<p><strong>ಬಲ್ಲಿಯಾ (ಉ. ಪ್ರದೇಶ):</strong> ಈ ವಾರ ಕೋಲ್ಕತ್ತಗೆ ತೆರಳಿ ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವಂತೆ ರೈತರನ್ನು ಒತ್ತಾಯಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಹೇಳಿಕೆ ನೀಡಿದ್ದಾರೆ.</p>.<p>ಹಾಗಿದ್ದರೂ ತಾವು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂಬುದನ್ನು ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ. ರೈತರು ಸಂಕಷ್ಟಕ್ಕೀಡಾಗಿದ್ದು, ಅವರೊಂದಿಗೆ ಚುನಾವಣೆಯ ಬಗ್ಗೆ ಚರ್ಚಿಸಲಾಗುವುದು ಎಂದು ಟಿಕಾಯತ್ ಹೇಳಿದರು.</p>.<p>ಮಾರ್ಚ್ 13ರಂದು ನಾನು ಕೋಲ್ಕತ್ತಗೆ ತೆರಳುತ್ತೇನೆ. ರೈತರ ಹೋರಾಟ ಸಂಬಂಧ ಬಲವಾದ ಬೇಡಿಕೆ ಕೋಲ್ಕತ್ತದಿಂದ ಹೊರಬರಲಿದೆ. ನಾವು ಅಲ್ಲಿ ರೈತರೊಂದಿಗೆ ಸಮಾಲೋಚನೆ ಮಾಡಿ ಬಿಜೆಪಿಯನ್ನು ಸೋಲಿಸುವಂತೆ ಮನವಿ ಮಾಡಲಿದ್ದೇವೆ ಎಂದು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ನಲ್ಲಿ ತಿಳಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/farmers-ready-to-continue-protest-on-delhi-borders-till-modi-govt-lasts-narendra-tikait-812127.html" itemprop="url">ಮೋದಿ ಸರ್ಕಾರದ ಪೂರ್ಣಾವಧಿಯೂ ಪ್ರತಿಭಟನೆ ನಡೆಸಲು ರೈತರು ಸಿದ್ಧ: ನರೇಂದ್ರ ಟಿಕಾಯತ್ </a></p>.<p>ಬಂಗಾಳ ಭೇಟಿಯ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಟಿಕಾಯತ್, ಅಂತಹ ಯಾವುದೇ ಕಾರ್ಯಕ್ರಮಗಳಿಲ್ಲ ಎಂದು ಹೇಳಿದರು.</p>.<p>ಮಾರ್ಚ್ 27ರಿಂದ ಆರಂಭವಾಗಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಈಗಾಗಲೇ ಕರೆ ನೀಡಲಾಗಿದೆ. ಆದರೆ ರೈತರ ಒಕ್ಕೂಟ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತಿಲ್ಲ ಎಂದು ಹೇಳಿದರು.</p>.<p>ಏತನ್ಮಧ್ಯೆ ರೈತರ ಪ್ರತಿಭಟನೆ ಮುಂದುವರಿಯುತ್ತಿದ್ದು, ಸರ್ಕಾರದ ಜೊತೆ ಮಾತುಕತೆಗೆ ಸಿದ್ಧರಾಗಿದ್ದೇವೆ ಎಂದು ರಾಕೇಶ್ ಟಿಕಾಯತ್ ಪುನರುಚ್ಛರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲ್ಲಿಯಾ (ಉ. ಪ್ರದೇಶ):</strong> ಈ ವಾರ ಕೋಲ್ಕತ್ತಗೆ ತೆರಳಿ ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವಂತೆ ರೈತರನ್ನು ಒತ್ತಾಯಿಸುವುದಾಗಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಹೇಳಿಕೆ ನೀಡಿದ್ದಾರೆ.</p>.<p>ಹಾಗಿದ್ದರೂ ತಾವು ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂಬುದನ್ನು ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ. ರೈತರು ಸಂಕಷ್ಟಕ್ಕೀಡಾಗಿದ್ದು, ಅವರೊಂದಿಗೆ ಚುನಾವಣೆಯ ಬಗ್ಗೆ ಚರ್ಚಿಸಲಾಗುವುದು ಎಂದು ಟಿಕಾಯತ್ ಹೇಳಿದರು.</p>.<p>ಮಾರ್ಚ್ 13ರಂದು ನಾನು ಕೋಲ್ಕತ್ತಗೆ ತೆರಳುತ್ತೇನೆ. ರೈತರ ಹೋರಾಟ ಸಂಬಂಧ ಬಲವಾದ ಬೇಡಿಕೆ ಕೋಲ್ಕತ್ತದಿಂದ ಹೊರಬರಲಿದೆ. ನಾವು ಅಲ್ಲಿ ರೈತರೊಂದಿಗೆ ಸಮಾಲೋಚನೆ ಮಾಡಿ ಬಿಜೆಪಿಯನ್ನು ಸೋಲಿಸುವಂತೆ ಮನವಿ ಮಾಡಲಿದ್ದೇವೆ ಎಂದು ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ನಡೆದ ಕಿಸಾನ್ ಮಹಾಪಂಚಾಯತ್ನಲ್ಲಿ ತಿಳಿಸಿದರು.</p>.<p>ಇದನ್ನೂ ಓದಿ:<a href="https://www.prajavani.net/india-news/farmers-ready-to-continue-protest-on-delhi-borders-till-modi-govt-lasts-narendra-tikait-812127.html" itemprop="url">ಮೋದಿ ಸರ್ಕಾರದ ಪೂರ್ಣಾವಧಿಯೂ ಪ್ರತಿಭಟನೆ ನಡೆಸಲು ರೈತರು ಸಿದ್ಧ: ನರೇಂದ್ರ ಟಿಕಾಯತ್ </a></p>.<p>ಬಂಗಾಳ ಭೇಟಿಯ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಟಿಕಾಯತ್, ಅಂತಹ ಯಾವುದೇ ಕಾರ್ಯಕ್ರಮಗಳಿಲ್ಲ ಎಂದು ಹೇಳಿದರು.</p>.<p>ಮಾರ್ಚ್ 27ರಿಂದ ಆರಂಭವಾಗಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಈಗಾಗಲೇ ಕರೆ ನೀಡಲಾಗಿದೆ. ಆದರೆ ರೈತರ ಒಕ್ಕೂಟ ಯಾವುದೇ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತಿಲ್ಲ ಎಂದು ಹೇಳಿದರು.</p>.<p>ಏತನ್ಮಧ್ಯೆ ರೈತರ ಪ್ರತಿಭಟನೆ ಮುಂದುವರಿಯುತ್ತಿದ್ದು, ಸರ್ಕಾರದ ಜೊತೆ ಮಾತುಕತೆಗೆ ಸಿದ್ಧರಾಗಿದ್ದೇವೆ ಎಂದು ರಾಕೇಶ್ ಟಿಕಾಯತ್ ಪುನರುಚ್ಛರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>