ಕೋಲ್ಕತ್ತದ ಎನ್ಆರ್ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಾವಿಗೀಡಾದ ರೋಗಿಯೊಬ್ಬರ ಸಂಬಂಧಿಕರು ನಡೆಸಿದ ಹಲ್ಲೆ ಯಲ್ಲಿಇಬ್ಬರು ವೈದ್ಯರು ತೀವ್ರ ಗಾಯಗೊಂಡಿದ್ದರು. ಈ ಘಟನೆ ಬಳಿಕ, ಮಂಗಳವಾರದಿಂದ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ರಾಜಭವನದಲ್ಲಿ ವೈದ್ಯರ ತಂಡ ರಾಜ್ಯಪಾಲ ಕೇಸರಿನಾಥ ತ್ರಿಪಾಠಿ ಅವರನ್ನು ಭೇಟಿಯಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.