<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಪಶ್ಚಿಮ ವರ್ದ್ಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p><p>ಈ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರು ಕಸ್ಟಡಿಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಸಂತ್ರಸ್ತೆ ನೀಡಿದ ದೂರಿನ ಆಧಾರದಡಿ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಸಚಿವರಿಗೆ ಮುಖ್ಯಮಂತ್ರಿ ಔತಣಕೂಟ | ಕುರ್ಚಿ ಉಳಿಸಿಕೊಳ್ಳಲು ನಾಟಕವಾಡುವ ಸಿಎಂ: BJP.IRCTC Scam: ಲಾಲು ಪ್ರಸಾದ್, ರಾಬ್ಡಿ, ತೇಜಸ್ವಿ ವಿರುದ್ಧ ದೋಷಾರೋಪ ನಿಗದಿ. <p>ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿತ್ತು. </p><p>ಈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಭಾನುವಾರ ಬಂಧಿಸಲಾಗಿತ್ತು.</p><p>ಈ ಘಟನೆಯನ್ನು ಆಘಾತಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದ ಮಮತಾ ಬ್ಯಾನರ್ಜಿ ಅವರು, ತಡರಾತ್ರಿ ಮಹಿಳೆಯರು ಹೊರಗೆ ಹೋಗಬೇಡಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ನಮ್ಮ ಸರ್ಕಾರ ಇಂತಹ ಘಟನೆಗಳನ್ನು ಸಹಿಸುವುದಿಲ್ಲ ಎಂದೂ ಹೇಳಿದ್ದರು.</p>.ಆರ್ಸಿಬಿ ತೊರೆಯಲಿರುವ ವಿರಾಟ್ ಕೊಹ್ಲಿ?: ಆಕಾಶ್ ಚೋಪ್ರಾ ಹೇಳಿದ್ದೇನು?.ಭಾರತದ ವಿರುದ್ಧ ಆಡುವುದನ್ನು ನಾವು ಇಷ್ಟಪಡುತ್ತೇವೆ: ಆಸೀಸ್ ನಾಯಕ ಮಿಚೆಲ್ ಮಾರ್ಷ್. <p>ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಪ್ರತಿಕ್ರಿಯಿಸಿದ್ದು, ಬಂಧಿತ ಆರೋಪಿಗಳಲ್ಲಿ ಕನಿಷ್ಠ ಒಬ್ಬನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನಾಗಿರುತ್ತಾನೆ ಎಂದು ಆರೋಪಿಸಿದ್ದಾರೆ.</p><p>ಈ ಘಟನೆಗೆ ಸಂಬಂಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಒತ್ತಾಯಿಸಿದ್ದಾರೆ.</p><p>ಒಡಿಶಾ ರಾಜ್ಯ ಮಹಿಳಾ ಆಯೋಗದ (ಒಎಸ್ಸಿಡ್ಲ್ಯೂ) ಅಧ್ಯಕ್ಷೆ ಸೋವನಾ ಮೊಹಂತಿ ಇಂದು (ಸೋಮವಾರ) ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಸಂತ್ರಸ್ತೆಯೊಂದಿಗೆ ಮಾತನಾಡಲಿದ್ದಾರೆ. ಆಕೆಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ಆಕೆಯ ಪೋಷಕರನ್ನು ಭೇಟಿ ಮಾಡಿ, ಸ್ಥಳೀಯ ಪೊಲೀಸರೊಂದಿಗೆ ಚರ್ಚೆ ನಡೆಸಲಿದ್ದಾರೆ.</p> .ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಆಯುಷ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ.‘ನಾವು ನಮ್ಮವರು’ ಗ್ರ್ಯಾಂಡ್ ಫಿನಾಲೆ: ವಿಜೇತರಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು?.ಆಸೀಸ್ ವಿರುದ್ಧ ಸೋಲಿನ ನಡುವೆ ದಾಖಲೆ ಬರೆದ ಸ್ಮೃತಿ ಮಂದಾನ.