<p>ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಪೂರ್ಣ ಪ್ರಮಾಣದ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ ಎಲ್ಲ ಎಂಟು ಹಂತಗಳ ಮತ್ತು ಅಸ್ಸಾಂನಲ್ಲಿ ಮೂರು ಹಂತಗಳಚುನಾವಣೆಗಾಗಿ ಪ್ರಚಾರ ನಡೆಸುವುದಾಗಿ ಗೌತಮ್ ಗಂಭೀರ್ಖಚಿತಪಡಿಸಿದ್ದಾರೆ.</p>.<p>ದೆಹಲಿಯ ಹೊರತಾದ ರಾಜ್ಯದಲ್ಲಿ ಗಂಭೀರ್, ಇದೇ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿದ್ದಾರೆ.</p>.<p>ಕಳೆದ ವರ್ಷ ಹರಿಯಾಣದಲ್ಲಿ ಮಾಜಿ ಹಾಕಿ ಆಟಗಾರ ಸಂದೀಪ್ ಸಿಂಗ್ ಅವರ ಪರ ಪ್ರಚಾರ ನಡೆಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/wb-assembly-polls-days-after-attack-mamata-to-conduct-roadshow-on-wheelchair-in-kolkata-today-813141.html" itemprop="url">ಪಶ್ಚಿಮ ಬಂಗಾಳ ಚುನಾವಣೆ: ವ್ಹೀಲ್ಚೇರ್ನಲ್ಲಿಯೇ ಸಿಎಂ ಮಮತಾ ಬ್ಯಾನರ್ಜಿ ರೋಡ್ಶೋ </a></p>.<p>ಬಿಜೆಪಿ ಹೊರಗಿನವರ ಪಕ್ಷವಾಗಿದ್ದು, ರಾಜ್ಯದಲ್ಲಿ ಯಾವುದೇ ಸ್ಥಾನವಿಲ್ಲ ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆಯಿಂದ ಬೇಸರಗೊಂಡಿದ್ದೇನೆ ಎಂದು ಗಂಭೀರ್ ಹೇಳಿದರು.</p>.<p>ನಾನು ಹೊರಗಿನವನು ಅಥವಾ ಬಂಗಾಳದಲ್ಲಿ ಹುಟ್ಟಿ ಬೆಳೆದಿಲ್ಲ ಎಂಬ ಭಾವನೆ ಉಂಟಾಗಿಲ್ಲ. ನಾನು ಯಾವತ್ತೂ ಬಂಗಾಳ ಕುಂಟುಬದ ಭಾಗವಾಗಿದ್ದೇನೆ ಎಂದು ಅಂದುಕೊಂಡಿದ್ದೇನೆ. ಪ್ರತಿ ಬಾರಿಯೂ ಇಲ್ಲಿಗೆ ಭೇಟಿ ನೀಡಿದಾಗ ಇಲ್ಲಿನ ಜನರು ಪ್ರೀತಿ ತೋರಿ ಆಶೀರ್ವದಿಸಿದ್ದಾರೆ ಎಂದು ಹೇಳಿದರು.</p>.<p>ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರದಲ್ಲಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಗಂಭೀರ್, ಬಾಂಬ್ ಹಾಗೂ ಬುಲೆಟ್ಗಳಿಂದ ರಾಜ್ಯದ ಭವಿಷ್ಯವನ್ನು ನಿರ್ಧರಿಸಬಾರದು ಎಂದು ಹೇಳಿದರು.</p>.<p>ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗಂಭೀರ್ ನಾಯಕತ್ವದಡಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಎರಡು ಬಾರಿ ಚಾಂಪಿಯನ್ ಪಟ್ಟಕ್ಕೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಪೂರ್ಣ ಪ್ರಮಾಣದ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.</p>.<p>ಪಶ್ಚಿಮ ಬಂಗಾಳದಲ್ಲಿ ಎಲ್ಲ ಎಂಟು ಹಂತಗಳ ಮತ್ತು ಅಸ್ಸಾಂನಲ್ಲಿ ಮೂರು ಹಂತಗಳಚುನಾವಣೆಗಾಗಿ ಪ್ರಚಾರ ನಡೆಸುವುದಾಗಿ ಗೌತಮ್ ಗಂಭೀರ್ಖಚಿತಪಡಿಸಿದ್ದಾರೆ.</p>.<p>ದೆಹಲಿಯ ಹೊರತಾದ ರಾಜ್ಯದಲ್ಲಿ ಗಂಭೀರ್, ಇದೇ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಚುನಾವಣಾ ಪ್ರಚಾರದಲ್ಲಿ ಭಾಗವಹಿಸುತ್ತಿದ್ದಾರೆ.</p>.<p>ಕಳೆದ ವರ್ಷ ಹರಿಯಾಣದಲ್ಲಿ ಮಾಜಿ ಹಾಕಿ ಆಟಗಾರ ಸಂದೀಪ್ ಸಿಂಗ್ ಅವರ ಪರ ಪ್ರಚಾರ ನಡೆಸಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/wb-assembly-polls-days-after-attack-mamata-to-conduct-roadshow-on-wheelchair-in-kolkata-today-813141.html" itemprop="url">ಪಶ್ಚಿಮ ಬಂಗಾಳ ಚುನಾವಣೆ: ವ್ಹೀಲ್ಚೇರ್ನಲ್ಲಿಯೇ ಸಿಎಂ ಮಮತಾ ಬ್ಯಾನರ್ಜಿ ರೋಡ್ಶೋ </a></p>.<p>ಬಿಜೆಪಿ ಹೊರಗಿನವರ ಪಕ್ಷವಾಗಿದ್ದು, ರಾಜ್ಯದಲ್ಲಿ ಯಾವುದೇ ಸ್ಥಾನವಿಲ್ಲ ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆಯಿಂದ ಬೇಸರಗೊಂಡಿದ್ದೇನೆ ಎಂದು ಗಂಭೀರ್ ಹೇಳಿದರು.</p>.<p>ನಾನು ಹೊರಗಿನವನು ಅಥವಾ ಬಂಗಾಳದಲ್ಲಿ ಹುಟ್ಟಿ ಬೆಳೆದಿಲ್ಲ ಎಂಬ ಭಾವನೆ ಉಂಟಾಗಿಲ್ಲ. ನಾನು ಯಾವತ್ತೂ ಬಂಗಾಳ ಕುಂಟುಬದ ಭಾಗವಾಗಿದ್ದೇನೆ ಎಂದು ಅಂದುಕೊಂಡಿದ್ದೇನೆ. ಪ್ರತಿ ಬಾರಿಯೂ ಇಲ್ಲಿಗೆ ಭೇಟಿ ನೀಡಿದಾಗ ಇಲ್ಲಿನ ಜನರು ಪ್ರೀತಿ ತೋರಿ ಆಶೀರ್ವದಿಸಿದ್ದಾರೆ ಎಂದು ಹೇಳಿದರು.</p>.<p>ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರದಲ್ಲಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಗಂಭೀರ್, ಬಾಂಬ್ ಹಾಗೂ ಬುಲೆಟ್ಗಳಿಂದ ರಾಜ್ಯದ ಭವಿಷ್ಯವನ್ನು ನಿರ್ಧರಿಸಬಾರದು ಎಂದು ಹೇಳಿದರು.</p>.<p>ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗಂಭೀರ್ ನಾಯಕತ್ವದಡಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವು ಎರಡು ಬಾರಿ ಚಾಂಪಿಯನ್ ಪಟ್ಟಕ್ಕೇರಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>