<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳವು ಅಪರಾಧಿಗಳಿಗೆ ಸುರಕ್ಷಿತ ಸ್ಥಳವಾಗಿದೆಯೇ ಹೊರತು ಮಹಿಳೆಯರಿಗೆ ಅಲ್ಲ ಎಂದು ಸಿಪಿಐ(ಎಂ) ಪಕ್ಷ ಭಾನುವಾರ ಕಿಡಿಕಾರಿದೆ.</p><p>ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳಾ ವಿದ್ಯಾರ್ಥಿಗಳು, ವಿಶೇಷವಾಗಿ ರಾಜ್ಯದ ಹೊರಗಿನವರು ತಡರಾತ್ರಿ ಹೊರಗೆ ಹೋಗಬಾರದು ಎಂಬ ಹೇಳಿಕೆ ನೀಡಿದ್ದಾರೆ.</p><p>ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ, ಮುಖ್ಯಮಂತ್ರಿ ಬ್ಯಾನರ್ಜಿ ಅವರೇ ತಡರಾತ್ರಿ ವೇಳೆ ಮಹಿಳೆಯರು ಹೊರಗೆ ಓಡಾಡಬೇಡಿ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬ ಸಂದೇಶ ನೀಡಿದ್ದಾರೆ. </p>.RSS ಚಟುವಟಿಕೆ ನಿಷೇಧಿಸುವಂತೆ ಪತ್ರ | ಪ್ರಿಯಾಂಕ್ ಮೂರ್ಖತನ ಪ್ರದರ್ಶನ: ವಿಜಯೇಂದ್ರ.ಮೊದಲು ಮದರಸಾಗಳನ್ನ ನಿಷೇಧ ಮಾಡಿ: ಪ್ರಿಯಾಂಕ್ ಖರ್ಗೆಗೆ ಯತ್ನಾಳ ತಿರುಗೇಟು. <p>ರಾಜ್ಯವು ಮಹಿಳೆಯರಿಗೆ ಇನ್ನು ಮುಂದೆ ಸುರಕ್ಷಿತವಾಗಿಲ್ಲ ಎಂಬುವುದಾಗಿ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ ಎಂದು ಚಕ್ರವರ್ತಿ ಹೇಳಿದ್ದಾರೆ.</p><p>ಖಾಸಗಿ ವೈದ್ಯಕೀಯ ಕಾಲೇಜಿನ ಭದ್ರತಾ ಸಿಬ್ಬಂದಿಯು ಕ್ಯಾಂಪಸ್ ಒಳಗಿನ ಭದ್ರತೆಗೆ ಜವಾಬ್ದಾರರು. ಹೊರಗೆ ಆಗುವ ಘಟನೆಗಳಲ್ಲ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಹದಗೆಟ್ಟಿದೆ ಎಂದು ಚಕ್ರವರ್ತಿ ಟೀಕಿಸಿದ್ದಾರೆ.</p><p>ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.</p><p>ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿತ್ತು. </p> .ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಆಘಾತಕಾರಿ ಎಂದ ಮಮತಾ ಬ್ಯಾನರ್ಜಿ.ಸರ್ಕಾರದ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನ ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಪತ್ರ.ಆಪರೇಷನ್ ಬ್ಲೂ ಸ್ಟಾರ್ ಮಾಡಿ, ಇಂದಿರಾ ಬೆಲೆ ತೆತ್ತರು: ಚಿದಂಬರಂ .IND vs AUS | ಪ್ರತಿಕಾ–ಸ್ಮೃತಿ ಉತ್ತಮ ಆಟ, ಆಸೀಸ್ಗೆ 331 ರನ್ ಗುರಿ ನೀಡಿದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳವು ಅಪರಾಧಿಗಳಿಗೆ ಸುರಕ್ಷಿತ ಸ್ಥಳವಾಗಿದೆಯೇ ಹೊರತು ಮಹಿಳೆಯರಿಗೆ ಅಲ್ಲ ಎಂದು ಸಿಪಿಐ(ಎಂ) ಪಕ್ಷ ಭಾನುವಾರ ಕಿಡಿಕಾರಿದೆ.</p><p>ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳಾ ವಿದ್ಯಾರ್ಥಿಗಳು, ವಿಶೇಷವಾಗಿ ರಾಜ್ಯದ ಹೊರಗಿನವರು ತಡರಾತ್ರಿ ಹೊರಗೆ ಹೋಗಬಾರದು ಎಂಬ ಹೇಳಿಕೆ ನೀಡಿದ್ದಾರೆ.</p><p>ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಪಿಐ(ಎಂ) ಕೇಂದ್ರ ಸಮಿತಿ ಸದಸ್ಯ ಸುಜನ್ ಚಕ್ರವರ್ತಿ, ಮುಖ್ಯಮಂತ್ರಿ ಬ್ಯಾನರ್ಜಿ ಅವರೇ ತಡರಾತ್ರಿ ವೇಳೆ ಮಹಿಳೆಯರು ಹೊರಗೆ ಓಡಾಡಬೇಡಿ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬ ಸಂದೇಶ ನೀಡಿದ್ದಾರೆ. </p>.RSS ಚಟುವಟಿಕೆ ನಿಷೇಧಿಸುವಂತೆ ಪತ್ರ | ಪ್ರಿಯಾಂಕ್ ಮೂರ್ಖತನ ಪ್ರದರ್ಶನ: ವಿಜಯೇಂದ್ರ.ಮೊದಲು ಮದರಸಾಗಳನ್ನ ನಿಷೇಧ ಮಾಡಿ: ಪ್ರಿಯಾಂಕ್ ಖರ್ಗೆಗೆ ಯತ್ನಾಳ ತಿರುಗೇಟು. <p>ರಾಜ್ಯವು ಮಹಿಳೆಯರಿಗೆ ಇನ್ನು ಮುಂದೆ ಸುರಕ್ಷಿತವಾಗಿಲ್ಲ ಎಂಬುವುದಾಗಿ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ ಎಂದು ಚಕ್ರವರ್ತಿ ಹೇಳಿದ್ದಾರೆ.</p><p>ಖಾಸಗಿ ವೈದ್ಯಕೀಯ ಕಾಲೇಜಿನ ಭದ್ರತಾ ಸಿಬ್ಬಂದಿಯು ಕ್ಯಾಂಪಸ್ ಒಳಗಿನ ಭದ್ರತೆಗೆ ಜವಾಬ್ದಾರರು. ಹೊರಗೆ ಆಗುವ ಘಟನೆಗಳಲ್ಲ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಹದಗೆಟ್ಟಿದೆ ಎಂದು ಚಕ್ರವರ್ತಿ ಟೀಕಿಸಿದ್ದಾರೆ.</p><p>ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು.</p><p>ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿತ್ತು. </p> .ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಆಘಾತಕಾರಿ ಎಂದ ಮಮತಾ ಬ್ಯಾನರ್ಜಿ.ಸರ್ಕಾರದ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನ ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಪತ್ರ.ಆಪರೇಷನ್ ಬ್ಲೂ ಸ್ಟಾರ್ ಮಾಡಿ, ಇಂದಿರಾ ಬೆಲೆ ತೆತ್ತರು: ಚಿದಂಬರಂ .IND vs AUS | ಪ್ರತಿಕಾ–ಸ್ಮೃತಿ ಉತ್ತಮ ಆಟ, ಆಸೀಸ್ಗೆ 331 ರನ್ ಗುರಿ ನೀಡಿದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>