ಆ್ಯಸಿಡಿಟಿ ತೊಂದರೆ ನಿವಾರಣೆಗೆ ತಜ್ಞರು ಶಿಫಾರಸು ಮಾಡಿದ ಮನೆಮದ್ದುಗಳಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಪಶ್ಚಿಮ ವರ್ದ್ಮಾನ್ ಜಿಲ್ಲೆಯ ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p><p>ಈ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರು ಕಸ್ಟಡಿಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಸಂತ್ರಸ್ತೆ ನೀಡಿದ ದೂರಿನ ಆಧಾರದಡಿ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಸಚಿವರಿಗೆ ಮುಖ್ಯಮಂತ್ರಿ ಔತಣಕೂಟ | ಕುರ್ಚಿ ಉಳಿಸಿಕೊಳ್ಳಲು ನಾಟಕವಾಡುವ ಸಿಎಂ: BJP.IRCTC Scam: ಲಾಲು ಪ್ರಸಾದ್, ರಾಬ್ಡಿ, ತೇಜಸ್ವಿ ವಿರುದ್ಧ ದೋಷಾರೋಪ ನಿಗದಿ. <p>ಶುಕ್ರವಾರ ರಾತ್ರಿ ಒಡಿಶಾದ ಜಲೇಶ್ವರ ಮೂಲದ ಎರಡನೇ ವರ್ಷದ ವೈದ್ಯ ವಿದ್ಯಾರ್ಥಿನಿಯನ್ನು ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿ ಅರಣ್ಯ ಪ್ರದೇಶಕ್ಕೆ ಹೊತ್ತುಕೊಂಡು ಹೋಗಿ ಅತ್ಯಾಚಾರ ಎಸಲಾಗಿತ್ತು. ದುರ್ಗಾಪುರದ ಖಾಸಗಿ ವೈದ್ಯಕೀಯ ಕಾಲೇಜು ಆವರಣದ ಹೊರಗಡೆ ಸ್ನೇಹಿತನೊಂದಿಗೆ ರಾತ್ರಿ ಊಟಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿತ್ತು. </p><p>ಈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಭಾನುವಾರ ಬಂಧಿಸಲಾಗಿತ್ತು.</p><p>ಈ ಘಟನೆಯನ್ನು ಆಘಾತಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದ ಮಮತಾ ಬ್ಯಾನರ್ಜಿ ಅವರು, ತಡರಾತ್ರಿ ಮಹಿಳೆಯರು ಹೊರಗೆ ಹೋಗಬೇಡಿ ಎಂಬ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು. ನಮ್ಮ ಸರ್ಕಾರ ಇಂತಹ ಘಟನೆಗಳನ್ನು ಸಹಿಸುವುದಿಲ್ಲ ಎಂದೂ ಹೇಳಿದ್ದರು.</p>.ಆರ್ಸಿಬಿ ತೊರೆಯಲಿರುವ ವಿರಾಟ್ ಕೊಹ್ಲಿ?: ಆಕಾಶ್ ಚೋಪ್ರಾ ಹೇಳಿದ್ದೇನು?.ಭಾರತದ ವಿರುದ್ಧ ಆಡುವುದನ್ನು ನಾವು ಇಷ್ಟಪಡುತ್ತೇವೆ: ಆಸೀಸ್ ನಾಯಕ ಮಿಚೆಲ್ ಮಾರ್ಷ್. <p>ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಪ್ರತಿಕ್ರಿಯಿಸಿದ್ದು, ಬಂಧಿತ ಆರೋಪಿಗಳಲ್ಲಿ ಕನಿಷ್ಠ ಒಬ್ಬನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನಾಗಿರುತ್ತಾನೆ ಎಂದು ಆರೋಪಿಸಿದ್ದಾರೆ.</p><p>ಈ ಘಟನೆಗೆ ಸಂಬಂಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಒತ್ತಾಯಿಸಿದ್ದಾರೆ.</p><p>ಒಡಿಶಾ ರಾಜ್ಯ ಮಹಿಳಾ ಆಯೋಗದ (ಒಎಸ್ಸಿಡ್ಲ್ಯೂ) ಅಧ್ಯಕ್ಷೆ ಸೋವನಾ ಮೊಹಂತಿ ಇಂದು (ಸೋಮವಾರ) ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಸಂತ್ರಸ್ತೆಯೊಂದಿಗೆ ಮಾತನಾಡಲಿದ್ದಾರೆ. ಆಕೆಯ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ಆಕೆಯ ಪೋಷಕರನ್ನು ಭೇಟಿ ಮಾಡಿ, ಸ್ಥಳೀಯ ಪೊಲೀಸರೊಂದಿಗೆ ಚರ್ಚೆ ನಡೆಸಲಿದ್ದಾರೆ.</p> .ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: ಆಯುಷ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ.‘ನಾವು ನಮ್ಮವರು’ ಗ್ರ್ಯಾಂಡ್ ಫಿನಾಲೆ: ವಿಜೇತರಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು?.ಆಸೀಸ್ ವಿರುದ್ಧ ಸೋಲಿನ ನಡುವೆ ದಾಖಲೆ ಬರೆದ ಸ್ಮೃತಿ ಮಂದಾನ.ಆ್ಯಸಿಡಿಟಿ ತೊಂದರೆ ನಿವಾರಣೆಗೆ ತಜ್ಞರು ಶಿಫಾರಸು ಮಾಡಿದ ಮನೆಮದ್ದುಗಳಿವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>