಮ ಬಂಗಾಳದ 8 ಬಿಎಲ್ಒಗಳಿಗೆ ಕಾರಣ ಕೇಳಿ ನೋಟಿಸ್.<p>ಬಿಹಾರ ಎಸ್ಐಆರ್ ಸಂಬಂಧಿಸಿದ ಅರ್ಜಿಗಳೊಂದಿಗೆ ಇದನ್ನೂ ವಿಚಾರಣೆ ಮಾಡಲು ಕೋರ್ಟ್ ಸಮ್ಮತಿಸಿತು.</p><p>ಎಡಿಆರ್, ನ್ಯಾಷನಲ್ ಫೆಡರೇಶನ್ ಫಾರ್ ಇಂಡಿಯನ್ ವುಮನ್ ಸೇರಿ ಹಲವು ಮಂದಿ ಸಲ್ಲಿಸಿದ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ.</p><p>ತಮಿಳುನಾಡಿನಲ್ಲಿ ಎಸ್ಐಆರ್ ನಡೆಸುವುದನ್ನು ಪ್ರಶ್ನಿಸಿ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ಈಗಾಗಲೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.</p><p><em><strong>(ಬಾರ್ ಆ್ಯಂಡ್ ಬೆಂಚ್ ವರದಿ ಆಧಿರಿಸಿ ಬರೆದ ಸುದ್ದಿ)</strong></em></p>.ಎಸ್ಐಆರ್ ವಿರುದ್ಧ ಬೀದಿಗಿಳಿದ ಮಮತಾ ಬ್ಯಾನರ್ಜಿ: 3.8 ಕಿ.ಮೀ ಕಾಲ್ನಡಿಗೆ ಜಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚುಣಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಕಾಂಗ್ರೆಸ್ ಘಟಕ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.</p>.ಮತಗಳ್ಳತನವನ್ನು ಮುಚ್ಚಿ ಹಾಕಲು ಎಸ್ಐಆರ್: ರಾಹುಲ್ ಗಾಂಧಿ ಆರೋಪ.<p>ಬಿಹಾರ ಎಸ್ಐಆರ್ ಬಗ್ಗೆ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಪೀಠದ ಮುಂದೆ ಈ ಅರ್ಜಿಯೂ ಬರಲಿದೆ.</p><p>ಬಿಹಾರ ಎಸ್ಐಆರ್ನ ವಿಚಾರಣೆ ಮಂಗಳವಾರ ಮುಂದುವರಿಯಲಿದ್ದು, ಅದರೊಂದಿಗೆ ಈ ಅರ್ಜಿಯನ್ನೂ ವಿಚಾರಣೆ ನಡೆಸಬೇಕು ಎಂದು ಕಾಂಗ್ರೆಸ್ ಪರ ವಕೀಲ ವಿನಂತಿಸಿದ್ದಾರೆ. ಎಸ್ಐಆರ್ ಪ್ರಕ್ರಿಯೆಯಲ್ಲಿ ಲೋಪ ಇದ್ದಿದ್ದರಿಂದ ಕೋರ್ಟ್ ಅನ್ನು ಸಮೀಪಿಸಬೇಕಾಯಿತು ಎಂದು ಅವರು ತಿಳಿಸಿದ್ದಾರೆ.</p><p>‘ನಮ್ಮ ಪೀಠದಲ್ಲಿಯೇ ವಿಚಾರಣೆ ನಡೆಯಲಿದೆಯೇ ಎನ್ನುವುದನ್ನು ತೀರ್ಮಾನ ಮಾಡುವುದು ಸಿಜೆಐಗೆ ಬಿಟ್ಟಿದ್ದು’ ಎಂದು ಪೀಠ ಹೇಳಿತು. ಬಿಹಾರ ಎಸ್ಐಆರ್ನೊಂದಿಗೆ ಅದೇ ರೀತಿಯ ಹಲವು ಅರ್ಜಿಗಳು ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬರಲಿದೆ ಎಂದು ಕಾಂಗ್ರೆಸ್ ಪರ ವಕೀಲರು ಈ ವೇಳೆ ಕೋರ್ಟ್ನ ಗಮನಕ್ಕೆ ತಂದರು.</p>.ಎಸ್ಐಆರ್ ನಿಯಮ ಉಲ್ಲಂಘನೆ: ಪಶ್ಚಿಮ ಬಂಗಾಳದ 8 ಬಿಎಲ್ಒಗಳಿಗೆ ಕಾರಣ ಕೇಳಿ ನೋಟಿಸ್.<p>ಬಿಹಾರ ಎಸ್ಐಆರ್ ಸಂಬಂಧಿಸಿದ ಅರ್ಜಿಗಳೊಂದಿಗೆ ಇದನ್ನೂ ವಿಚಾರಣೆ ಮಾಡಲು ಕೋರ್ಟ್ ಸಮ್ಮತಿಸಿತು.</p><p>ಎಡಿಆರ್, ನ್ಯಾಷನಲ್ ಫೆಡರೇಶನ್ ಫಾರ್ ಇಂಡಿಯನ್ ವುಮನ್ ಸೇರಿ ಹಲವು ಮಂದಿ ಸಲ್ಲಿಸಿದ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ.</p><p>ತಮಿಳುನಾಡಿನಲ್ಲಿ ಎಸ್ಐಆರ್ ನಡೆಸುವುದನ್ನು ಪ್ರಶ್ನಿಸಿ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ಈಗಾಗಲೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.</p><p><em><strong>(ಬಾರ್ ಆ್ಯಂಡ್ ಬೆಂಚ್ ವರದಿ ಆಧಿರಿಸಿ ಬರೆದ ಸುದ್ದಿ)</strong></em></p>.ಎಸ್ಐಆರ್ ವಿರುದ್ಧ ಬೀದಿಗಿಳಿದ ಮಮತಾ ಬ್ಯಾನರ್ಜಿ: 3.8 ಕಿ.ಮೀ ಕಾಲ್ನಡಿಗೆ ಜಾಥ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>