<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ನಿಶ್ಚಿಂತಪುರದಲ್ಲಿ ಬಾಲಕನ ಮೃತದೇಹವೊಂದು ಶನಿವಾರ ಪತ್ತೆಯಾಗಿದ್ದು, ಆತನ ಸಾವಿಗೆ ಕಾರಣ ಎನ್ನಲಾದ ದಂಪತಿಯನ್ನು ಉದ್ರಿಕ್ತ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ತಿಳಿಸಿದರು.</p>.<p>ಮೂರನೇ ತರಗತಿಯ ಬಾಲಕ ಸ್ವರ್ಣಭಾ ಮಂಡಲ್ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ. ಶನಿವಾರ ಬೆಳಿಗ್ಗೆ ಆತನ ಮೃತದೇಹವು ಆರೋಪಿಗಳ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಈ ಬೆನ್ನಲ್ಲೇ, ಬಾಲಕನ ಸಾವಿಗೆ ದಂಪತಿಯೇ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರನ್ನು ಒಳಗೊಂಡ ಉದ್ರಿಕ್ತ ಗುಂಪು ಆರೋಪಿಗಳಿಗೆ ಥಳಿಸಿ, ಅವರ ಮನೆಗೆ ಬೆಂಕಿ ಇಟ್ಟಿದೆ, ಆಸ್ತಿಗೆ ಹಾನಿ ಮಾಡಿದೆ ಎಂದು ಹೇಳಿದರು.</p>.<p>ತೀವ್ರವಾಗಿ ಗಾಯಗೊಂಡಿದ್ದ ಆರೋಪಿಗಳನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅವರು ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದರು. </p>.<p>‘ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪ್ರಕರಣ ಸಂಬಂಧ ಈವರೆಗೆ ಯಾರನ್ನೂ ಬಂಧಿಸಿಲ್ಲ, ಆದರೆ ತನಿಖೆ ಪ್ರಗತಿಯಲ್ಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯ ನಿಶ್ಚಿಂತಪುರದಲ್ಲಿ ಬಾಲಕನ ಮೃತದೇಹವೊಂದು ಶನಿವಾರ ಪತ್ತೆಯಾಗಿದ್ದು, ಆತನ ಸಾವಿಗೆ ಕಾರಣ ಎನ್ನಲಾದ ದಂಪತಿಯನ್ನು ಉದ್ರಿಕ್ತ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ತಿಳಿಸಿದರು.</p>.<p>ಮೂರನೇ ತರಗತಿಯ ಬಾಲಕ ಸ್ವರ್ಣಭಾ ಮಂಡಲ್ ಶುಕ್ರವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ. ಶನಿವಾರ ಬೆಳಿಗ್ಗೆ ಆತನ ಮೃತದೇಹವು ಆರೋಪಿಗಳ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಈ ಬೆನ್ನಲ್ಲೇ, ಬಾಲಕನ ಸಾವಿಗೆ ದಂಪತಿಯೇ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರನ್ನು ಒಳಗೊಂಡ ಉದ್ರಿಕ್ತ ಗುಂಪು ಆರೋಪಿಗಳಿಗೆ ಥಳಿಸಿ, ಅವರ ಮನೆಗೆ ಬೆಂಕಿ ಇಟ್ಟಿದೆ, ಆಸ್ತಿಗೆ ಹಾನಿ ಮಾಡಿದೆ ಎಂದು ಹೇಳಿದರು.</p>.<p>ತೀವ್ರವಾಗಿ ಗಾಯಗೊಂಡಿದ್ದ ಆರೋಪಿಗಳನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅವರು ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದರು. </p>.<p>‘ಪರಿಸ್ಥಿತಿ ನಿಯಂತ್ರಣದಲ್ಲಿದೆ. ಪ್ರಕರಣ ಸಂಬಂಧ ಈವರೆಗೆ ಯಾರನ್ನೂ ಬಂಧಿಸಿಲ್ಲ, ಆದರೆ ತನಿಖೆ ಪ್ರಗತಿಯಲ್ಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>