<p><strong>ಕೋಲ್ಕತ್ತ:</strong> ರಾಜಕೀಯ ಪಕ್ಷವೊಂದರ ಎರಡು ಬಣಗಳ ನಡುವೆ ನಡೆದ ಘರ್ಷಣೆ ತಡೆಯಲು ಪ್ರಯತ್ನಿಸುತ್ತಿದ್ದ ವೇಳೆ ಬಸಿರ್ಹತ್ ಜಿಲ್ಲಾ ಪೊಲೀಸ್ ಕಾನ್ಸ್ಟೆಬಲ್ವೊಬ್ಬರಿಗೆ ಗುಂಡು ತಗುಲಿ ಗಾಯವಾಗಿದೆ ಎಂದು ಹಿರಿಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p>ಶಾಕ್ಚುರಾ ಬಜಾರ್ ಸಮೀಪದ ತಾಕಿ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕನಿಷ್ಠ 41 ಜನರನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಭಾರಿ ಸಂಖ್ಯೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p>'ರಾಜಕೀಯ ಪಕ್ಷವೊಂದರ ಎರಡು ಗುಂಪಿನವರು ಸೋಮವಾರ ಕಿತ್ತಾಟ ನಡೆಸಿದ್ದರು. ಇದರಿಂದಾಗಿ ಪೊಲೀಸರು ಮಧ್ಯಪ್ರವೇಶಿಸಬೇಕಾಗಿ ಬಂದಿತ್ತು. ಈ ವೇಳೆ ಅನಂತಪುರಔಟ್ಪೋಸ್ಟ್ನ ಪೊಲೀಸ್ ಕಾನ್ಸ್ಟೆಬಲ್ ಪ್ರಭಾತ್ ಸರ್ದಾರ್ ಅವರ ಭುಜಕ್ಕೆ ಗುಂಡು ತಗುಲಿ ಗಾಯಗೊಂಡಿದ್ದಾರೆ' ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಸರ್ದಾರ್ ಅವರಿಗೆ ಬಸಿರ್ಹತ್ ಜಿಲ್ಲಾಸ್ಪತ್ರೆಯಲ್ಲಿ ತಕ್ಷಣವೇ ಚಿಕಿತ್ಸೆ ಕೊಡಿಸಿ ಬಳಿಕ ಆರ್ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆ ನಡೆಸಿ, ಗುಂಡನ್ನು ದೇಹದಿಂದ ಹೊರಗೆ ತೆಗೆಯಬೇಕಿದೆ ಎಂದೂ ವಿವರಿಸಿದ್ದಾರೆ.</p>.<p>'ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದೇವೆ. ಸದ್ಯ ಬಂಧಿಸಲ್ಪಿಟ್ಟಿರುವವರೆಲ್ಲ ಕಳೆದ ರಾತ್ರಿ ನಡೆದ ಗಲಭೆಯಲ್ಲಿ ಭಾಗವಹಿಸಿದ್ದವರೇ ಆಗಿದ್ದಾರೆ. ಅವರಿಂದ ಮಾಹಿತಿ ಪಡೆಯುತ್ತಿದ್ದೇವೆ' ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ರಾಜಕೀಯ ಪಕ್ಷವೊಂದರ ಎರಡು ಬಣಗಳ ನಡುವೆ ನಡೆದ ಘರ್ಷಣೆ ತಡೆಯಲು ಪ್ರಯತ್ನಿಸುತ್ತಿದ್ದ ವೇಳೆ ಬಸಿರ್ಹತ್ ಜಿಲ್ಲಾ ಪೊಲೀಸ್ ಕಾನ್ಸ್ಟೆಬಲ್ವೊಬ್ಬರಿಗೆ ಗುಂಡು ತಗುಲಿ ಗಾಯವಾಗಿದೆ ಎಂದು ಹಿರಿಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.</p>.<p>ಶಾಕ್ಚುರಾ ಬಜಾರ್ ಸಮೀಪದ ತಾಕಿ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕನಿಷ್ಠ 41 ಜನರನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಭಾರಿ ಸಂಖ್ಯೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.</p>.<p>'ರಾಜಕೀಯ ಪಕ್ಷವೊಂದರ ಎರಡು ಗುಂಪಿನವರು ಸೋಮವಾರ ಕಿತ್ತಾಟ ನಡೆಸಿದ್ದರು. ಇದರಿಂದಾಗಿ ಪೊಲೀಸರು ಮಧ್ಯಪ್ರವೇಶಿಸಬೇಕಾಗಿ ಬಂದಿತ್ತು. ಈ ವೇಳೆ ಅನಂತಪುರಔಟ್ಪೋಸ್ಟ್ನ ಪೊಲೀಸ್ ಕಾನ್ಸ್ಟೆಬಲ್ ಪ್ರಭಾತ್ ಸರ್ದಾರ್ ಅವರ ಭುಜಕ್ಕೆ ಗುಂಡು ತಗುಲಿ ಗಾಯಗೊಂಡಿದ್ದಾರೆ' ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಸರ್ದಾರ್ ಅವರಿಗೆ ಬಸಿರ್ಹತ್ ಜಿಲ್ಲಾಸ್ಪತ್ರೆಯಲ್ಲಿ ತಕ್ಷಣವೇ ಚಿಕಿತ್ಸೆ ಕೊಡಿಸಿ ಬಳಿಕ ಆರ್ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆ ನಡೆಸಿ, ಗುಂಡನ್ನು ದೇಹದಿಂದ ಹೊರಗೆ ತೆಗೆಯಬೇಕಿದೆ ಎಂದೂ ವಿವರಿಸಿದ್ದಾರೆ.</p>.<p>'ಪ್ರಕರಣ ಸಂಬಂಧ ತನಿಖೆ ನಡೆಸುತ್ತಿದ್ದೇವೆ. ಸದ್ಯ ಬಂಧಿಸಲ್ಪಿಟ್ಟಿರುವವರೆಲ್ಲ ಕಳೆದ ರಾತ್ರಿ ನಡೆದ ಗಲಭೆಯಲ್ಲಿ ಭಾಗವಹಿಸಿದ್ದವರೇ ಆಗಿದ್ದಾರೆ. ಅವರಿಂದ ಮಾಹಿತಿ ಪಡೆಯುತ್ತಿದ್ದೇವೆ' ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>